AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನಿಂದ ಮುಕ್ತಿಗಾಗಿ ಕೊರೊನಾ ಮಾರಮ್ಮ ಗುಡಿ ಸ್ಥಾಪನೆ; ವಿಷಯ ತಿಳಿದ ಅಧಿಕಾರಿಗಳಿಂದ ಖಡಕ್ ಎಚ್ಚರಿಕೆ!

ಜಿಲ್ಲಾ ಆಡಳಿತ ಅಧಿಕಾರಿಗಳ ಪ್ರಕಾರ, ಗುರುವಾರ ಮಧ್ಯರಾತ್ರಿ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಯಶೋಧಮ್ಮ ಎಂಬವರು ಪೂಜಾರಿ ಹಾಗೂ ಸ್ಥಳೀಯ ಕೆಲ ಜನರೊಂದಿಗೆ ಸೇರಿ ಪ್ರಾರ್ಥನೆ ಮಾಡಿ ಈ ಕೊರೊನಾ ಮಾರಮ್ಮ ಗುಡಿ ಸ್ಥಾಪಿಸಿದ್ದಾರೆ.

ಸೋಂಕಿನಿಂದ ಮುಕ್ತಿಗಾಗಿ ಕೊರೊನಾ ಮಾರಮ್ಮ ಗುಡಿ ಸ್ಥಾಪನೆ; ವಿಷಯ ತಿಳಿದ ಅಧಿಕಾರಿಗಳಿಂದ ಖಡಕ್ ಎಚ್ಚರಿಕೆ!
ಕೊರೊನಾ ಮಾರಮ್ಮ
Follow us
TV9 Web
| Updated By: ganapathi bhat

Updated on:Aug 21, 2021 | 9:53 AM

ಚಾಮರಾಜನಗರ: ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ನಡುವೆ ಕೊವಿಡ್-19 ಸೋಂಕಿನಿಂದ ಮುಕ್ತಿ ಸಿಗಲು ಜನರು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸಾಂಕ್ರಾಮಿಕ ರೋಗದಿಂದ ಪಾರಾಗಲು ಪ್ರಯತ್ನಿಸುತ್ತಲೇ ಇದ್ದಾರೆ. ಈ ನಡುವೆ ನಮ್ಮ ನಂಬಿಕೆ, ಮೂಢನಂಬಿಕೆಗಳಿಂದ ಕೆಲವೆಡೆ ಸಮಸ್ಯೆ ಉಂಟಾದದ್ದೂ ಇದೆ. ಅಂತಹ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಎಂಬಲ್ಲಿ ನಡೆದಿದೆ. ಹಳ್ಳಿಯಲ್ಲಿ ಕೊರೊನಾ ಮಾರಮ್ಮ ಗುಡಿ ಸ್ಥಾಪಿಸಲಾಗಿದೆ. ಕೊರೊನಾ ತೊಲಗುವಂತೆ ಮಾಡಲು ಅಕ್ರಮವಾಗಿ ಈ ಗುಡಿ ಕಟ್ಟಿರುವುದು ಸಮಸ್ಯೆಗೆ ಕಾರಣವಾಗಿದೆ.

ಜಿಲ್ಲಾ ಆಡಳಿತ ಅಧಿಕಾರಿಗಳ ಪ್ರಕಾರ, ಗುರುವಾರ ಮಧ್ಯರಾತ್ರಿ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಯಶೋಧಮ್ಮ ಎಂಬವರು ಪೂಜಾರಿ ಹಾಗೂ ಸ್ಥಳೀಯ ಕೆಲ ಜನರೊಂದಿಗೆ ಸೇರಿ ಪ್ರಾರ್ಥನೆ ಮಾಡಿ ಈ ಕೊರೊನಾ ಮಾರಮ್ಮ ಗುಡಿ ಸ್ಥಾಪಿಸಿದ್ದಾರೆ.

ಮೂಲಗಳ ಮಾಹಿತಿಯ ಪ್ರಕಾರ, ಕೊಳ್ಳೇಗಾಲ ತಹಶೀಲ್ದಾರ್ ಕೆ. ಕುನಾಲ್ ಹಾಗೂ ಸಬ್ ಇನ್​ಸ್ಪೆಕ್ಟರ್ ಅಶೋಕ್ ಮಧುವನಹಳ್ಳಿಗೆ ಭೇಟಿ ನೀಡಿ ಗುಡಿಯ ಸ್ಥಳವನ್ನು ತೆರೆಸಿದ್ದಾರೆ. ಇಂತಹ ಅಕ್ರಮ, ದಾರಿ ತಪ್ಪಿಸುವ ಕೆಲಸ ಮಾಡದಂತೆ ಯಶೋಧಮ್ಮಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

18ನೇ ಶತಮಾನದ ಅಂತ್ಯದಲ್ಲಿ ಹಾಗೂ 19ನೇ ಶತಮಾನದ ಆರಂಭದಲ್ಲಿ ಉಂಟಾದ ಪ್ಲೇಗ್ ಮಹಾಮಾರಿಯ ಸಂದರ್ಭ, ಬೆಂಗಳೂರು ಹಾಗೂ ರಾಜ್ಯದ ಗ್ರಾಮೀಣ ಭಾಗದಲ್ಲಿ ಮಾರಮ್ಮನ ಗುಡಿಯನ್ನು ಸ್ಥಾಪಿಸಿದ್ದರು. ಪ್ಲೇಗ್ ರೋಗವು ಮಾರಮ್ಮನ ಶಾಪದಿಂದ ಬಂದಿದೆ ಎಂದು ನಂಬಿದ್ದರು. ಅದಕ್ಕಾಗಿ ಪ್ಲೇಗ್ ಮಾರಮ್ಮನನ್ನು ಸ್ಥಾಪಿಸಿದ್ದರು. ಅಂತಹ ಕೆಲ ದೇವಾಲಯಗಳು ಇಂದಿಗೂ ಇವೆ.

ತಮಿಳುನಾಡಿನಲ್ಲಿ ಕೂಡ ಇಂತಹುದೇ ಗುಡಿ ನಿರ್ಮಾಣವಾದ ಬಗ್ಗೆ ಸುದ್ದಿ ಹರಿದಾಡಿತ್ತು. ಭಕ್ತಿ, ನಂಬಿಕೆಯಲ್ಲಿ ತೊಡಗಿರುವ ಜನರು ಕೊರೊನಾ ವೈರಸ್​ಗೆ ದೇವರ ಸ್ವರೂಪ ನೀಡಿದ್ದರು. ಕೊಯಮತ್ತೂರಿನ ಜನರು ‘ಕೊರೊನಾ ದೇವಿ’ ಎಂಬ ದೇಗುಲವನ್ನು ನಿರ್ಮಿಸಿ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡು ಎಂದು ಭಕ್ತಿಯಿಂದ ಪೂಜಿಸಿದ್ದರು.

ಕೊರೊನಾ ಸೋಂಕು ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿನ ಭೀಕರತೆ ಜನರನ್ನು ಭಯಗೊಳಿಸಿದೆ. ಸೋಂಕು ಹರಡದಂತೆ ವಿಶೇಷ ಪೂಜೆ ಕೈಗೊಳ್ಳುವ ಮೂಲಕ ತಮಿಳು ನಾಡಿನ ಕೊಯಮತ್ತೂರು ಜನರು ದೇವಿಯ ಮೊರೆ ಹೋಗಿದ್ದರು. ಆಶ್ಚರ್ಯವೇನೆಂದರೆ ‘ಕೊರೊನಾ ದೇವಿ’ ಎಂಬ ದೇಗುಲವನ್ನು ನಿರ್ಮಿಸಿ ವಿಶೇಷ ಪೂಜೆ ಜತೆಗೆ ಕೊರೊನಾ ಸೋಂಕು ಬಹುಬೇಗ ನಿಲ್ಲುವಂತೆ ಪ್ರಾರ್ಥಿಸಿದ್ದರು.

ಇದನ್ನೂ ಓದಿ: Karnataka Covid Update: ಬೆಂಗಳೂರಿನ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ; ರಾಜ್ಯದಲ್ಲಿ 25,311 ಜನರಿಗೆ ಕೊರೊನಾ ದೃಢ

ಕೊರೊನಾ ವಿರುದ್ಧ ಹೋರಾಡಿ ಗೆದ್ದ 107 ವರ್ಷದ ವೃದ್ಧೆ; ಬೆಂಗಳೂರಿನ ಆಸ್ಪತ್ರೆಯಿಂದ ಇಂದು ಶತಾಯುಷಿ ಡಿಸ್ಚಾರ್ಜ್

Published On - 11:17 pm, Mon, 24 May 21

ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು