AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಮಂಗಳೂರಿನ ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಪತ್ತೆಯಾಗಿದೆ.

ಮಂಗಳೂರಿನಲ್ಲಿ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಸಾಂದರ್ಭಿಕ ಚಿತ್ರ
shruti hegde
|

Updated on: Mar 18, 2021 | 11:44 AM

Share

ಮಂಗಳೂರು: ಕೊರೊನಾ ಪಾಸಿಟಿವ್​ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಮತ್ತು ಹಾಸ್ಟೆಲ್​ಅನ್ನು ಕಂಟೈನ್ ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.

ಇತ್ತೀಚೆಗೆ ಕೊವಿಡ್‌ ಸೋಂಕಿನ ಹರಡುವಿಕೆ ಪ್ರಮಾಣ ಕಡಿಮೆಯಾಗಿತ್ತು. ಈ ಮೊದಲು ಸೀಲ್‌ಡೌನ್‌, ಲಾಕ್‌ಡೌನ್, ನೈಟ್‌ ಕರ್ಫ್ಯೂ, ಬಂದ್ ಹೇಳುವ ಮಾತನ್ನು ಕೇಳಿ ಕೇಳಿ ಒಂದು ವರ್ಷದಿಂದ ಜನ ಸುಸ್ತಾಗಿದ್ದರು. ಆದರೆ ಈಗ ಮತ್ತೆ ಗಡಿ ಜಿಲ್ಲೆಗಳಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಹಲವು ತಿಂಗಳುಗಳ ಬಳಿಕ ಮತ್ತೆ ಮಂಗಳೂರಿನಲ್ಲಿ ಸೀಲ್‌ಡೌನ್‌ ಮಾದರಿಯಲ್ಲಿ ಬಂದ್ ಮಾಡಲಾಗಿದೆ.

ಕರಾವಳಿಯಲ್ಲಿ ಕೇರಳ ಕೊರೊನಾದ ಆತಂಕ ಕೊರೊನಾ ಮಹಾಮಾರಿಯಿಂದಾಗಿ ಯೆನೆಪೋಯ ವಿವಿಯ 9 ಶಿಕ್ಷಣ ಸಂಸ್ಥೆಗಳಿಗೆ ಬೀಗ ಹಾಕಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕೂಡ ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆ. ಮಂಗಳೂರಿನ ತಲಪಾಡಿ ಸೇರಿದಂತೆ 24ಕ್ಕೂ ಹೆಚ್ಚು ಕೇರಳ ಸಂಪರ್ಕ ಬೆಸೆಯುವ ಗಡಿಗಳಿವೆ. ಇನ್ನು, ಕಾಲೇಜುಗಳನ್ನು ಆರಂಭ ಮಾಡಿದ ಮೇಲೆ ಈ ಕೊರೊನಾ ಹಾವಳಿ ಮತ್ತೆ ಹೆಚ್ಚಾಗುತ್ತಿದೆ.

ಮಂಗಳೂರು ಶಿಕ್ಷಣಕ್ಕೆ ಹೇಳು ಮಾಡಿಸಿದ ಜಿಲ್ಲೆ. ಆದ್ದರಿಂದ ಕೇರಳದಿಂದ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇಲ್ಲಿಗೆ ಬಂದು ಶಿಕ್ಷಣ ಪಡೆಯುತ್ತಾರೆ. ಅದರಿಂದ ರಾಜ್ಯ ಸರ್ಕಾರ ಕಾಲೇಜುಗಳಿಗೆ ಗೈಡ್‌ಲೈನ್ಸ್‌ ನಿರ್ಮಿಸಿ ಅದರ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ನೀಡಿತ್ತು. ಆದರೆ ಈಗ ಮಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತೆ ಬಾಗಿಲು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ. ಯೆನೆಪೋಯ ವಿವಿ 9ಶಿಕ್ಷಣ ಸಂಸ್ಥೆಗಳನ್ನ ಬಂದ್ ಮಾಡಲಾಗಿದೆ. ಇದಕ್ಕೆ ಕಾರಣ, ಎರಡರಿಂದ ಮೂರು ದಿನದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಬಂದಿದೆ.

ಇನ್ನು, ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಸೇರಿ ವಿವಿಧ ಅಧಿಕಾರಿಗಳ ತಂಡ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ದೂರು ಬಂದಿರೋ ಶಿಕ್ಷಣ ಸಂಸ್ಥೆಗಳ ಮೇಲೆ ತನಿಖೆ ನಡೆಸಲಾಗುತ್ತಿದೆ. ಕೊವಿಡ್​ಗೆ ಸಂಬಂಧಿಸಿ ನಿರ್ಲಕ್ಷ್ಯ ತೋರಿಸವರಿಗೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಸಮುದ್ರದ ಮಧ್ಯದಲ್ಲಿ ಮಂಗಳೂರು ಯುವಕ: ಕೊರೊನಾ ಭೀತಿ, ಮದುವೆ ಮುಂದೂಡಿಕೆ!

ಇದನ್ನೂ ಓದಿ: ಕಿಲ್ಲರ್ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ!

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​