AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ಕೊರೊನಾ 2ನೇ ಅಲೆ ಜುಲೈನಲ್ಲಿ ಕಡಿಮೆಯಾಗಲಿದೆ; ಆದರೆ 3ನೇ ಅಲೆ ಯಾವಾಗ ಶುರುವಾಗಲಿದೆ ಗೊತ್ತಾ?

Corona 3rd Wave 6ರಿಂದ 8 ತಿಂಗಳ ಬಳಿಕ ಮತ್ತೆ 3ನೇ ಅಲೆ ಆರಂಭವಾಗಲಿದೆ ಎಂದು ಕೇಂದ್ರ ಸರ್ಕಾರದ ವಿಜ್ಞಾನ ಸಚಿವಾಲಯದಿಂದ ನೇಮಿಸಿದ್ದ ವಿಜ್ಞಾನಿಗಳ ಸಮಿತಿ ವರದಿ ಮಾಡಿದೆ.

ಮಹಾಮಾರಿ ಕೊರೊನಾ 2ನೇ ಅಲೆ ಜುಲೈನಲ್ಲಿ ಕಡಿಮೆಯಾಗಲಿದೆ; ಆದರೆ 3ನೇ ಅಲೆ ಯಾವಾಗ ಶುರುವಾಗಲಿದೆ ಗೊತ್ತಾ?
ಸಂಗ್ರಹ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:May 20, 2021 | 10:39 AM

Share

ದೆಹಲಿ: ಕೇಂದ್ರ ಸರ್ಕಾರದ ವಿಜ್ಞಾನ ಸಚಿವಾಲಯದಿಂದ ನೇಮಿಸಿದ್ದ ವಿಜ್ಞಾನಿಗಳ ಸಮಿತಿ ಒಂದು ಕಡೆ ಸಮಧಾನಕರ ಸುದ್ದಿ ನೀಡಿದ್ದರೆ ಅದರ ಬೆನ್ನಿಗೇ ಆತಂಕದ ಸಂಗತಿಯನ್ನೂ ಹೊರಹಾಕಿದೆ. ಪ್ರಸ್ತುತ ಎಲ್ಲರನ್ನೂ ಕಂಗೆಡಿಸಿರುವ ಕೊರೊನಾ 2ನೇ ಅಲೆ ಜುಲೈನಲ್ಲಿ ನಿಯಂತ್ರಣಕ್ಕೆ ಬರಲಿದೆಯಂತೆ. ಆದರೆ ಮಹಾಮಾರಿ 3ನೇ ಅಲೆ 6ರಿಂದ 8 ತಿಂಗಳ ಬಳಿಕ ಮತ್ತೆ ಆರಂಭವಾಗಲಿದೆ ಎಂದೂ ಎಚ್ಚರಿಕೆಯ ವರದಿ ನೀಡಿದೆ

ಮಹಾರಾಷ್ಟ್ರ, ಉತ್ತರ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಜಾರ್ಖಂಡ್, ರಾಜಸ್ಥಾನ, ಕೇರಳ, ಸಿಕ್ಕಿಂ, ಉತ್ತರಾಖಂಡ್, ಗುಜರಾತ್, ಹರಿಯಾಣ, ದೆಹಲಿ, ಗೋವಾದಲ್ಲಿ ಕೊರೊನಾ ಸೋಂಕು ಪೀಕ್‌ಗೆ ಹೋಗಿದೆ ಎಂದು ವರದಿಯಲ್ಲಿ ತಿಳಿಸಿದೆ. ಹಾಗೂ ತಮಿಳುನಾಡು, ಈಶಾನ್ಯ ಭಾಗದಲ್ಲಿ ಸೋಂಕು ಮತ್ತಷ್ಟು ಹೆಚ್ಚಾಗಲಿದೆ. ಮೇ 20-21ರೊಳಗೆ ಅಸ್ಸಾಂನಲ್ಲಿ ಗರಿಷ್ಟ ಕೇಸ್ ದಾಖಲಾಗುತ್ತೆ. ಮೇ 30ಕ್ಕೆ ಮೇಘಾಲಯದಲ್ಲೂ ಗರಿಷ್ಟ ಕೇಸ್ ದಾಖಲು‌. ಹಾಗೂ ತ್ರಿಪುರದಲ್ಲಿ ಮೇ 27ರ ವೇಳೆಗೆ ಗರಿಷ್ಟ ಕೇಸ್ ಪತ್ತೆಯಾಗುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳ ಸಮಿತಿ ವರದಿ ಮಾಡಿದೆ.

ಮೂರನೇ ಅಲೆ‌ ಅಷ್ಟಪಂದು ತೀವ್ರವಲ್ಲ; ಅದೇ ಸದ್ಯಕ್ಕೆ ಸಮಾಧಾನ

ವಿಜ್ಞಾನಿಗಳ ಪ್ರಕಾರ ಮೇ ತಿಂಗಳ ಅಂತ್ಯದ ವೇಳೆಗೆ ಭಾರತವು ಪ್ರತಿದಿನ 1.5 ಲಕ್ಷ ಪ್ರಕರಣಗಳನ್ನು ವರದಿ ಮಾಡುವ ನಿರೀಕ್ಷೆಯಿದೆ ಮತ್ತು ಜುಲೈ ಅಂತ್ಯದ ವೇಳೆಗೆ ಪ್ರಕರಣಗಳು ದಿನಕ್ಕೆ 20,000 ಸಾವಿರಕ್ಕೆ ಇಳಿಯುತ್ತವೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಕೊರೊನಾ ಮೂರನೇ ಅಲೆ 6ರಿಂದ 8 ತಿಂಗಳಲ್ಲಿ ಬರಲಿದೆ. ಮೂರನೇ ಅಲೆ ಎರಡನೇ ಅಲೆಯಷ್ಟು ತೀವ್ರವಾಗುವ ಸಾಧ್ಯತೆ ಕಡಿಮೆ ಇದ್ದು ಮೂರನೇ ಅಲೆ‌ ಬಂದರೂ ಸ್ಥಳೀಯವಾಗಿ ಹರಡಲಿದೆ ಎಂದು ವಿಜ್ಞಾನಿಗಳ ಸಮಿತಿ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ ಮುಂಜಾಗ್ರತೆ; 30 ಜಿಲ್ಲೆಗಳಲ್ಲಿ ಮಕ್ಕಳಿಗಾಗಿ ಕೊವಿಡ್ ಕೇರ್ ಸೆಂಟರ್ ಆರಂಭ: ಶಶಿಕಲಾ ಜೊಲ್ಲೆ

Published On - 10:38 am, Thu, 20 May 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು