AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಮಂಗಳೂರಿನ ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಪತ್ತೆಯಾಗಿದೆ.

ಮಂಗಳೂರಿನಲ್ಲಿ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಸಾಂದರ್ಭಿಕ ಚಿತ್ರ
shruti hegde
|

Updated on: Mar 18, 2021 | 11:44 AM

Share

ಮಂಗಳೂರು: ಕೊರೊನಾ ಪಾಸಿಟಿವ್​ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಮತ್ತು ಹಾಸ್ಟೆಲ್​ಅನ್ನು ಕಂಟೈನ್ ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.

ಇತ್ತೀಚೆಗೆ ಕೊವಿಡ್‌ ಸೋಂಕಿನ ಹರಡುವಿಕೆ ಪ್ರಮಾಣ ಕಡಿಮೆಯಾಗಿತ್ತು. ಈ ಮೊದಲು ಸೀಲ್‌ಡೌನ್‌, ಲಾಕ್‌ಡೌನ್, ನೈಟ್‌ ಕರ್ಫ್ಯೂ, ಬಂದ್ ಹೇಳುವ ಮಾತನ್ನು ಕೇಳಿ ಕೇಳಿ ಒಂದು ವರ್ಷದಿಂದ ಜನ ಸುಸ್ತಾಗಿದ್ದರು. ಆದರೆ ಈಗ ಮತ್ತೆ ಗಡಿ ಜಿಲ್ಲೆಗಳಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಹಲವು ತಿಂಗಳುಗಳ ಬಳಿಕ ಮತ್ತೆ ಮಂಗಳೂರಿನಲ್ಲಿ ಸೀಲ್‌ಡೌನ್‌ ಮಾದರಿಯಲ್ಲಿ ಬಂದ್ ಮಾಡಲಾಗಿದೆ.

ಕರಾವಳಿಯಲ್ಲಿ ಕೇರಳ ಕೊರೊನಾದ ಆತಂಕ ಕೊರೊನಾ ಮಹಾಮಾರಿಯಿಂದಾಗಿ ಯೆನೆಪೋಯ ವಿವಿಯ 9 ಶಿಕ್ಷಣ ಸಂಸ್ಥೆಗಳಿಗೆ ಬೀಗ ಹಾಕಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕೂಡ ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆ. ಮಂಗಳೂರಿನ ತಲಪಾಡಿ ಸೇರಿದಂತೆ 24ಕ್ಕೂ ಹೆಚ್ಚು ಕೇರಳ ಸಂಪರ್ಕ ಬೆಸೆಯುವ ಗಡಿಗಳಿವೆ. ಇನ್ನು, ಕಾಲೇಜುಗಳನ್ನು ಆರಂಭ ಮಾಡಿದ ಮೇಲೆ ಈ ಕೊರೊನಾ ಹಾವಳಿ ಮತ್ತೆ ಹೆಚ್ಚಾಗುತ್ತಿದೆ.

ಮಂಗಳೂರು ಶಿಕ್ಷಣಕ್ಕೆ ಹೇಳು ಮಾಡಿಸಿದ ಜಿಲ್ಲೆ. ಆದ್ದರಿಂದ ಕೇರಳದಿಂದ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇಲ್ಲಿಗೆ ಬಂದು ಶಿಕ್ಷಣ ಪಡೆಯುತ್ತಾರೆ. ಅದರಿಂದ ರಾಜ್ಯ ಸರ್ಕಾರ ಕಾಲೇಜುಗಳಿಗೆ ಗೈಡ್‌ಲೈನ್ಸ್‌ ನಿರ್ಮಿಸಿ ಅದರ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ನೀಡಿತ್ತು. ಆದರೆ ಈಗ ಮಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತೆ ಬಾಗಿಲು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ. ಯೆನೆಪೋಯ ವಿವಿ 9ಶಿಕ್ಷಣ ಸಂಸ್ಥೆಗಳನ್ನ ಬಂದ್ ಮಾಡಲಾಗಿದೆ. ಇದಕ್ಕೆ ಕಾರಣ, ಎರಡರಿಂದ ಮೂರು ದಿನದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಬಂದಿದೆ.

ಇನ್ನು, ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಸೇರಿ ವಿವಿಧ ಅಧಿಕಾರಿಗಳ ತಂಡ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ದೂರು ಬಂದಿರೋ ಶಿಕ್ಷಣ ಸಂಸ್ಥೆಗಳ ಮೇಲೆ ತನಿಖೆ ನಡೆಸಲಾಗುತ್ತಿದೆ. ಕೊವಿಡ್​ಗೆ ಸಂಬಂಧಿಸಿ ನಿರ್ಲಕ್ಷ್ಯ ತೋರಿಸವರಿಗೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಸಮುದ್ರದ ಮಧ್ಯದಲ್ಲಿ ಮಂಗಳೂರು ಯುವಕ: ಕೊರೊನಾ ಭೀತಿ, ಮದುವೆ ಮುಂದೂಡಿಕೆ!

ಇದನ್ನೂ ಓದಿ: ಕಿಲ್ಲರ್ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ!

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್