AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Shortage| ಜೀವವಾಯು ಆಕ್ಸಿಜನ್​ಗಾಗಿ ಬಂಧುಗಳ ಪರದಾಟ.. ಕಣ್ಣ ಮುಂದೆಯೇ ಪತ್ನಿ ಸಾವು, ಪತಿಗೆ ಮುಂದುವರಿದ ಚಿಕಿತ್ಸೆ

ಆಕ್ಸಿಜನ್ ಸಿಗದೆ 61 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಸಂಜೆ 8.30ಕ್ಕೆ ಆಕ್ಸಿಜನ್ ಕೊರತೆಯಿಂದ ಮಹಿಳೆ ಕೊನೆಯುಸಿರೆಳೆದಿದ್ದಾರೆ.

Oxygen Shortage| ಜೀವವಾಯು ಆಕ್ಸಿಜನ್​ಗಾಗಿ ಬಂಧುಗಳ ಪರದಾಟ.. ಕಣ್ಣ ಮುಂದೆಯೇ  ಪತ್ನಿ ಸಾವು, ಪತಿಗೆ ಮುಂದುವರಿದ ಚಿಕಿತ್ಸೆ
ಸಂಗ್ರಹ ಚಿತ್ರ
ಆಯೇಷಾ ಬಾನು
| Edited By: |

Updated on: Apr 20, 2021 | 2:53 PM

Share

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ನೀಡಲು ಈಗ ಆಕ್ಸಿಜನ್ ಕೊರತೆ ಎದುರಾಗಿದೆ. ಹೆಮ್ಮಾರಿ ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿದವರು, ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾರೆ. ಉಸಿರಾಡೋಕೆ ಆಗದೇ, ಒದ್ದಾಡ್ತಿದ್ದಾರೆ. ನಡುವೆ ಆಕ್ಸಿಜನ್ ಸಿಗದೆ 61 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಸಂಜೆ 8.30ಕ್ಕೆ ಆಕ್ಸಿಜನ್ ಕೊರತೆಯಿಂದ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಕಳೆದ ನಾಲ್ಕು ದಿನದ ಹಿಂದೆ ಕೊವಿಡ್ ಪರೀಕ್ಷೆಗೆ ಒಳಪಟ್ಟಿದ್ದ ದಂಪತಿಗೆ ಪಾಸಿಟಿವ್ ಇರೋದು ದೃಢಪಟ್ಟಿತ್ತು. ಕೂಡಲೇ ಬನಶಂಕರಿ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಾಲಾಗಿದ್ದರು. ನಿನ್ನೆ ಸಂಜೆ ಕೊರೊನಾ ಸೋಂಕಿತ ಮಹಿಳೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಆದ್ರೆ ಇದೇ ವೇಳೆ ಆಸ್ಪತ್ರೆಯಲ್ಲಿ ಜೀವ ರಕ್ಷಕ ಆಕ್ಸಿಜನ್ ಕೊರತೆ ಉಂಟಾಗಿದೆ. ತಕ್ಷಣವೇ ಮಹಿಳೆಯನ್ನು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ತಿಳಿಸಿದ್ದಾರೆ. ದಂಪತಿ ಸ್ನೇಹಿತರು ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆಯ ಹೆಲ್ಫ್ ಲೈನ್​ಗೆ ಕರೆ ಮಾಡಿದ್ದಾರೆ.

ಸಾಕಷ್ಟು ಬಾರಿ ಕರೆ ಮಾಡಿ ಮಹಿಳೆಗೆ ಆಕ್ಸಿಜನ್ ಬೇಕಾಗಿದೆ. ಅದಷ್ಟು ಬೇಗ ಬೆಡ್ ವ್ಯವಸ್ಥೆ ಮಾಡಿ ಎಂದು ಎಷ್ಟೇ ಅಂಗಲಾಚಿದರೂ ಬಿಯು ನಂಬರ್ ಇಲ್ಲದೇ ಆಸ್ಪತ್ರೆಗೆ ಸೇರಿಸಲು ಆಗಲ್ಲ ಎಂದು 108 ಸಿಬ್ಬಂದಿ ಅಸಡ್ಡೆ ಮಾಡಿದ್ದಾರೆ. ನಾಲ್ಕು ದಿನದ ಹಿಂದೆಯೇ ಕೊವಿಡ್ ದೃಢಪಟ್ಟಿದ್ರು ಇಲ್ಲಿವರೆಗೆ ಬಿಯು ನಂಬರ್ ಜನರೇಟ್ ಆಗಿರಲಿಲ್ಲ. ಜೊತೆಗೆ ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಮತ್ತು ಆಕ್ಸಿಜನ್ ಸಿಗದೇ ಮಹಿಳೆ ಮೃತಪಟ್ಟಿದ್ದಾರೆ. ಸದ್ಯ ಪತಿ ಅದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಸಾವಿಗೂ ಮುನ್ನ ಕೊರೊನಾ ಕರಾಳತೆ, ಆಸ್ಪತ್ರೆ ಅವ್ಯವಸ್ಥೆ ಬಯಲು ಮಾಡಿದ ಯುವಕ.. ಕೊನೆಗೆ ನರಳಿ ನರಳಿ ಪ್ರಾಣ ಬಿಟ್ಟ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ