AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ, ಮುಂದಿನ 10 ದಿನ ತುಂಬಾ ಕಠಿಣವಾಗಿರುತ್ತದೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ

ನೈಟ್ ಕರ್ಫ್ಯೂ ಚರ್ಚೆ ವಿಚಾರಕ್ಕೆ ಸಂಬಂಧಿಸಿ ಕೊವಿಡ್ ಏರಿಕೆ ಪ್ರಮಾಣ ಆಧರಿಸಿ ರಾಜ್ಯ ಹಾಗೂ ನಗರ ಪಾಲಿಕೆ ಕೆಲಸ ಮಾಡುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ, ಮುಂದಿನ 10 ದಿನ ತುಂಬಾ ಕಠಿಣವಾಗಿರುತ್ತದೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on: Apr 09, 2021 | 4:25 PM

Share

ಬೆಂಗಳೂರು: ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸರಕಾರ ಮತ್ತು ಮಹಾನಗರ ಪಾಲಿಕೆ ಕೊರೊನಾ ನಿಯಂತ್ರಣಕ್ಕೆ ಕೆಲಸ ಮಾಡುತ್ತಿದೆ ಎಂದು ಬಿಎಂಪಿ ಆಯುಕ್ತ ಗೌರವ್ ಗುಪ್ತಾ ಮಾಹಿತಿ ಹಂಚಿಕೊಂಡಿದ್ದಾರೆ. ಖಾಸಗಿ ಬೆಡ್‌ಗಳ ವ್ಯವಸ್ಥೆ ಒಂದೇ ಸೂರಿನಡಿ ಬರಲಿದೆ. ಕೊರೊನಾ ಕಾರಣ ಮುಂದಿನ 10 ದಿನಗಳ ಕಾಲ ತುಂಬಾ ಕಠಿಣವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ನೈಟ್ ಕರ್ಫ್ಯೂ ಚರ್ಚೆ ವಿಚಾರಕ್ಕೆ ಸಂಬಂಧಿಸಿ ಕೊವಿಡ್ ಏರಿಕೆ ಪ್ರಮಾಣ ಆಧರಿಸಿ ರಾಜ್ಯ ಹಾಗೂ ನಗರ ಪಾಲಿಕೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಬಿಬಿಎಂಪಿ ಪ್ರತಿ ವಲಯದಲ್ಲಿ ಎರಡರಿಂದ ಮೂರು ಕೊವಿಡ್ ಸೆಂಟರ್ ತೆರೆಯಲು ತೀರ್ಮಾನ ಕೈಗೊಳ್ಳಲಾಗಿದೆ. ಹೊಟೆಲ್​ಗಳಲ್ಲೂ ಕೊವಿಡ್​ ಕೇರ್​ ಸೆಂಟರ್​ ತೆರೆಯಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾತನಾಡಿದ್ದಾರೆ.

ಏಪ್ರಿಲ್​ 27ರಂದು ನಡೆಯಲಿರುವ ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವ ಆಚರಣೆ ಕುರಿತಾಗಿ ಏಪ್ರಿಲ್​ 05ರಂದು ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದೆ. ಪೊಲೀಸ್ ಇಲಾಖೆ ಅಧಿಕಾರಿ, ಜಿಲ್ಲಾಧಿಕಾರಿ ಹಾಗೂ ಉತ್ಸವ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ಸಭೆ ನಡೆದಿದೆ.

ಕರಗ ಮಹೋತ್ಸವ ಸಂಬಂಧಿಸಿದಂತೆ, ಕರಗ ಮಹೋತ್ಸವ ಹೇಗೆ ನಡೆಯಬೇಕು. ಅಥವಾ ಮಹೋತ್ಸವ ಬೇಡವೇ ಎಂಬುವುದರ ಕುರಿತಾಗಿ ಸಭೆ ಕೈಗೊಳ್ಳಲಾಗಿದೆ. ಈ ಕುರಿತಾಗಿ ಮಾತನಾಡಿದ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಐತಿಹಾಸಿಕ ಕರಗ ಮಹೋತ್ಸವ ನಡೆಸಲು ಮೊದಲು ಉತ್ಸವ ಸಮಿತಿ ರಚನೆ ಮಾಡಲಾಗುತ್ತದೆ. ಕೊವಿಡ್ ಹಿನ್ನೆಲೆ ಸರ್ಕಾರದ ಆದೇಶ ಪಾಲನೆ ಮಾಡಬೇಕು. ಸರ್ಕಾರದ ಆದೇಶ ಏಪ್ರಿಲ್ 20ರವರೆಗೂ ಜಾರಿಯಲ್ಲಿರುತ್ತದೆ. ಮುಂದಿನ ದಿನಗಳಲ್ಲಿ ಸರ್ಕಾರದ ಆದೇಶ ನೋಡುತ್ತೇವೆ. ಸದ್ಯಕ್ಕೆ ಕರಗ ಮಹೋತ್ಸವಕ್ಕೆ ನಿರ್ಬಂಧ ಅನಿವಾರ್ಯವಾಗಿದೆ. ಈಗಿರುವ ಆದೇಶದ ಪ್ರಕಾರ ಮೆರವಣಿಗೆಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್​ನಿಂದ ಕೆಳಗಿಳಿದು ಕಬ್ಬಿನಹಾಲು ಕುಡಿದ ಆರೋಗ್ಯ ಕಾರ್ಯಕರ್ತ; ಸ್ಥಳದಲ್ಲಿದ್ದವರಿಗೆಲ್ಲ ಆತಂಕ

ಕಳೆದ ವರ್ಷದಂತೆ.. ಈ ಬಾರಿಯೂ ಬೆಂಗಳೂರು ಕರಗದ ಸಂಭ್ರಮಕ್ಕೆ ಕೊರೊನಾ ಬ್ರೇಕ್

Follow Us
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ