AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಅಪಾರ್ಟ್‌ಮೆಂಟ್​ನಲ್ಲಿ ಹೆಚ್ಚುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆನೇಕಲ್‌ನಲ್ಲಿಯೂ ಕಾಲಿಟ್ಟಿದೆ!

SNN ರಾಜ್ ಲೇಕ್ ವ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಸೋಂಕಿತರ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. ನಿನ್ನೆವರೆಗೆ 103 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಂದು ಮತ್ತೆ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಇದರಿಂದ ದಿನೇ ದಿನೇ ಆತಂಕ ಹೆಚ್ಚುತ್ತಿದೆ.

ಬೆಂಗಳೂರಿನ ಅಪಾರ್ಟ್‌ಮೆಂಟ್​ನಲ್ಲಿ ಹೆಚ್ಚುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆನೇಕಲ್‌ನಲ್ಲಿಯೂ ಕಾಲಿಟ್ಟಿದೆ!
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Feb 17, 2021 | 2:17 PM

Share

ಬೆಂಗಳೂರು: ಕೊರೊನಾ ಕಥೆ ಮುಗಿತು ಎಂದು ನಿಟ್ಟುಸಿರು ಬಿಟ್ಟವರೆಲ್ಲ ಮತ್ತೆ ಎಚ್ಚರವಾಗಬೇಕಿದೆ. ಲಸಿಕೆ ಬಂತು ಕೊರೊನಾ ಹೊಯ್ತು ಎಂದು ನಿಶ್ಚಿಂತೆಯಿಂದಿದ್ದರೆ ಅಪಾಯ ಕಟ್ಟಿ ಬುತ್ತಿ. ಏಕೆಂದರೆ ನಗರದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಒಂದು ಕಡೆ ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ನೂತನ ಕೊರೊನಾ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಬೆಂಗಳೂರು ಏರ್​ಪೋರ್ಟ್​ನಲ್ಲಿ ಹೈ ಅಲರ್ಟ್​ ಮಾಡಲಾಗಿದೆ. ಮತ್ತೊಂದೆಡೆ ನಗರದ ಬೊಮ್ಮನಹಳ್ಳಿಯಲ್ಲಿರುವ ಎಸ್ಎನ್ಎನ್ ರಾಜ್ ಲೇಕ್ ವ್ಯೂ ಅಪಾರ್ಟ್‌ಮೆಂಟ್​ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಮತ್ತೊಮ್ಮೆ ಕೊರೊನಾ ಬೆಂಗಳೂರಿನಲ್ಲಿ ತನ್ನ ಅಟ್ಟಹಾಸ ಮೆರೆಯಲಿದೆಯಾ ಎಂಬ ಆತಂಕ ಹೆಚ್ಚಾಗಿದೆ.

SNN ರಾಜ್ ಲೇಕ್ ವ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಸೋಂಕಿತರ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. ನಿನ್ನೆವರೆಗೆ 103 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಂದು ಮತ್ತೆ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಇದರಿಂದ ದಿನೇ ದಿನೇ ಆತಂಕ ಹೆಚ್ಚುತ್ತಿದೆ. ಫೆಬ್ರವರಿ 6ರಂದು H1104 ಫ್ಲ್ಯಾಟ್​ನಲ್ಲಿ ಮದುವೆ ವಾರ್ಷಿಕೋತ್ಸವ ಕಾರ್ಯಕ್ರಮ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ 30 ಫ್ಲ್ಯಾಟ್​ಗಳ ಜನರು ಭಾಗಿಯಾಗಿದ್ದರು. ಅದರಲ್ಲಿ ಓರ್ವ ವ್ಯಕ್ತಿ ಡೆಹ್ರಾಡೂನ್​ಗೆ ಹೋಗಿ ಬಂದಿದ್ದರು. ಡೆಹ್ರಾಡೂನ್​ಗೆ ಹೋಗಿ ಬಂದ ವ್ಯಕ್ತಿಗೆ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತು. ನಂತರ ಪರೀಕ್ಷೆ ನಡೆಸಿದಾಗ 106 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿಯವರೆಗೂ 1,500ಕ್ಕೂ ಹೆಚ್ಚು ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ.

ಆನೇಕಲ್‌ನಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೊನಾ ಪಾಸಿಟಿವ್ ಇನ್ನು ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಬಿಬಿಎಂಪಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಕುಟುಂಬದ ಮೂವರಲ್ಲಿ ಕೊವಿಡ್ ಪತ್ತೆಯಾಗಿದೆ. ವ್ಯಕ್ತಿಯ ತಾಯಿ, ಮಗು, ಪತ್ನಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆದ್ರೆ ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯಲ್ಲಿ ಕೊರೊನಾ ಕಾಣಿಸಿಕೊಂಡಿಲ್ಲ. ಮನೆಯಲ್ಲೇ ಇದ್ದರೂ ಮೂವರಿಗೆ ಕೊರೊನಾ ಸೋಂಕು ಹೇಗೆ ಬಂತು ಎಂಬುವುದು ಗೊಂದಲವಾಗಿದೆ. ಸದ್ಯ ಸೋಂಕಿತರು ಸಂಜಯಗಾಂಧಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದು ಪುರಸಭೆಯಿಂದ ಮನೆಯ ಸುತ್ತಮುತ್ತ ಸ್ಯಾನಿಟೈಸಿಂಗ್ ಮಾಡಲಾಗಿದೆ.

ಇದನ್ನೂ ಓದಿ: Coronavirus: ಬೆಂಗಳೂರಿನ ವಸತಿ ಸಮುಚ್ಛಯದಲ್ಲಿ ಪಾರ್ಟಿ ನಡೆದ ನಂತರ 100ಕ್ಕಿಂತಲೂ ಹೆಚ್ಚು ಮಂದಿಗೆ ಕೊವಿಡ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್