AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾಯ್ತು ಕೊರೊನಾರ್ಭಟ; 38ಕ್ಕೂ ಹೆಚ್ಚು ಗ್ರಾಮದ ಜನರಿಗೆ ಸೋಂಕು

Davanagere News: ದಾವಣಗೆರೆಯ ನಗರ ಪ್ರದೇಶದಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ಕೊರೊನಾ ಈಗ ಹಳ್ಳಿಗಳತ್ತ ಪಯಣ ಬೆಳೆಸಿದೆ. ಜಿಲ್ಲೆಯ 38ಕ್ಕೂ ಹೆಚ್ಚು ಗ್ರಾಮಗಳಿಗೆ ಅಂದ್ರೆ ಇಡೀ ಜಿಲ್ಲೆಯನ್ನ ಕೊರೊನಾ ಆವರಿಸಿಕೊಂಡಿದೆ. ಹೀಗೆ ಹಳ್ಳಿಗೆ ನುಗ್ಗಿದ ಕೊರೊನಾ ಕಂಟ್ರೋಲ್ ಮಾಡುವುದೇ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿದೆ.

ದಾವಣಗೆರೆಯ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾಯ್ತು ಕೊರೊನಾರ್ಭಟ; 38ಕ್ಕೂ ಹೆಚ್ಚು ಗ್ರಾಮದ ಜನರಿಗೆ ಸೋಂಕು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:May 17, 2021 | 9:53 AM

Share

ದಾವಣಗೆರೆ: ಕೊರೊನಾ ಬೆಣ್ಣೆನಗರಿ ದಾವಣಗೆರೆಯಲ್ಲಿ ಸೋಂಕಿನ ಸುನಾಮಿಯನ್ನೇ ಎಬ್ಬಿಸಿದೆ. ಕಳೆದ ಒಂದು ವಾರದಲ್ಲಿ 200 ಸಕ್ರಿಯ ಸೋಂಕಿತರ ಸಂಖ್ಯೆ ಈಗ ಸಾವಿರ ಸಾವಿರ ಗಡಿ ದಾಟಿದೆ. ದಾವಣಗೆರೆ ಜಿಲ್ಲೆಯಲ್ಲಿ ಈಗ ಬರೋಬ್ಬರಿ 38ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕೊರೊನಾ ಸೋಂಕು ಹರಡಿದೆ. ಇನ್ನೇನು ಕೊರೊನಾ ಆಟ ಮುಗಿಯಿತು ಅನ್ನುವಾಗ ಡೆಡ್ಲಿ ವೈರಸ್‌ ನಗರ ಬಿಟ್ಟು ಹಳ್ಳಿಗಳಿಗೆ ಒಕ್ಕರಿಸುತ್ತಿದೆ. ಈ ಮೊದಲು ಕೇವಲ ನಗರ ಹಾಗೂ ಕೆಲಪ್ರದೇಶದಲ್ಲಿ ಮಾತ್ರ ಸೋಂಕು ಕಾಣಿಸಿತ್ತು. ಆದ್ರೀಗ ಹಳ್ಳಿಗೆ ಕೊರೊನಾ ಅಂಟಿಕೊಂಡಿದ್ದು ಜಿಲ್ಲಾಡಳಿತದ ಆತಂಕಕ್ಕೆ ಕಾರಣವಾಗಿದೆ.

ಇನ್ನು ಹಳ್ಳಿ ಹಳ್ಳಿಗಳಿಗೆ ಈ ಸೋಂಕು ನುಗ್ಗಿದ್ದು ಹೇಗೆ ಎಂಬುದೇ ತಿಳಿಯುತ್ತಿಲ್ಲ. ನ್ಯಮತಿ ತಾಲೂಕಿನ ರಾಮೇಶ್ವರದಲ್ಲಿ 70ಕ್ಕೂ ಹೆಚ್ಚು ಜನರಿಗೆ ಪಾಸಿಟಿವ್ ಬಂದು ಇಬ್ಬರು ಸಾವನ್ನಪ್ಪಿದ್ದಾರೆ. ಹಾಗೇ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿ ಕೊವಿಡ್ ಕೇರ್ ಸೆಂಟರ್‌ ಮಾಡಲಾಗಿದೆ. ಆದ್ರೆ ಅಲ್ಲಿ ವ್ಯವಸ್ಥೆ ಸರಿಯಿಲ್ಲ ಎಂದು ಸೋಂಕಿತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಾದ್ರೆ ಕಂಟ್ರೋಲ್ ಮಾಡುವುದು ಬಹಳ ಕಷ್ಟವಾಗುತ್ತೆ. ಹೀಗಾಗಿ ಒಂದು ಮನೆಯಲ್ಲಿ ಪಾಸಿಟಿವ್ ಬಂದ್ರೆ ಇಡೀ ಕುಟುಂಬದ ಸದಸ್ಯರಿಗೆ ಮೆಡಿಕಲ್ ಕಿಟ್ ನೀಡಲು ಜಿಲ್ಲಾ ಪಂಚಾಯಿತಿ ನಿರ್ಧರಿಸಿದೆ.

ಕೊರೊನಾ ಹಳ್ಳಿ ಹಳ್ಳಿಗೆ ನುಗ್ಗುತ್ತಿರುವುದರಿಂದ ಸೋಂಕು ಹೆಚ್ಚಾಗುವ ಭಯ ಕಾಡುತ್ತಿದೆ. ಹೀಗಾಗಿ ನಗರದಿಂದ ಹಳ್ಳಿಗೆ ಹಾರಿದ ಮಹಾಮಾರಿಗೆ ಯಾರ ಬಲಿಯಾಗದಂತೆ ಜಿಲ್ಲಾಡಳಿತ ನಿಗಾ ವಹಿಸಬೇಕಾಗಿದೆ.

ಇದನ್ನೂ ಓದಿ: ಹಿರಿಯ ರಂಗಕಲಾವಿದೆ ಶೋಭಾ ರಂಜೋಳಕರ್ ಇನ್ನಿಲ್ಲ; ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ

Published On - 9:31 am, Mon, 17 May 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!