Naga Panchami 2021: ಜಿಲ್ಲೆಗಳಲ್ಲಿ ನಾಗರಪಂಚಮಿ ಹಬ್ಬದ ಸಂಭ್ರಮ, ಉಲ್ಲಂಘನೆಯಾಗುತ್ತಿದೆ ಕೊರೊನಾ ನಿಯಮ

ರಾಜ್ಯದ ಅನೇಕ ಕಡೆಗಳಿಂದ ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಭಕ್ತರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಕೊವಿಡ್ 3ನೇ ಅಲೆ ನಿಯಂತ್ರಿಸಲು ಪ್ರವೇಶ ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

Naga Panchami 2021: ಜಿಲ್ಲೆಗಳಲ್ಲಿ ನಾಗರಪಂಚಮಿ ಹಬ್ಬದ ಸಂಭ್ರಮ, ಉಲ್ಲಂಘನೆಯಾಗುತ್ತಿದೆ ಕೊರೊನಾ ನಿಯಮ
ಚಿಕ್ಕಬಳ್ಳಾಪುರ ನಗರದ ಮುಜರಾಯಿ ಇಲಾಖೆ ವ್ಯಾಪ್ತಿಯ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಪುರೋಹಿತರಿಂದಲೇ ಕೊವಿಡ್ ನಿಯಮಗಳ ಉಲ್ಲಂಘನೆಯಾಗಿದೆ
Follow us
| Updated By: ಆಯೇಷಾ ಬಾನು

Updated on:Aug 13, 2021 | 10:09 AM

ಮೈಸೂರು: ಶ್ರಾವಣ ಮಾಸದ(Shravana Masa)  ಶುಕ್ಲಪಕ್ಷ, ಪಂಚಮಿ ತಿಥಿಯಲ್ಲಿ ಬರುವ ನಾಗರಪಂಚಮಿ(Nagara Panchami) ಹಬ್ಬ, ಹಾಗೂ ಮೊದಲ ಶ್ರಾವಣ ಶುಕ್ರವಾರ ಹಿನ್ನೆಲೆ ಇಂದು ಭಕ್ತರು ದೇವಸ್ಥಾನಗಳತ್ತ ಮುಖ ಮಾಡಿದ್ದಾರೆ. ಆದ್ರೆ ಕೊರೊನಾ ಮೂರನೇ ಭೀತಿ ಹಿನ್ನೆಲೆಯಲ್ಲಿ ದೇವಸ್ಥಾನದ ಬಾಗಿಲುಗಳನ್ನು ಮುಚ್ಚಲಾಗಿದೆ. ಆದರೂ ಕೆಲವರು ದೇವಾಲಯದ ಬಾಗಿಲುಗಳ ಮುಂದೆಯೇ ಪೂಜೆ ಮಾಡಿ ಹಾಲೆರೆದು ಹೋಗುತ್ತಿದ್ದಾರೆ.

ರಾಜ್ಯದ ಅನೇಕ ಕಡೆಗಳಿಂದ ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಭಕ್ತರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಕೊವಿಡ್ 3ನೇ ಅಲೆ ನಿಯಂತ್ರಿಸಲು ಪ್ರವೇಶ ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಇಂದು ಹಾಗೂ ಮುಂದಿನ ಶುಕ್ರವಾರ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಚಾಮುಂಡೇಶ್ವರಿ ದೇಗುಲದ ಪೂಜೆಗಳು, ಧಾರ್ಮಿಕ ಆಚರಣೆಗಳು ಎಂದಿನಂತೆ ನಡೆಯಲಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಾಗರಪಂಚಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಗುಂಡಪ್ಪ ಬಡಾವಣೆಯಲ್ಲಿರುವ ಹುತ್ತಗಳಿಗೆ, ನಾಗರಕಲ್ಲುಗಳಿಗೆ ಹಾಲು ಎರೆದು ಪೂಜೆ ಸಲ್ಲಿಸಿ ಹೆಂಗಳೆಯರು, ಗೃಹಿಣಿಯರು ಸಂಭ್ರಮಿಸುತ್ತಿದ್ದಾರೆ. ಈ ವೇಳೆ ಕೊರೊನಾ ನಿಯಮ ಸಂಪೂರ್ಣ ಮರೆಯಾಗಿದೆ. ಇನ್ನು ಚಿಕ್ಕಬಳ್ಳಾಪುರ ನಗರದ ಮುಜರಾಯಿ ಇಲಾಖೆ ವ್ಯಾಪ್ತಿಯ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಪುರೋಹಿತರಿಂದಲೇ ಕೊವಿಡ್ ನಿಯಮಗಳ ಉಲ್ಲಂಘನೆಯಾಗಿದೆ.

Naga Panchami 2021

ಜಿಲ್ಲೆಗಳಲ್ಲಿ ನಾಗರಪಂಚಮಿ ಹಬ್ಬದ ಸಂಭ್ರಮ

ಇದನ್ನೂ ಓದಿ: ಕಲಬುರಗಿ: ನಾಗರ ಪಂಚಮಿ ಹಬ್ಬದ ದಿನ ಕೊಬ್ಬರಿ ಕುಬ್ಬಸ ನೀಡಿ, ಜೋಕಾಲಿ ಆಡುವುದು ವಾಡಿಕೆ

Published On - 10:08 am, Fri, 13 August 21

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು