AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚಳ: ತಾಂತ್ರಿಕ ಸಲಹಾ ಸಮಿತಿಯಿಂದ ರಾಜ್ಯ ಸರ್ಕಾರಕ್ಕೆ 16 ಅಂಶಗಳ ಶಿಫಾರಸು

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಚರ್ಚೆ ನಡೆಸಿದ್ದಾರೆ. ಚರ್ಚಿಸಿದ 16 ಅಂಶಗಳನ್ನು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ನೀಡಿದೆ. 16 ಅಂಶಗಳ ಶಿಫಾರಸಿನಲ್ಲಿ ಲಾಕ್​ಡೌನ್ ಪ್ರಸ್ತಾಪವಿಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ರಾಜ್ಯದ ಮುಖ್ಯಮಂತ್ರಿಗೆ ಮರು ಮಾಹಿತಿ ನೀಡಿದೆ.

ಕೊರೊನಾ ಹೆಚ್ಚಳ: ತಾಂತ್ರಿಕ ಸಲಹಾ ಸಮಿತಿಯಿಂದ ರಾಜ್ಯ ಸರ್ಕಾರಕ್ಕೆ 16 ಅಂಶಗಳ ಶಿಫಾರಸು
ಪ್ರಾತಿನಿಧಿಕ ಚಿತ್ರ
sandhya thejappa
| Edited By: |

Updated on: Apr 13, 2021 | 3:19 PM

Share

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯ ಮತ್ತೊಮ್ಮೆ ಲಾಕ್​ಡೌನ್​ ಆಗುತ್ತಾ ಎಂಬ ಪ್ರಶ್ನೆ ಮೂಡಿತ್ತು. ಆದರೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಾಕ್​ಡೌನ್​ ಮಾಡಲ್ಲ ಎಂದು ತಿಳಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಚರ್ಚೆ ನಡೆಸಿದ್ದಾರೆ. ಚರ್ಚಿಸಿದ 16 ಅಂಶಗಳನ್ನು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ನೀಡಿದೆ. 16 ಅಂಶಗಳ ಶಿಫಾರಸಿನಲ್ಲಿ ಲಾಕ್​ಡೌನ್ ಪ್ರಸ್ತಾಪವಿಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಮರು ಮಾಹಿತಿ ನೀಡಿದೆ.

ತಾಂತ್ರಿಕ ಸಲಹಾ ಸಮಿತಿ ಹೇಳಿದ ಅಂಶಗಳು

  • ಜನಸಂದಣಿ ನಿಯಂತ್ರಣಕ್ಕಾಗಿ 144 ಸೆಕ್ಷನ್ ಜಾರಿ ಮಾಡಬೇಕು.
  • ಬಿಬಿಎಂಪಿ ಪ್ರತಿ ವಾರ್ಡ್​ನಲ್ಲಿ 2 ಆ್ಯಂಬುಲೆನ್ಸ್ ನಿಯೋಜನೆ ಮಾಡಬೇಕು.
  • ಖಾಸಗಿ ಆಸ್ಪತ್ರೆಗಳಿಗೆ ಸಾಕಷ್ಟು ರೆಮ್ಡಿಸಿವಿರ್ ಲಸಿಕೆ ಪೂರೈಕೆ ಮಾಡಬೇಕು.
  • ಹೋಮ್ ಐಸೋಲೇಷನ್​ನಲ್ಲಿರುವವರಿಗೆ ಮೆಡಿಕಲ್ ಕಿಟ್, ಆಕ್ಸಿಮೀಟರ್ ಒದಗಿಸಿ ಸೂಕ್ತ ನಿಗಾ ಇರಿಸಬೇಕು.
  • ಆಸ್ಪತ್ರೆಯಲ್ಲಿ ಗುಣಮುಖರಾಗುತ್ತಿರುವ ಸೋಂಕಿತರನ್ನು ಕೊವಿಡ್ ಕೇರ್ ಸೆಂಟರ್​ಗಳಿಗೆ ಸ್ಥಳಾಂತರಿಸಬೇಕು.
  • ಆಸ್ಪತ್ರೆಗಳಿಗೆ ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್, ಬೆಡ್​ಗಳು, ಔಷಧಗಳ ಪೂರೈಕೆ ಮತ್ತು ದಾಸ್ತಾನು ಮಾಡುವುದು.
  • ನಕಲಿ ಆಕ್ಸಿಮೀಟರ್​​ಗಳನ್ನು ನಿಷೇಧ ಮಾಡುವುದು.
  • ರಾಜ್ಯದ ಉತ್ತರ ಭಾಗದ ಕೆಲವು ಜಿಲ್ಲೆಗಳಿಗೆ ಟೆಲಿ ಟ್ರೀಟ್​ಮೆಂಟ್ ಸೇವೆ ಪೂರೈಸಬೇಕೆಂದು ಕೊವಿಡ್ ತಾಂತ್ರಿಕ ಸಲಹಾ ಸಮಿತಿ 16 ಅಂಶಗಳ ಶಿಫಾರಸನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಶಿಫಾರಸು ಮಾಡಿದೆ.

ಇದನ್ನೂ ಓದಿ

Karnataka Lockdown: ಸದ್ಯಕ್ಕೆ ಲಾಕ್​ಡೌನ್​ ಮಾಡಲ್ಲ.. ತಾಂತ್ರಿಕ ಸಲಹಾ ಸಮಿತಿ ಲಾಕ್​ಡೌನ್​ಗೆ ಸೂಚಿಸಿಯೂ ಇಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಸಂಸ್ಕೃತ ಕಲಿಕೆಗಾಗಿ ಲಿಟಲ್ ಗುರು ಆ್ಯಪ್ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!