AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೇ ಅಲೆ ಭೀತಿ; ಭೌತಿಕವಾಗಿ ಶಾಲೆ ಆರಂಭ ತಡವಾದರೆ ವಿದ್ಯಾಗಮ-2 ಆರಂಭಕ್ಕೆ ಸಿದ್ಧತೆ

ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಮಕ್ಕಳ ಕಲಿಕೆ ಅತಂತ್ರವಾಗಿದೆ. ಮಕ್ಕಳು ಶಾಲೆಯ ಮುಖವನ್ನೇ ಬರೆತಿದ್ದಾರೆ. ಈಗ ಮತ್ತೆ ಮೂರನೇ ಅಲೆಯ ಆತಂಕ ಎದುರಾಗಿದ್ದು ಮಕ್ಕಳ ನಿರಂತರ ಕಲಿಕೆಗೆ ಶಿಕ್ಷಣ ಇಲಾಖೆ ಪರ್ಯಾಯ ಮಾರ್ಗ ಕಂಡು ಕೊಂಡಿದೆ.

ಕೊರೊನಾ 3ನೇ ಅಲೆ ಭೀತಿ; ಭೌತಿಕವಾಗಿ ಶಾಲೆ ಆರಂಭ ತಡವಾದರೆ ವಿದ್ಯಾಗಮ-2 ಆರಂಭಕ್ಕೆ ಸಿದ್ಧತೆ
ಸಂಗ್ರಹ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jul 13, 2021 | 9:39 AM

ಬೆಂಗಳೂರು: ಮಹಾಮಾರಿ ಕೊರೊನಾ ಮೂರನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೂ ಮೊದಲು ವಿದ್ಯಾಗಮ-2 ಆರಂಭಿಸಲು ಚಿಂತಿಸಲಾಗುತ್ತಿದೆ. ಭೌತಿಕವಾಗಿ ಶಾಲೆ ಆರಂಭ ತಡವಾದರೆ ವಿದ್ಯಾಗಮ ಆರಂಭ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಮಕ್ಕಳ ಕಲಿಕೆ ಅತಂತ್ರವಾಗಿದೆ. ಮಕ್ಕಳು ಶಾಲೆಯ ಮುಖವನ್ನೇ ಬರೆತಿದ್ದಾರೆ. ಈಗ ಮತ್ತೆ ಮೂರನೇ ಅಲೆಯ ಆತಂಕ ಎದುರಾಗಿದ್ದು ಮಕ್ಕಳ ನಿರಂತರ ಕಲಿಕೆಗೆ ಶಿಕ್ಷಣ ಇಲಾಖೆ ಪರ್ಯಾಯ ಮಾರ್ಗ ಕಂಡು ಕೊಂಡಿದೆ. ಭೌತಿಕ ತರಗತಿ ಸಾಧ್ಯವಾಗದಿದ್ದರೆ ವಿದ್ಯಾಗಮ -2 ಯೋಜನೆಗೆ ಇಲಾಖೆ ಮುಂದಾಗಿದೆ.

ರಾಜ್ಯದಲ್ಲಿ ಶಾಲೆ ಆರಂಭ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ. ಈ ಕಾರ್ಯಪಡೆ ಶೈಕ್ಷಣಿಕ ವರ್ಷ, ಶಾಲಾ ತರಗತಿ ಹೇಗೆ ಆರಂಭಿಸಬೇಕು, ವಿದ್ಯಾಗಮ-2ರ ಬಗ್ಗೆ ಮಾಹಿತಿ ಸಂಗ್ರಹ ಮಾಡಲಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಆನ್‌ಲೈನ್ ಕ್ಲಾಸ್, ಪರ್ಯಾಯ ಶಿಕ್ಷಣ ಬಗ್ಗೆಯೂ ಈ ತಂಡ ವರದಿ ನೀಡಲಿದೆ.

ಕಳೆದ ವರ್ಷದ ಲೋಪ ದೋಷ ಸರಿಪಡಿಸಿ ಪರಿಷ್ಕೃತ ವಿದ್ಯಾಗಮ -2ಜಾರಿ ಮಾಡಲಾಗಿದೆ. ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ವಿದ್ಯಾಗಮ ಮತ್ತೆ ಶುರು ಮಾಡಲು ಇಲಾಖೆ ಮುಂದಾಗಿದೆ. ಸದ್ಯ ಮೂರನೇ ಅಲೆ ಭೀತಿ ಇರುವ ಕಾರಣ ಭೌತಿಕ ತರಗತಿ ಸಾಧ್ಯವಾಗದಿದ್ದರೆ ವಿದ್ಯಾಗಮ -2 ಯೋಜನೆಯನ್ನು ಕೈಗೊಳ್ಳಲಾಗುತ್ತೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ಶಿಕ್ಷಣ ಸಚಿವರಿಗೆ ವರದಿ ನೀಡಲಿದೆ.

ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ವಿದ್ಯಾಗಮಕ್ಕೆ ಸಿದ್ಧತೆ ನಡೆಯುತ್ತಿದ್ದು ಆಯಾ ಶಾಲೆಯ 10 ರಿಂದ 15 ಮಕ್ಕಳನ್ನ ನಿಗದಿಪಡಿಸಿ ಪಾಠ ಮಾಡಲಾಗುತ್ತೆ. 15ಕ್ಕಿಂತ ಕಡಿಮೆ ಮಕ್ಕಳನ್ನ ಗುಂಪುಗಳನ್ನಾಗಿಸಿ ಪಾಠಪ್ರವಚನ ಮಾಡಲು ಶಿಕ್ಷಕರು ತಯಾರಾಗಿದ್ದಾರೆ. ಹಳ್ಳಿಹಳ್ಳಿಗೆ ಹೋಗಿ ಮಕ್ಕಳ ಭೋದನೆಗೆ ವಿದ್ಯಾಗಮ ಸಹಾಯಕವಾಗಲಿದೆ. ಮಕ್ಕಳು ಹಾಗೂ ಶಿಕ್ಷಕರ ಸುರಕ್ಷತಾ ಎಚ್ಚರಿಕೆಯೊಂದಿಗೆ ಪಾಠ ಹೇಳಿ ಕೊಡಲಾಗುತ್ತೆ. ಕಳೆದ ಭಾರಿಯಂತೆ ಕೊರೊನಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಹರಡದಂತೆ ಎಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತೆ. ಕನಿಷ್ಠ ಕಲಿಕೆ ನೀಡುವ ದೃಷ್ಟಿಯಿಂದ ವಿದ್ಯಾಗಮ ಆರಂಭಕ್ಕೆ ಇಲಾಖೆ ಚಿಂತನೆ ನಡೆಸಿದೆ.

ಇದನ್ನೂ ಓದಿ: ಕೊರೊನಾ ಮೂರನೇ ಅಲೆ ಭೀತಿ: ನಂದಿಗಿರಿಧಾಮಕ್ಕೆ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ, ಅನಿರ್ದಿಷ್ಟಾವಧಿ ನಿಯಮ ಜಾರಿ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ