AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನೈಟ್ ಕರ್ಫ್ಯೂ: ಭದ್ರತೆಗೆ ಪೊಲೀಸರಿಂದ ಸಿದ್ಧತೆ, ಎಲ್ಲಾ ಡಿಸಿಪಿಗಳ ಜೊತೆ ಕಮಲ್ ಪಂತ್ ಚರ್ಚೆ

ನೈಟ್ ಕರ್ಫ್ಯೂ ವೇಳೆ ಭದ್ರತೆಗೆ ಪೊಲೀಸರು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಭದ್ರತೆ ವಿಚಾರವಾಗಿ ಇಂದು ಪೊಲೀಸ್ ಆಯುಕ್ತರ ಸಭೆ ನಡೆಯಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸ್ ಆಯುಕ್ತರ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ತಿಳಿದುಬಂದಿದೆ.

ಕೊರೊನಾ ನೈಟ್ ಕರ್ಫ್ಯೂ: ಭದ್ರತೆಗೆ ಪೊಲೀಸರಿಂದ ಸಿದ್ಧತೆ, ಎಲ್ಲಾ ಡಿಸಿಪಿಗಳ ಜೊತೆ ಕಮಲ್ ಪಂತ್ ಚರ್ಚೆ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​
guruganesh bhat
| Updated By: preethi shettigar|

Updated on: Apr 10, 2021 | 10:19 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾದ ಹಿನ್ನೆಲೆ ರಾಜ್ಯ ಸರ್ಕಾರ ಕೆಲವು ನಗರದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿ ಗುರುವಾರ ಆದೇಶ ಹೊರಡಿಸಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ರವರೆಗೆ ಸುಮಾರು 8 ನಗರಗಳಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಮತ್ತು ಈ ಕರ್ಫ್ಯೂ ಇಂದಿನಿಂದ ಆರಂಭವಾಗಲಿದೆ. ನೈಟ್ ಕರ್ಫ್ಯೂ ವೇಳೆ ಭದ್ರತೆಗೆ ಪೊಲೀಸರು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಭದ್ರತೆ ವಿಚಾರವಾಗಿ ಇಂದು ಪೊಲೀಸ್ ಆಯುಕ್ತರ ಸಭೆ ನಡೆಯಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸ್ ಆಯುಕ್ತರ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ತಿಳಿದುಬಂದಿದೆ.

ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಎಲ್ಲ ಸಂಚಾರಕ್ಕೆ ತಡೆ ಹಿಡಿಯಲಾಗುತ್ತದೆ. ಆದರೆ ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡುತ್ತೇವೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ರಾತ್ರಿ ಪಾಳಿ ಕೆಲಸ ಮಾಡುವವರಿಗೂ ನಿಯಮ ಅನ್ವಯವಾಗಲಿದ್ದು, ರಾತ್ರಿ 10 ರೊಳಗೆ ಕಚೇರಿ ತಲುಪಿ ಬೆಳಗ್ಗೆ 5ರ ನಂತರ ಹೊರಬರಲಿ ಎಂದಿದ್ದಾರೆ. ರಾತ್ರಿ ಸಮಯದಲ್ಲಿ ಪ್ರಯಾಣಕ್ಕೆ ಟಿಕೆಟ್ ಕಡ್ಡಾಯವಾಗಿದೆ. ರಾತ್ರಿ ಸಮಯದಲ್ಲಿ ಬೆಂಗಳೂರಿಗೆ ತೆರಳುವ ರೈಲು, ಬಸ್, ವಿಮಾನದ ಟಿಕೆಟ್ ತೋರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕೊರೊನಾ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ ಮಾಡುತ್ತೇವೆ. ಕೊರೊನಾ ಕರ್ಫ್ಯೂ ವೇಳೆ ಯಾವುದೇ ಪಾಸ್ ಬೇಕಿಲ್ಲ. ಸುಖಾಸುಮ್ಮನೆ ವಾಹನ ಓಡಾಡಿದರೆ ಸೀಜ್ ಮಾಡುತ್ತೇವೆ. ಏನೇ ಕೆಲಸ ಇದ್ದರೂ ರಾತ್ರಿ 10ರೊಳಗೆ ಮನೆ ತಲುಪಬೇಕು. ರಾತ್ರಿ 10 ಗಂಟೆಯೊಳಗೆ ಎಲ್ಲಾ ಅಂಗಡಿ ಮುಚ್ಚಬೇಕು. ಇಲ್ಲವಾದರೆ ಅಂಗಡಿಗಳನ್ನು ಸೀಜ್ ಮಾಡಲಾಗುವುದು. ಎನ್​ಡಿಎಂಎ ಅಡಿ ಕೇಸ್ ದಾಖಲು ಮಾಡಲಾಗುವುದು ಮತ್ತು ರಾತ್ರಿ ವೇಳೆ ನಗರದ ಎಲ್ಲಾ ಫ್ಲೈ ಓವರ್​ಗಳು ಬಂದ್ ಆಗಲಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ

ಬೇಡಿಕೆ ಈಡೇರುವವರೆಗೂ ಮುಷ್ಕರ ಕೈಬಿಡುವುದಿಲ್ಲ: ಜಂಟಿ ಕಾರ್ಯದರ್ಶಿ ಆನಂದ್

ಕೋಳಿಗಳಿಗೆ ಅಂತ್ಯಸಂಸ್ಕಾರ; ಸಾಕು ಪ್ರಾಣಿ ಸಾವಿಗೆ ಮರುಕ ವ್ಯಕ್ತಪಡಿಸಿದ ಕೋಲಾರದ ಕುಟುಂಬ

(Corona night curfew ADGP kamal pant to discuss with all DCP regarding security)

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ