ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ, ಆತನಿಗೆ ಅನಂತಪುರದಲ್ಲೇ ಸೋಂಕು ತಗುಲಿತ್ತು

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಆಂಧ್ರ ಮೂಲದ 796ನೇ ಸೋಂಕಿತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅನಂತಪುರದಲ್ಲೇ ಸೋಂಕು ತಗುಲಿತ್ತು: ಬುಲ್ ಟೆಂಪಲ್ ರಸ್ತೆಯ ಶೇಖರ್ ಆಸ್ಪತ್ರೆಗೆ ಈ ಕೊರೊನಾ ಸೋಂಕಿತ ವ್ಯಕ್ತಿ ಬಿಪಿ ಹಾಗೂ ಶುಗರ್ ಡೌನ್ ಆಗಿದೆ ಎಂದು ಅನಂತಪುರ ಜಿಲ್ಲೆಯಿಂದ ಚಿಕಿತ್ಸೆಗೆ ಬಂದಿದ್ರು. ಈ ವೇಳೆ ವೈದ್ಯರು ಅವರಿಗೆ ಕೊರೊನಾ ಟೆಸ್ಟ್ ಮಾಡಿದ್ದಾರೆ. ಆಗ ಅವರಿಗೆ ಕೊರೊನಾ ಪಾಸಿಟಿವ್ […]

ಬೆಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ, ಆತನಿಗೆ ಅನಂತಪುರದಲ್ಲೇ ಸೋಂಕು ತಗುಲಿತ್ತು
ಸಾಧು ಶ್ರೀನಾಥ್​

Updated on: May 14, 2020 | 11:04 AM

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಆಂಧ್ರ ಮೂಲದ 796ನೇ ಸೋಂಕಿತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಅನಂತಪುರದಲ್ಲೇ ಸೋಂಕು ತಗುಲಿತ್ತು:

ಬುಲ್ ಟೆಂಪಲ್ ರಸ್ತೆಯ ಶೇಖರ್ ಆಸ್ಪತ್ರೆಗೆ ಈ ಕೊರೊನಾ ಸೋಂಕಿತ ವ್ಯಕ್ತಿ ಬಿಪಿ ಹಾಗೂ ಶುಗರ್ ಡೌನ್ ಆಗಿದೆ ಎಂದು ಅನಂತಪುರ ಜಿಲ್ಲೆಯಿಂದ ಚಿಕಿತ್ಸೆಗೆ ಬಂದಿದ್ರು. ಈ ವೇಳೆ ವೈದ್ಯರು ಅವರಿಗೆ ಕೊರೊನಾ ಟೆಸ್ಟ್ ಮಾಡಿದ್ದಾರೆ. ಆಗ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

ಮತಿಗೇಡಿಯಿಂದ ಪತ್ನಿ, ವಾರ್ಡ್ ಬಾಯ್​ಗೂ ಸೊಂಕು!

ಈ ಮೊದಲೇ ಅನಂತಪುರದಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿಕೊಂಡಿದ್ದ ಮೃತ ಸೋಂಕಿತ, ವರದಿ ಬರುವ ಮುನ್ನವೇ ಬೆಂಗಳೂರಿಗೆ ಆಗಮಿಸಿದ್ರು. ಚಾಮರಾಜಪೇಟೆಯ ತನ್ನ ಸಂಬಂಧಿಕರ ವಿಳಾಸ ನೀಡಿ ಆಸ್ಪತ್ರೆಗೆ ದಾಖಲಾಗಿದ್ರು. ಮೃತ ಸೋಂಕಿತ ವ್ಯಕ್ತಿಯಿಂದ ಆತನ ಪತ್ನಿ ಹಾಗೂ ವಾರ್ಡ್ ಬಾಯ್​ಗೂ ಸೊಂಕು ತಗುಲಿತ್ತು.

Published On - 9:08 am, Thu, 14 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us