AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಕೊರೊನಾಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗ್ತಿದೆ, ದಿನಕ್ಕೆ 20-22 ಶವ ಬರ್ತಿದೆ ಎಂದ ಚಿತಾಗಾರ ಸಿಬ್ಬಂದಿ

ಕೊರೊನಾ ಎರಡನೇ ಅಲೆ ರಣಭೀಕರ ರೂಪ ತಾಳಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಜೋರು ಮಾಡಿದೆ. ಇದರ ಪರಿಣಾಮ ಸಾವಿನ ಸಂಖ್ಯೆ ದಿಪ್ಪಟ್ಟಾಗಿದೆ. ಈ ಮೊದಲು 4ರಿಂದ 5 ಶವಗಳು ಬರ್ತಿತ್ತು. ಆದ್ರೆ ಕಳೆದ ಒಂದು ವಾರದಿಂದ ದಿನಕ್ಕೆ 20-22 ಶವಗಳು ಬರ್ತಿವೆ ಎಂದು ಟಿವಿ9ಗೆ ಸುಮನಹಳ್ಳಿ ಚಿತಾಗಾರದ ಸಿಬ್ಬಂದಿ ರವಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಕೊರೊನಾಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗ್ತಿದೆ, ದಿನಕ್ಕೆ 20-22 ಶವ ಬರ್ತಿದೆ ಎಂದ ಚಿತಾಗಾರ ಸಿಬ್ಬಂದಿ
ಸಂಗ್ರಹ ಚಿತ್ರ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Apr 16, 2021 | 9:36 AM

ಬೆಂಗಳೂರು: ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯ ಜೊತೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಪ್ರತಿದಿನ 4-5 ಕೊರೊನಾ ಸೋಂಕಿತರ ಶವ ಬರ್ತಿತ್ತು. ಆದ್ರೆ ಕಳೆದ ಒಂದು ವಾರದಿಂದ ಶವಗಳ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ 20-22 ಕೊವಿಡ್‌ನಿಂದ ಮೃತಪಟ್ಟವರ ಶವಗಳು ಬರ್ತಿವೆ ಎಂಬ ಭಯಾನಕ ಸುದ್ದಿ ಹೊರ ಬಿದ್ದಿದೆ.

ಕೊರೊನಾ ಎರಡನೇ ಅಲೆ ರಣಭೀಕರ ರೂಪ ತಾಳಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಜೋರು ಮಾಡಿದೆ. ಇದರ ಪರಿಣಾಮ ಸಾವಿನ ಸಂಖ್ಯೆ ದುಪ್ಪಟ್ಟಾಗಿದೆ. ಅದರಲ್ಲೂ ರಾಜ್ಯದ ಒಟ್ಟು ಕೊರೊನಾ ಕೇಸ್​ನಲ್ಲಿ, ಸಾವಿನಲ್ಲಿ ಬೆಂಗಳೂರಿನದ್ದೇ ಸಿಂಹಪಾಲು. ಈ ಮೊದಲು 4ರಿಂದ 5 ಶವಗಳು ಬರ್ತಿತ್ತು. ಆದ್ರೆ ಕಳೆದ ಒಂದು ವಾರದಿಂದ ದಿನಕ್ಕೆ 20-22 ಶವಗಳು ಬರ್ತಿವೆ ಎಂದು ಟಿವಿ9ಗೆ ಸುಮನಹಳ್ಳಿ ಚಿತಾಗಾರದ ಸಿಬ್ಬಂದಿ ರವಿ ತಿಳಿಸಿದ್ದಾರೆ. ಚಿತಾಗಾರದ ಮುಂದೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಲ್ಲಬೇಕಾದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡನೇ ಅಲೆಯ ಕೊರೊನಾ ಜೀವ ಹಿಂಡುತ್ತಿದೆ.

ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಯಲಹಂಕದ ಮೇಡಿ ಅಗ್ರಹಾರದಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಸುಮನಹಳ್ಳಿ ಚಿತಾಗಾರದಲ್ಲೂ ಅಂತ್ಯಕ್ರಿಯೆಗೆ ಕಾಯುವ ಸ್ಥಿತಿ ಎದುರಾಗಿದೆ. ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಚಿತಾಗಾರದ ಸಿಬ್ಬಂದಿ ರವಿ ಬೆಂಗಳೂರಿನಲ್ಲಿ 10 ದಿನದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ಇದರ ಜೊತೆಗೆ ಚಿತಾಗಾರಗಳಲ್ಲಿ ನಮಗೆ ಯಾವುದೇ ಸುರಕ್ಷತೆ ಇಲ್ಲ ಎಂದು ಅಳಲು ತೋಡಿಕೊಂಡಿದ್ದರು.

ಇನ್ನು ಬೆಳಗ್ಗೆ 4 ಗಂಟೆಗೆ ಸುಮನಹಳ್ಳಿ ಚಿತಾಗಾರಕ್ಕೆ ಕೊವಿಡ್ ಸೋಂಕಿತನ ಶವವನ್ನು ಆ್ಯಂಬುಲೆನ್ಸ್ ಸಿಬ್ಬಂದಿ ತಂದಿದ್ದರು. ಮೃತ ವ್ಯಕ್ತಿಯ ಸಂಬಂಧಿಕರು ಯಾರೂ ಬಾರದ ಕಾರಣ ಅಂತ್ಯಕ್ರಿಯೆ ಆಗದೆ ಮೃತದೇಹ ಇರಿಸಲಾಗಿದೆ. ಕುಟುಂಬಸ್ಥರು ಬರುವುದನ್ನು ಕಾದು ‌ಬೆಳಗ್ಗೆ 9 ಗಂಟೆಯ ಬಳಿಕ ಮೃತದೇಹದ ಅಂತ್ಯಕ್ರಿಯೆ ನಡೆಸಲು ಚಿಂತಿಸಲಾಗಿದೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತಪಟ್ಟವರನ್ನು ಚಿತಾಗಾರಕ್ಕೆ ಸಾಗಿಸಲು ಯಾವುದೇ ಶುಲ್ಕ ಇಲ್ಲ: ಬಿಬಿಎಂಪಿ ಸ್ಪಷ್ಟನೆ

ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್