AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆ್ಯಂಬುಲೆನ್ಸ್‌ಗಳಲ್ಲಿ ತಂದ ಶವಗಳಿಗೂ ಅಂತ್ಯಕ್ರಿಯೆ, ಮೇಡಿ ಅಗ್ರಹಾರ ಚಿತಾಗಾರದಲ್ಲಿ ಇಂದಿನಿಂದ ಮತ್ತೊಂದು ರೂಲ್ಸ್

ನಿನ್ನೆವರೆಗೆ ಕೇವಲ ಬಿಬಿಎಂಪಿ ಆ್ಯಂಬುಲೆನ್ಸ್‌ಗಳಲ್ಲಿ ತಂದ ಮೃತದೇಹಗಳಿಗೆ ಮಾತ್ರ ದಹನಕ್ಕೆ ಅವಕಾಶ ನೀಡಲಾಗುತ್ತಿತ್ತು. ಆದ್ರೆ ಇಂದಿನಿಂದ ಖಾಸಗಿ ಹಾಗೂ ಬಿಬಿಎಂಪಿ ಎರಡೂ ಆ್ಯಂಬುಲೆನ್ಸ್‌ಗಳಿಗೆ ಅವಕಾಶ ನೀಡಲಾಗಿದೆ.

ಖಾಸಗಿ ಆ್ಯಂಬುಲೆನ್ಸ್‌ಗಳಲ್ಲಿ ತಂದ ಶವಗಳಿಗೂ ಅಂತ್ಯಕ್ರಿಯೆ, ಮೇಡಿ ಅಗ್ರಹಾರ ಚಿತಾಗಾರದಲ್ಲಿ ಇಂದಿನಿಂದ ಮತ್ತೊಂದು ರೂಲ್ಸ್
ಸಂಗ್ರಹ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 27, 2021 | 11:54 AM

Share

ಬೆಂಗಳೂರು: ನಿನ್ನೆ ಖಾಸಗಿ ಆ್ಯಂಬುಲೆನ್ಸ್ನಲ್ಲಿ ಮೃತದೇಹ ತಂದಿದ್ದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗೆ ಚಿತಾಗಾರ ಸಿಬ್ಬಂದಿ ಹಿಂದೇಟು ಹಾಕಿದ್ದು ಸಿಬ್ಬಂದಿ ಹಾಗೂ ಕುಟುಂಬಸ್ಥರ ನಡುವೆ ಗಲಾಟೆ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಈಗ ಖಾಸಗಿ ಆ್ಯಂಬುಲೆನ್ಸ್‌ಗಳಲ್ಲಿ ತಂದ ಶವಗಳಿಗೂ ಅಂತ್ಯಕ್ರಿಯೆ ಮಾಡಬೇಕು ಎಂದು ಮೇಡಿ ಅಗ್ರಹಾರ ಚಿತಾಗಾರದಲ್ಲಿ ಇಂದು ಮತ್ತೊಂದು ರೂಲ್ಸ್ ಹಾಕಲಾಗಿದೆ.

ನಿನ್ನೆವರೆಗೆ ಕೇವಲ ಬಿಬಿಎಂಪಿ ಆ್ಯಂಬುಲೆನ್ಸ್‌ಗಳಲ್ಲಿ ತಂದ ಮೃತದೇಹಗಳಿಗೆ ಮಾತ್ರ ದಹನಕ್ಕೆ ಅವಕಾಶ ನೀಡಲಾಗುತ್ತಿತ್ತು. ಆದ್ರೆ ಇಂದಿನಿಂದ ಖಾಸಗಿ ಹಾಗೂ ಬಿಬಿಎಂಪಿ ಎರಡೂ ಆ್ಯಂಬುಲೆನ್ಸ್‌ಗಳಿಗೆ ಅವಕಾಶ ನೀಡಲಾಗಿದೆ. ಖಾಸಗಿ ಆ್ಯಂಬುಲೆನ್ಸ್‌ಗಳಲ್ಲಿ ಮೃತ ದೇಹ ತಂದರೂ ಅಂತ್ಯಕ್ರಿಯೆ ನಡೆಸಲಾಗುತ್ತೆ.

ನಿನ್ನೆ ಖಾಸಗಿ ಆ್ಯಂಬುಲೆನ್ಸ್‌ನಲ್ಲಿ ತಂದ ಶವಕ್ಕೆ ತಡೆ ಹಿಡಿಯಲಾಗಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದರು. ಒಂದು ಕಡೆ ಬಿಬಿಎಂಪಿ ಆ್ಯಂಬುಲೆನ್ಸ್‌ಗಳು ಎಷ್ಟು ಕಾದರೂ ಬರೋದಿಲ್ಲ. ಅಲ್ಪ-ಸ್ವಲ್ಪ ಹಣಕೊಟ್ಟು ಖಾಸಗಿ ಆ್ಯಂಬುಲೆನ್ಸ್‌ನಲ್ಲಿ ಶವ ರವಾನೆ ಮಾಡಲಾಗುತ್ತೆ. ಆದ್ರೆ ಚಿತಾಗಾರ ಸಿಬ್ಬಂದಿ ಖಾಸಗಿ ಆ್ಯಂಬುಲೆನ್ಸ್‌ನಲ್ಲಿ ಶವ ತಂದ್ರೆ ಅಂತ್ಯಕ್ರಿಯೆ ಇಲ್ಲ ಎಂದು ಹೇಳ್ತಾರೆ. ಹೀಗಾಗಿ ನಿನ್ನೆ ಇದೇ ರೀತಿ ಶವ ಸಂಸ್ಕಾರಕ್ಕೆ ಅವಕಾಶ ನೀಡದ್ದಕ್ಕೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಎರಡೂ ವಾಹನಗಳಿಗೂ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಆ್ಯಂಬುಲೆನ್ಸ್‌ನಲ್ಲಿ ತಂದರೂ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ. ಸದ್ಯ ಈಗ ಈ ಸಮಸ್ಯೆ ಬಗೆಹರಿದಿದ್ದು ಖಾಸಗಿ ಹಾಗೂ ಬಿಬಿಎಂಪಿ ಆ್ಯಂಬುಲೆನ್ಸ್‌ಗಳಲ್ಲಿ ಮೃತ ದೇಹ ತಂದರೆ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗುತ್ತೆ. ಬೆಳಗ್ಗೆ 7:30ರಿಂದ 11ಗಂಟೆಯವರೆಗೆ 5 ಕೊವಿಡ್ ಮೃತದೇಹಗಳನ್ನು ದಹನ ಮಾಡಲಾಗಿದೆ.

ಇದನ್ನೂ ಓದಿ: ಖಾಸಗಿ ಆ್ಯಂಬುಲೆನ್ಸ್ ಬಿಡಲು ಸಿಬ್ಬಂದಿ ಆಕ್ರೋಶ, ಮೃತದೇಹ ದಹನಕ್ಕೂ ಪಾಲಿಸಬೇಕು ರೂಲ್ಸ್! ಮಾರ್ಷಲ್​ಗಳ ಕಾಟ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?