ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಚರ್ಚೆ ನಡೆಸಿದ್ದಾರೆ. ಚರ್ಚಿಸಿದ 16 ಅಂಶಗಳನ್ನು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ನೀಡಿದೆ. 16 ಅಂಶಗಳ ಶಿಫಾರಸಿನಲ್ಲಿ ಲಾಕ್ಡೌನ್ ಪ್ರಸ್ತಾಪವಿಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ರಾಜ್ಯದ ಮುಖ್ಯಮಂತ್ರಿಗೆ ಮರು ಮಾಹಿತಿ ನೀಡಿದೆ.
Ad
ಪ್ರಾತಿನಿಧಿಕ ಚಿತ್ರ
Follow us on
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯ ಮತ್ತೊಮ್ಮೆ ಲಾಕ್ಡೌನ್ ಆಗುತ್ತಾ ಎಂಬ ಪ್ರಶ್ನೆ ಮೂಡಿತ್ತು. ಆದರೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಾಕ್ಡೌನ್ ಮಾಡಲ್ಲ ಎಂದು ತಿಳಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಚರ್ಚೆ ನಡೆಸಿದ್ದಾರೆ. ಚರ್ಚಿಸಿದ 16 ಅಂಶಗಳನ್ನು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ನೀಡಿದೆ. 16 ಅಂಶಗಳ ಶಿಫಾರಸಿನಲ್ಲಿ ಲಾಕ್ಡೌನ್ ಪ್ರಸ್ತಾಪವಿಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಮರು ಮಾಹಿತಿ ನೀಡಿದೆ.
ತಾಂತ್ರಿಕ ಸಲಹಾ ಸಮಿತಿ ಹೇಳಿದ ಅಂಶಗಳು
ಜನಸಂದಣಿ ನಿಯಂತ್ರಣಕ್ಕಾಗಿ 144 ಸೆಕ್ಷನ್ ಜಾರಿ ಮಾಡಬೇಕು.
ಬಿಬಿಎಂಪಿ ಪ್ರತಿ ವಾರ್ಡ್ನಲ್ಲಿ 2 ಆ್ಯಂಬುಲೆನ್ಸ್ ನಿಯೋಜನೆ ಮಾಡಬೇಕು.
ಖಾಸಗಿ ಆಸ್ಪತ್ರೆಗಳಿಗೆ ಸಾಕಷ್ಟು ರೆಮ್ಡಿಸಿವಿರ್ ಲಸಿಕೆ ಪೂರೈಕೆ ಮಾಡಬೇಕು.
ಹೋಮ್ ಐಸೋಲೇಷನ್ನಲ್ಲಿರುವವರಿಗೆ ಮೆಡಿಕಲ್ ಕಿಟ್, ಆಕ್ಸಿಮೀಟರ್ ಒದಗಿಸಿ ಸೂಕ್ತ ನಿಗಾ ಇರಿಸಬೇಕು.
ಆಸ್ಪತ್ರೆಯಲ್ಲಿ ಗುಣಮುಖರಾಗುತ್ತಿರುವ ಸೋಂಕಿತರನ್ನು ಕೊವಿಡ್ ಕೇರ್ ಸೆಂಟರ್ಗಳಿಗೆ ಸ್ಥಳಾಂತರಿಸಬೇಕು.
ಆಸ್ಪತ್ರೆಗಳಿಗೆ ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್, ಬೆಡ್ಗಳು, ಔಷಧಗಳ ಪೂರೈಕೆ ಮತ್ತು ದಾಸ್ತಾನು ಮಾಡುವುದು.
ನಕಲಿ ಆಕ್ಸಿಮೀಟರ್ಗಳನ್ನು ನಿಷೇಧ ಮಾಡುವುದು.
ರಾಜ್ಯದ ಉತ್ತರ ಭಾಗದ ಕೆಲವು ಜಿಲ್ಲೆಗಳಿಗೆ ಟೆಲಿ ಟ್ರೀಟ್ಮೆಂಟ್ ಸೇವೆ ಪೂರೈಸಬೇಕೆಂದು ಕೊವಿಡ್ ತಾಂತ್ರಿಕ ಸಲಹಾ ಸಮಿತಿ 16 ಅಂಶಗಳ ಶಿಫಾರಸನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಶಿಫಾರಸು ಮಾಡಿದೆ.