ದಿನ ಕಳೆದಂತೆ ಕುಗ್ಗುತ್ತಿದೆ ಕೊರೊನಾ ಹಾವಳಿ; ರಾಜ್ಯದಲ್ಲಿಂದು 1,196 ಕೇಸ್​ ದೃಢ

ಸೋಂಕಿತರ ಪೈಕಿ 8,72,038 ಜನ ಗುಣಮುಖರಾಗಿ ಡಿಸ್ಚಾರ್ಜ್. 17,409 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದಿನ ಕಳೆದಂತೆ ಕುಗ್ಗುತ್ತಿದೆ ಕೊರೊನಾ ಹಾವಳಿ; ರಾಜ್ಯದಲ್ಲಿಂದು 1,196 ಕೇಸ್​ ದೃಢ
ಪ್ರಾತಿನಿಧಿಕ ಚಿತ್ರ
Edited By: ಸಾಧು ಶ್ರೀನಾಥ್​

Updated on: Dec 14, 2020 | 11:44 AM

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿದ್ದ ಕೊರೊನಾ ಹಾವಳಿ ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ದಿನೇದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1,196 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,01,410ಕ್ಕೇರಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ನಿಟ್ಟುಸಿರು ಬಿಡುವಂತೆ ಮಾಡಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,944 ಜನರ ಸಾವನಪ್ಪಿದ್ದಾರೆ. ಸೋಂಕಿತರ ಪೈಕಿ 8,72,038 ಜನ ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. 17,409 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿಂದು 672 ಹೊಸ ಕೊರೊನಾ ಕೇಸ್ ಪತ್ತೆ ಆಗಿದೆ. ಐವರ ಪೈಕಿ ಮೂವರು ಬೆಂಗಳೂರಿನಲ್ಲೇ ಮೃತಪಟ್ಟಿದ್ದಾರೆ. ಗದಗದಲ್ಲಿ ಇಂದು ಒಂದೇ ಒಂದು ಕೇಸ್​ ಕೂಡ ಪತ್ತೆ ಆಗಿಲ್ಲ ಅನ್ನೋದು ವಿಶೇಷ. ಜನವರಿ ವೇಳೆಗೆ ಕೊರೊನಾ ಔಷಧ ಭಾರತದಲ್ಲಿ ಸಿಗುವ ನಿರೀಕ್ಷೆ ಇದೆ. ಅದಕ್ಕೂ ಮೊದಲೇ ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವುದು ಖುಷಿಯ ವಿಚಾರ.

BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಕೊರೊನಾ ಪಾಸಿಟಿವ್‌‌, ಹೋಂ ಐಸೋಲೇಷನ್​ನಲ್ಲಿ ಚಿಕಿತ್ಸೆ

Published On - 8:27 pm, Sun, 13 December 20

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us