AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆತಂಕದ ಮಧ್ಯೆ ದೇಗುಲದಲ್ಲಿ ಜನಜಂಗುಳಿ.. ಬಲಿ ಕೊಟ್ಟು ಹರಿಕೆ ತೀರಿಸೋಕೆ ಬಂದ ಭಕ್ತರು

ಯುಗಾದಿ ಹಬ್ಬದ ಮಾರನೆ ದಿನವಾದ ಇಂದು ವರ್ಷ ತೊಡಕಿನಂದು ಕೋಳಿ, ಕುರಿ ಬಲಿಕೊಟ್ಟು ತಮ್ಮ ಹರಕೆ ತೀರಿಸಲು ದೇವಾಲಯಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಪುಟ್ಟ ಪುಟ್ಟ ಮಕ್ಕಳೊಂದಿಗೆ ದೇವಾಲಯಗಳಿಗೆ ಬಂದಿದ್ದಾರೆ. ದೇವರಿಗೆ ಹರಕೆ ತೀರಿಸುವ ಭರದಲ್ಲಿ ಕೊರೊನಾವನ್ನೇ ಮರೆತಿದ್ದಾರೆ.

ಕೊರೊನಾ ಆತಂಕದ ಮಧ್ಯೆ ದೇಗುಲದಲ್ಲಿ ಜನಜಂಗುಳಿ.. ಬಲಿ ಕೊಟ್ಟು ಹರಿಕೆ ತೀರಿಸೋಕೆ ಬಂದ ಭಕ್ತರು
ಕೋಲಾರದ ಗಂಗಮ್ಮ ದೇವಾಲಯ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Apr 14, 2021 | 12:23 PM

Share

ಕೋಲಾರ: ಮಹಾಮಾರಿ ಕೊರೊನಾದ ಎರಡನೇ ಅಲೆಯ ಆರ್ಭಟ ಜೋರಾಗಿದೆ. ತಿಂಗಳಿಂದ ತಿಂಗಳಿಗೆ ಬಲಿಷ್ಠವಾಗಿ ವೈರಸ್ ಬೆಳೆಯುತ್ತಿದೆ. ಅಲ್ಲದೆ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರ ಕೊರೊನಾ ಗೈಡ್​ ಲೈನ್ಸ್​ ನೀಡಿದ್ದು ಜನ ಮಾತ್ರ ಭಾರಿ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಸಾಮಾಜಿಕ ಅಂತರವಾಗಲಿ, ಮಾಸ್ಕ್ ಆಗಲಿ ಧರಿಸದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಇದರ ನಡುವೆಯೇ ಕೋಲಾರ ನಗರದ ಅಮ್ಮವಾರಿ ಪೇಟೆಯ ಗಂಗಮ್ಮ ದೇವಾಲಯದಲ್ಲಿ ಜನ ಜಂಗುಳಿ ಕಂಡು ಬಂದಿದೆ.

ಯುಗಾದಿ ಹಬ್ಬದ ಮಾರನೆ ದಿನವಾದ ಇಂದು ವರ್ಷ ತೊಡಕಿನಂದು ಕೋಳಿ, ಕುರಿ ಬಲಿಕೊಟ್ಟು ತಮ್ಮ ಹರಕೆ ತೀರಿಸಲು ದೇವಾಲಯಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಪುಟ್ಟ ಪುಟ್ಟ ಮಕ್ಕಳೊಂದಿಗೆ ದೇವಾಲಯಗಳಿಗೆ ಬಂದಿದ್ದಾರೆ. ದೇವರಿಗೆ ಹರಕೆ ತೀರಿಸುವ ಭರದಲ್ಲಿ ಕೊರೊನಾವನ್ನೇ ಮರೆತಿದ್ದಾರೆ. ನೂರಾರು ಸಂಖ್ಯೆಯಲ್ಲಿ ದೇವಾಲಯ ತುಂಬೆಲ್ಲ ಜನ ತುಂಬಿಕೊಂಡಿದ್ದಾರೆ. ಭಕ್ತಿ ಪರವಶರಾಗಿ ರಕ್ಕಸ ಕೊರೊನಾ ವೈರಸನ್ನು ನಿರ್ಲಕ್ಷ್ಯಿಸಿದ್ದಾರೆ.

Gangamma temple

ಗಂಗಮ್ಮ ದೇವಾಲಯದಲ್ಲಿ ಜನ ಜಂಗುಳಿ

ಜನ ಜಂಗುಳಿ ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ಇಂದು ದೇವಾಲಯಕ್ಕೆ ಭಕ್ತರು ಹೆಚ್ಚಾಗಿ ಬರುವ ಸಾಧ್ಯತೆ ಬಗ್ಗೆ ಗೊತ್ತಿದ್ದರೂ ಅಗತ್ಯ ಕ್ರಮ ಕೈಗೊಂಡಿಲ್ಲ. ಸಾಮಾಜಿಕ ಅಂತರವಾಗಲಿ, ಮಾಸ್ಕ್ ಧರಿಸುವುದಾಗಲಿ ಯಾವುದೂ ಇಲ್ಲಿ ಪಾಲಿಸಲಾಗುತ್ತಿಲ್ಲ. ಕೊರೊನಾ ಮಾರ್ಗಸೂಚಿಯ ಉಲ್ಲಂಘನೆಯಾಗಿದೆ. ಹೊಸ ತೊಡಕಿನ ಸಂಭ್ರಮದಲ್ಲಿರುವ ಜನ ಕೊರೊನಾವನ್ನು ಮರೆತಿದ್ದಾರೆ. ಸದ್ಯ ಈಗ ಬಂದಿರುವ ಭಕ್ತರಲ್ಲಿ ಯಾರಿಗಾದರೂ ಕೊರೊನಾ ಬಂದಿದ್ದರೆ ಇದರಿಂದ ಮುಂದೆ ಭಾರಿ ಅನಾಹುತ ಸಂಭವಿಸಲಿದೆ.

Gangamma temple

ಗಂಗಮ್ಮ ದೇವಾಲಯದಲ್ಲಿ ಜನ ಜಂಗುಳಿ

Gangamma temple

ಗಂಗಮ್ಮ ದೇವಾಲಯದಲ್ಲಿ ಜನ ಜಂಗುಳಿ

Gangamma temple

ಗಂಗಮ್ಮ ದೇವಾಲಯದಲ್ಲಿ ಜನ ಜಂಗುಳಿ

Gangamma temple

ಗಂಗಮ್ಮ ದೇವಾಲಯದಲ್ಲಿ ಜನ ಜಂಗುಳಿ

(Corona Rules Violate in Kolar Devotees Rush to Gangamma Temple Over Hosa Todaku)

ಇದನ್ನೂ ಓದಿ: ಮಹಾಮಾರಿ ಕೊರೊನಾ ನಿವಾರಣೆಗಾಗಿ ದೇವಾಲಯದಲ್ಲಿ ಹೋಮ-ಹವನ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು