
ಮಂಗಳೂರು: ಕ್ರೂರಿ ಕೊರೊನಾ ಕ್ರಿಮಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದರು. ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆತ ಸಾವಿಗೀಡಾದ ಬಳಿಕ ಅವರ ಗಂಟಲು ದ್ರವವನ್ನ ಪರೀಕ್ಷೆಗೆ ಕಳುಹಿಸಲಾಗಿತ್ತು. ಮೃತ ವ್ಯಕ್ತಿಯ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದನ್ನು SARI ಕೇಸ್ ಎಂದು ಜಿಲ್ಲಾಡಳಿತ ಪರಿಗಣಿಸಿದೆ.
Published On - 11:11 am, Mon, 25 May 20