AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಮಂಗಳೂರಿನ ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಪತ್ತೆಯಾಗಿದೆ.

ಮಂಗಳೂರಿನಲ್ಲಿ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಸಾಂದರ್ಭಿಕ ಚಿತ್ರ
shruti hegde
|

Updated on: Mar 18, 2021 | 11:44 AM

Share

ಮಂಗಳೂರು: ಕೊರೊನಾ ಪಾಸಿಟಿವ್​ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಮತ್ತು ಹಾಸ್ಟೆಲ್​ಅನ್ನು ಕಂಟೈನ್ ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.

ಇತ್ತೀಚೆಗೆ ಕೊವಿಡ್‌ ಸೋಂಕಿನ ಹರಡುವಿಕೆ ಪ್ರಮಾಣ ಕಡಿಮೆಯಾಗಿತ್ತು. ಈ ಮೊದಲು ಸೀಲ್‌ಡೌನ್‌, ಲಾಕ್‌ಡೌನ್, ನೈಟ್‌ ಕರ್ಫ್ಯೂ, ಬಂದ್ ಹೇಳುವ ಮಾತನ್ನು ಕೇಳಿ ಕೇಳಿ ಒಂದು ವರ್ಷದಿಂದ ಜನ ಸುಸ್ತಾಗಿದ್ದರು. ಆದರೆ ಈಗ ಮತ್ತೆ ಗಡಿ ಜಿಲ್ಲೆಗಳಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಹಲವು ತಿಂಗಳುಗಳ ಬಳಿಕ ಮತ್ತೆ ಮಂಗಳೂರಿನಲ್ಲಿ ಸೀಲ್‌ಡೌನ್‌ ಮಾದರಿಯಲ್ಲಿ ಬಂದ್ ಮಾಡಲಾಗಿದೆ.

ಕರಾವಳಿಯಲ್ಲಿ ಕೇರಳ ಕೊರೊನಾದ ಆತಂಕ ಕೊರೊನಾ ಮಹಾಮಾರಿಯಿಂದಾಗಿ ಯೆನೆಪೋಯ ವಿವಿಯ 9 ಶಿಕ್ಷಣ ಸಂಸ್ಥೆಗಳಿಗೆ ಬೀಗ ಹಾಕಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕೂಡ ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆ. ಮಂಗಳೂರಿನ ತಲಪಾಡಿ ಸೇರಿದಂತೆ 24ಕ್ಕೂ ಹೆಚ್ಚು ಕೇರಳ ಸಂಪರ್ಕ ಬೆಸೆಯುವ ಗಡಿಗಳಿವೆ. ಇನ್ನು, ಕಾಲೇಜುಗಳನ್ನು ಆರಂಭ ಮಾಡಿದ ಮೇಲೆ ಈ ಕೊರೊನಾ ಹಾವಳಿ ಮತ್ತೆ ಹೆಚ್ಚಾಗುತ್ತಿದೆ.

ಮಂಗಳೂರು ಶಿಕ್ಷಣಕ್ಕೆ ಹೇಳು ಮಾಡಿಸಿದ ಜಿಲ್ಲೆ. ಆದ್ದರಿಂದ ಕೇರಳದಿಂದ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇಲ್ಲಿಗೆ ಬಂದು ಶಿಕ್ಷಣ ಪಡೆಯುತ್ತಾರೆ. ಅದರಿಂದ ರಾಜ್ಯ ಸರ್ಕಾರ ಕಾಲೇಜುಗಳಿಗೆ ಗೈಡ್‌ಲೈನ್ಸ್‌ ನಿರ್ಮಿಸಿ ಅದರ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ನೀಡಿತ್ತು. ಆದರೆ ಈಗ ಮಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತೆ ಬಾಗಿಲು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ. ಯೆನೆಪೋಯ ವಿವಿ 9ಶಿಕ್ಷಣ ಸಂಸ್ಥೆಗಳನ್ನ ಬಂದ್ ಮಾಡಲಾಗಿದೆ. ಇದಕ್ಕೆ ಕಾರಣ, ಎರಡರಿಂದ ಮೂರು ದಿನದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಬಂದಿದೆ.

ಇನ್ನು, ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಸೇರಿ ವಿವಿಧ ಅಧಿಕಾರಿಗಳ ತಂಡ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ದೂರು ಬಂದಿರೋ ಶಿಕ್ಷಣ ಸಂಸ್ಥೆಗಳ ಮೇಲೆ ತನಿಖೆ ನಡೆಸಲಾಗುತ್ತಿದೆ. ಕೊವಿಡ್​ಗೆ ಸಂಬಂಧಿಸಿ ನಿರ್ಲಕ್ಷ್ಯ ತೋರಿಸವರಿಗೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಸಮುದ್ರದ ಮಧ್ಯದಲ್ಲಿ ಮಂಗಳೂರು ಯುವಕ: ಕೊರೊನಾ ಭೀತಿ, ಮದುವೆ ಮುಂದೂಡಿಕೆ!

ಇದನ್ನೂ ಓದಿ: ಕಿಲ್ಲರ್ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ!

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’