AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಕಣ್ಣೀರ ವಿಡಿಯೋ ನೋಡಿ ಸಹಾಯ ಮಾಡಿದ ಸಾರ್ವಜನಿಕರು.. ಎಷ್ಟೇ ಪ್ರಯತ್ನಪಟ್ಟರೂ ಉಳಿಸಲಾಗಲಿಲ್ಲ ಸೋಂಕಿತನ ಪ್ರಾಣ

ವೈದ್ಯರಿಗೆ ಚಿಕಿತ್ಸೆ ಕೊಡುವಂತೆ ಮಹಿಳೆ ಅಂಗಲಾಚುತ್ತಿರುವ ವಿಡಿಯೋ ನೋಡಿ ಸಾರ್ವಜನಿಕರು ಸಹಾಯಕ್ಕೆ ಬಂದಿದ್ದು ತಕ್ಷಣ ಅದೇ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೋಂಕಿತನಿಗೆ ಲಂಗ್ಸ್ ಡ್ಯಾಮೇಜ್ ಆಗಿತ್ತು ಎನ್ನಲಾಗಿದೆ.

ಮಹಿಳೆಯ ಕಣ್ಣೀರ ವಿಡಿಯೋ ನೋಡಿ ಸಹಾಯ ಮಾಡಿದ ಸಾರ್ವಜನಿಕರು.. ಎಷ್ಟೇ ಪ್ರಯತ್ನಪಟ್ಟರೂ ಉಳಿಸಲಾಗಲಿಲ್ಲ ಸೋಂಕಿತನ ಪ್ರಾಣ
ಸಂಗ್ರಹ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 25, 2021 | 10:17 AM

Share

ತುಮಕೂರು: ಕೊರೊನಾ ಎರಡನೇ ಅಲೆಗೆ ಜನ ತತ್ತರಿಸಿದ್ದಾರೆ. ಈ ನಡುವೆ ಆಕ್ಸಿಜನ್ ಕೊರತೆ, ಬೆಡ್ ಕೊರತೆ ಜನರನ್ನು ಮತ್ತಷ್ಟು ನರಳಿ ನರಳಿ ಸಾಯುವಂತೆ ಮಾಡಿವೆ. ಕೊರೊನಾ ಸೋಂಕಿತ ವ್ಯಕ್ತಿ ಸೂಕ್ತ ಚಿಕಿತ್ಸೆ ಸಿಗದೆ ನರಳಿ ನರಳಿ ಒದ್ದಾಡಿ ಪ್ರಾಣ ಬಿಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.

ಕೊರೊನಾ ಸೋಂಕಿತನಿಗೆ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಎಷ್ಟೇ ಬೇಡಿಕೊಂಡರೂ ಅಸಹಾಯಕರಾಗಿದ್ದ ವೈದ್ಯರು ಚಿಕಿತ್ಸೆ ನೀಡಲು ಮುಂದಾಗಿಲ್ಲ. ಪತಿಯನ್ನು ಉಳಿಸಿಕೊಳ್ಳಲು ಮಹಿಳೆ ಅಂಗಲಾಚುತ್ತಿರುವ ಮನಕಲಕುವ ದೃಶ್ಯಗಳು ನೋಡುವವರ ಕಣ್ಣಲ್ಲಿ ನೀರು ತರಿಸುತ್ತದೆ. ಈ ವಿಡಿಯೋ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಇಂತಹದೊಂದು ಮನ ಕಲಕುವ ಘಟನೆ ನಡೆದಿದೆ. ವೈದ್ಯರಿಗೆ ಚಿಕಿತ್ಸೆ ಕೊಡುವಂತೆ ಮಹಿಳೆ ಅಂಗಲಾಚುತ್ತಿರುವ ವಿಡಿಯೋ ನೋಡಿ ಸಾರ್ವಜನಿಕರು ಸಹಾಯಕ್ಕೆ ಬಂದಿದ್ದು ತಕ್ಷಣ ಅದೇ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೋಂಕಿತನಿಗೆ ಲಂಗ್ಸ್ ಡ್ಯಾಮೇಜ್ ಆಗಿತ್ತು ಎನ್ನಲಾಗಿದೆ.

ಬೆಂಗಳೂರಿನಲ್ಲಿ ಡ್ರೈವರ್ ಆಗಿದ್ದ ಸುಮಾರು 30 ವರ್ಷದ ಮೃತ ಸೋಂಕಿತ ವ್ಯಕ್ತಿ. ಕೆಲ ದಿನಗಳ ಹಿಂದೆ ಚಿಕ್ಕನಾಯಕನಹಳ್ಳಿಗೆ ಆಗಮಿಸಿದ್ರು. ಹೆಂಡತಿ ಗಾರ್ಮೆಂಟ್ನಲ್ಲಿ ಕೆಲಸ ಮಾಡುತ್ತಾರೆ. ಸೂಕ್ತ ಚಿಕಿತ್ಸೆಗಾಗಿ ದಿನಕ್ಕೆ 60 ಸಾವಿರ ಪ್ಯಾಕೇಜ್ ಆಗುತ್ತೆ ಎಂದು ಖಾಸಗಿ ಆಸ್ಪತ್ರೆಯವರು ಹೇಳಿದ್ದರು. ಅಷ್ಟು ಹಣ ಕೊಡಲಾಗದೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು ಸೋಂಕಿತ ವ್ಯಕ್ತಿ ಪ್ರಾಣಬಿಟ್ಟಿದ್ದಾರೆ. ವ್ಯಕ್ತಿಯನ್ನು ಉಳಿಸಿಕೊಳ್ಳಲು ಸಾರ್ವಜನಿಕರು ಸಹಾಯ ಮಾಡಿದ್ದರು. ಪತಿಯನ್ನು ಉಳಿಸಿಕೊಳ್ಳಲು ಮಹಿಳೆ ತೀರ ಪರದಾಡಿದ್ದರೂ ಎಷ್ಟೇ ಪ್ರಯತ್ನಪಟ್ಟರೂ ಸೋಂಕಿತನನ್ನು ಉಳಿಸಿಕೊಳ್ಳಲು ಆಗಲೇ ಇಲ್ಲ. ಈ ಮಹಾಮಾರಿ ಕೊರೊನಾ ಜನರನ್ನು ನರಳಿ ನರಳಿ ಸಾಗುವಂತ ಮಾಡುತ್ತಿದೆ. ಹೀಗಾಗಿ ನಾವು ಆದಷ್ಟು ಎಚ್ಚರಿಕೆಯಿಂದ ಇರಬೇಕು.

ಇದನ್ನೂ ಓದಿ: ಕೊವಿಡ್​ ಆಸ್ಪತ್ರೆಯಲ್ಲಿ ಭೀಕರ ಅಗ್ನಿದುರಂತ; 27 ರೋಗಿಗಳು ಸಾವು, 90ಕ್ಕೂ ಹೆಚ್ಚು ಜನರ ರಕ್ಷಣೆ

Published On - 10:16 am, Sun, 25 April 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ