AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಮಂಗಳೂರಿನ ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಪತ್ತೆಯಾಗಿದೆ.

ಮಂಗಳೂರಿನಲ್ಲಿ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಸಾಂದರ್ಭಿಕ ಚಿತ್ರ
shruti hegde
|

Updated on: Mar 18, 2021 | 11:44 AM

Share

ಮಂಗಳೂರು: ಕೊರೊನಾ ಪಾಸಿಟಿವ್​ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಮತ್ತು ಹಾಸ್ಟೆಲ್​ಅನ್ನು ಕಂಟೈನ್ ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.

ಇತ್ತೀಚೆಗೆ ಕೊವಿಡ್‌ ಸೋಂಕಿನ ಹರಡುವಿಕೆ ಪ್ರಮಾಣ ಕಡಿಮೆಯಾಗಿತ್ತು. ಈ ಮೊದಲು ಸೀಲ್‌ಡೌನ್‌, ಲಾಕ್‌ಡೌನ್, ನೈಟ್‌ ಕರ್ಫ್ಯೂ, ಬಂದ್ ಹೇಳುವ ಮಾತನ್ನು ಕೇಳಿ ಕೇಳಿ ಒಂದು ವರ್ಷದಿಂದ ಜನ ಸುಸ್ತಾಗಿದ್ದರು. ಆದರೆ ಈಗ ಮತ್ತೆ ಗಡಿ ಜಿಲ್ಲೆಗಳಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಹಲವು ತಿಂಗಳುಗಳ ಬಳಿಕ ಮತ್ತೆ ಮಂಗಳೂರಿನಲ್ಲಿ ಸೀಲ್‌ಡೌನ್‌ ಮಾದರಿಯಲ್ಲಿ ಬಂದ್ ಮಾಡಲಾಗಿದೆ.

ಕರಾವಳಿಯಲ್ಲಿ ಕೇರಳ ಕೊರೊನಾದ ಆತಂಕ ಕೊರೊನಾ ಮಹಾಮಾರಿಯಿಂದಾಗಿ ಯೆನೆಪೋಯ ವಿವಿಯ 9 ಶಿಕ್ಷಣ ಸಂಸ್ಥೆಗಳಿಗೆ ಬೀಗ ಹಾಕಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕೂಡ ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆ. ಮಂಗಳೂರಿನ ತಲಪಾಡಿ ಸೇರಿದಂತೆ 24ಕ್ಕೂ ಹೆಚ್ಚು ಕೇರಳ ಸಂಪರ್ಕ ಬೆಸೆಯುವ ಗಡಿಗಳಿವೆ. ಇನ್ನು, ಕಾಲೇಜುಗಳನ್ನು ಆರಂಭ ಮಾಡಿದ ಮೇಲೆ ಈ ಕೊರೊನಾ ಹಾವಳಿ ಮತ್ತೆ ಹೆಚ್ಚಾಗುತ್ತಿದೆ.

ಮಂಗಳೂರು ಶಿಕ್ಷಣಕ್ಕೆ ಹೇಳು ಮಾಡಿಸಿದ ಜಿಲ್ಲೆ. ಆದ್ದರಿಂದ ಕೇರಳದಿಂದ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇಲ್ಲಿಗೆ ಬಂದು ಶಿಕ್ಷಣ ಪಡೆಯುತ್ತಾರೆ. ಅದರಿಂದ ರಾಜ್ಯ ಸರ್ಕಾರ ಕಾಲೇಜುಗಳಿಗೆ ಗೈಡ್‌ಲೈನ್ಸ್‌ ನಿರ್ಮಿಸಿ ಅದರ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ನೀಡಿತ್ತು. ಆದರೆ ಈಗ ಮಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತೆ ಬಾಗಿಲು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ. ಯೆನೆಪೋಯ ವಿವಿ 9ಶಿಕ್ಷಣ ಸಂಸ್ಥೆಗಳನ್ನ ಬಂದ್ ಮಾಡಲಾಗಿದೆ. ಇದಕ್ಕೆ ಕಾರಣ, ಎರಡರಿಂದ ಮೂರು ದಿನದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಬಂದಿದೆ.

ಇನ್ನು, ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಸೇರಿ ವಿವಿಧ ಅಧಿಕಾರಿಗಳ ತಂಡ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ದೂರು ಬಂದಿರೋ ಶಿಕ್ಷಣ ಸಂಸ್ಥೆಗಳ ಮೇಲೆ ತನಿಖೆ ನಡೆಸಲಾಗುತ್ತಿದೆ. ಕೊವಿಡ್​ಗೆ ಸಂಬಂಧಿಸಿ ನಿರ್ಲಕ್ಷ್ಯ ತೋರಿಸವರಿಗೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಸಮುದ್ರದ ಮಧ್ಯದಲ್ಲಿ ಮಂಗಳೂರು ಯುವಕ: ಕೊರೊನಾ ಭೀತಿ, ಮದುವೆ ಮುಂದೂಡಿಕೆ!

ಇದನ್ನೂ ಓದಿ: ಕಿಲ್ಲರ್ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ!

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ