AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಅಪಾರ್ಟ್‌ಮೆಂಟ್​ನಲ್ಲಿ ಹೆಚ್ಚುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆನೇಕಲ್‌ನಲ್ಲಿಯೂ ಕಾಲಿಟ್ಟಿದೆ!

SNN ರಾಜ್ ಲೇಕ್ ವ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಸೋಂಕಿತರ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. ನಿನ್ನೆವರೆಗೆ 103 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಂದು ಮತ್ತೆ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಇದರಿಂದ ದಿನೇ ದಿನೇ ಆತಂಕ ಹೆಚ್ಚುತ್ತಿದೆ.

ಬೆಂಗಳೂರಿನ ಅಪಾರ್ಟ್‌ಮೆಂಟ್​ನಲ್ಲಿ ಹೆಚ್ಚುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆನೇಕಲ್‌ನಲ್ಲಿಯೂ ಕಾಲಿಟ್ಟಿದೆ!
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Feb 17, 2021 | 2:17 PM

Share

ಬೆಂಗಳೂರು: ಕೊರೊನಾ ಕಥೆ ಮುಗಿತು ಎಂದು ನಿಟ್ಟುಸಿರು ಬಿಟ್ಟವರೆಲ್ಲ ಮತ್ತೆ ಎಚ್ಚರವಾಗಬೇಕಿದೆ. ಲಸಿಕೆ ಬಂತು ಕೊರೊನಾ ಹೊಯ್ತು ಎಂದು ನಿಶ್ಚಿಂತೆಯಿಂದಿದ್ದರೆ ಅಪಾಯ ಕಟ್ಟಿ ಬುತ್ತಿ. ಏಕೆಂದರೆ ನಗರದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಒಂದು ಕಡೆ ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ನೂತನ ಕೊರೊನಾ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಬೆಂಗಳೂರು ಏರ್​ಪೋರ್ಟ್​ನಲ್ಲಿ ಹೈ ಅಲರ್ಟ್​ ಮಾಡಲಾಗಿದೆ. ಮತ್ತೊಂದೆಡೆ ನಗರದ ಬೊಮ್ಮನಹಳ್ಳಿಯಲ್ಲಿರುವ ಎಸ್ಎನ್ಎನ್ ರಾಜ್ ಲೇಕ್ ವ್ಯೂ ಅಪಾರ್ಟ್‌ಮೆಂಟ್​ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಮತ್ತೊಮ್ಮೆ ಕೊರೊನಾ ಬೆಂಗಳೂರಿನಲ್ಲಿ ತನ್ನ ಅಟ್ಟಹಾಸ ಮೆರೆಯಲಿದೆಯಾ ಎಂಬ ಆತಂಕ ಹೆಚ್ಚಾಗಿದೆ.

SNN ರಾಜ್ ಲೇಕ್ ವ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಸೋಂಕಿತರ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. ನಿನ್ನೆವರೆಗೆ 103 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಂದು ಮತ್ತೆ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಇದರಿಂದ ದಿನೇ ದಿನೇ ಆತಂಕ ಹೆಚ್ಚುತ್ತಿದೆ. ಫೆಬ್ರವರಿ 6ರಂದು H1104 ಫ್ಲ್ಯಾಟ್​ನಲ್ಲಿ ಮದುವೆ ವಾರ್ಷಿಕೋತ್ಸವ ಕಾರ್ಯಕ್ರಮ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ 30 ಫ್ಲ್ಯಾಟ್​ಗಳ ಜನರು ಭಾಗಿಯಾಗಿದ್ದರು. ಅದರಲ್ಲಿ ಓರ್ವ ವ್ಯಕ್ತಿ ಡೆಹ್ರಾಡೂನ್​ಗೆ ಹೋಗಿ ಬಂದಿದ್ದರು. ಡೆಹ್ರಾಡೂನ್​ಗೆ ಹೋಗಿ ಬಂದ ವ್ಯಕ್ತಿಗೆ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತು. ನಂತರ ಪರೀಕ್ಷೆ ನಡೆಸಿದಾಗ 106 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿಯವರೆಗೂ 1,500ಕ್ಕೂ ಹೆಚ್ಚು ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ.

ಆನೇಕಲ್‌ನಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೊನಾ ಪಾಸಿಟಿವ್ ಇನ್ನು ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಬಿಬಿಎಂಪಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಕುಟುಂಬದ ಮೂವರಲ್ಲಿ ಕೊವಿಡ್ ಪತ್ತೆಯಾಗಿದೆ. ವ್ಯಕ್ತಿಯ ತಾಯಿ, ಮಗು, ಪತ್ನಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆದ್ರೆ ಕೆಲಸಕ್ಕೆ ಹೋಗುತ್ತಿದ್ದ ವ್ಯಕ್ತಿಯಲ್ಲಿ ಕೊರೊನಾ ಕಾಣಿಸಿಕೊಂಡಿಲ್ಲ. ಮನೆಯಲ್ಲೇ ಇದ್ದರೂ ಮೂವರಿಗೆ ಕೊರೊನಾ ಸೋಂಕು ಹೇಗೆ ಬಂತು ಎಂಬುವುದು ಗೊಂದಲವಾಗಿದೆ. ಸದ್ಯ ಸೋಂಕಿತರು ಸಂಜಯಗಾಂಧಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದು ಪುರಸಭೆಯಿಂದ ಮನೆಯ ಸುತ್ತಮುತ್ತ ಸ್ಯಾನಿಟೈಸಿಂಗ್ ಮಾಡಲಾಗಿದೆ.

ಇದನ್ನೂ ಓದಿ: Coronavirus: ಬೆಂಗಳೂರಿನ ವಸತಿ ಸಮುಚ್ಛಯದಲ್ಲಿ ಪಾರ್ಟಿ ನಡೆದ ನಂತರ 100ಕ್ಕಿಂತಲೂ ಹೆಚ್ಚು ಮಂದಿಗೆ ಕೊವಿಡ್

Follow Us
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!