AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅನ್​ಲಾಕ್​ ಆದರೂ ಸಾರಿಗೆ ಸಂಚಾರ ಡೌಟ್

ಜೂನ್ 14ರ ನಂತರ ಕೇವಲ ಅಗತ್ಯವಸ್ತುಗಳ ಖರೀದಿ ಸಮಯ ವಿಸ್ತರಣೆ ಮಾಡಲಾಗುತ್ತೆ. ಅಂದುಕೊಂಡಂತೆ ಕೊವಿಡ್ ಪಾಸಿಟಿವಿಟಿ ದರ ಕಡಿಮೆಯಾಗದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಸ್ ಸಂಚಾರಕ್ಕೆ ಅನುಮತಿ ಸಿಗುವುದು ಡೌಟ್ ಆಗಿದೆ. ಕೇವಲ ಆಟೋ, ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಅನ್​ಲಾಕ್​ ಆದರೂ ಸಾರಿಗೆ ಸಂಚಾರ ಡೌಟ್
ಬಿಎಂಟಿಸಿ ಬಸ್​ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Jun 10, 2021 | 11:52 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಲಾಕ್​ಡೌನ್ ಹೇರಲಾಗಿತ್ತು. ಸದ್ಯ ಈಗ ಕೊರೊನಾ ಸೋಂಕಿನ ಸಾವು-ನೋವು ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಜೂನ್ 14ರ ಬಳಿಕ ಹಂತ ಹಂತವಾಗಿ ಅನ್‌ಲಾಕ್ ಮಾಡಲು ಸರ್ಕಾರ ಚಿಂತಿಸಿದೆ. ಆದರೆ ಅನ್​ಲಾಕ್ ಆದ ಬಳಿಕ ಸಾರಿಗೆ ಸಂಚಾರ ಶುರುವಾಗಲಿದೆ ಎಂದು ನಿರೀಕ್ಷಿಸುತ್ತಿದ್ದವರಿಗೆ ಸರ್ಕಾರ ಶಾಕ್ ಕೊಡಲಿದೆ. ಅನ್​ಲಾಕ್​ ಆದರೂ ಬೆಂಗಳೂರಿನಲ್ಲಿ ಬಸ್ ಸಂಚಾರಕ್ಕೆ ಅನುಮತಿ ಸಿಗುವುದು ಡೌಟ್ ಆಗಿದೆ.

ಜೂನ್ 14ರ ನಂತರ ಕೇವಲ ಅಗತ್ಯವಸ್ತುಗಳ ಖರೀದಿ ಸಮಯ ವಿಸ್ತರಣೆ ಮಾಡಲಾಗುತ್ತೆ. ಅಂದುಕೊಂಡಂತೆ ಕೊವಿಡ್ ಪಾಸಿಟಿವಿಟಿ ದರ ಕಡಿಮೆಯಾಗದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಸ್ ಸಂಚಾರಕ್ಕೆ ಅನುಮತಿ ಸಿಗುವುದು ಡೌಟ್ ಆಗಿದೆ. ಕೇವಲ ಆಟೋ, ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆ ಇದೆ. ಬಟ್ಟೆ, ಚಿನ್ನದಂಗಡಿಗೆ ವಾರದಲ್ಲಿ 3 ದಿನ ಅವಕಾಶ ಸಿಗುವ ಸಾಧ್ಯತೆ ವ್ಯಕ್ತವಾಗಿದೆ. ಬೆಂಗಳೂರಿನ ನಾಲ್ಕು ವಲಯದಲ್ಲಿ ಕೊರೊನಾ ಪಾಸಿಟಿವ್ ರೇಟ್ ಶೇಕಡಾ 5ಕ್ಕಿಂತ ಮೇಲಿದೆ. ಹೀಗಾಗಿ ಬಿಎಂಟಿಸಿ ಬಸ್ ಸಂಚಾರ ಬೇಡ ಎಂಬ ಚರ್ಚೆ ಶುರುವಾಗಿದೆ. ಬೊಮ್ಮನಹಳ್ಳಿ ವಲಯದಲ್ಲಿ ಶೇಕಡಾ 5.2ಇದೆ. ಪೂರ್ವ ವಲಯದಲ್ಲಿ ಶೇಕಡಾ 5..3, ಮಹಾದೇವಪುರ ವಲಯ-5.6, ಆರ್ ಆರ್ ನಗರ- 5.4 ಇದೆ. ಕಳೆದ ಹತ್ತು ದಿನದಲ್ಲಿ ಈ ವಲಯಗಳಲ್ಲಿ ಪಾಸಿಟಿವ್ ರೇಟ್ ಕಡಿಮೆಯಾಗಿಲ್ಲ. ಹೀಗಾಗಿ ಆಟೋ, ಓಲಾ, ಉಬರ್​ಗೆ ಅವಕಾಶ ಕೊಟ್ಟು ಬಸ್ ಸೇವೆ ಬೇಡ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಬೆಂಗಳೂರು ಅನ್​ಲಾಕ್​ಗೆ ಅಧಿಕಾರಿಗಳಿಂದ ನೀಲನಕ್ಷೆ ಸಿದ್ಧ ಅಗತ್ಯ ವಸ್ತುಗಳ ಖರೀದಿ ಸಮಯ ವಿಸ್ತರಣೆ ಕುರಿತು ಚರ್ಚೆ ನಡೆದಿದೆ. ಬೆಳಗ್ಗೆ 6-12 ಗಂಟೆಯವರೆಗೆ ಖರೀದಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಬಾರ್-ರೆಸ್ಟೋರೆಂಟ್​ಗಳಲ್ಲಿ ಸಂಜೆಯವರೆಗೆ ಪಾರ್ಸೆಲ್ ನೀಡುವುದಕ್ಕೆ ಅನುಮತಿ ನೀಡಲಾಗುತ್ತೆ. ಪಾರ್ಕ್​ಗಳಲ್ಲಿ ಬೆಳಗ್ಗೆ 5ರಿಂದ 8 ಗಂಟೆಯವರೆಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಜನಸಂದಣಿ ಕಾರ್ಯಕ್ರಮಗಳಿಗೆ ಸಂಪೂರ್ಣ ನಿರ್ಬಂಧ. ಜೂನ್ ಅಂತ್ಯದವರೆಗೂ ರಾತ್ರಿ ಕರ್ಫ್ಯೂ ಜಾರಿಯಾಗಬಹುದು. ಷರತ್ತುಬದ್ಧ ಅನ್​ಲಾಕ್ ಪ್ರಕ್ರಿಯೆಗೆ ಅಧಿಕಾರಿಗಳ ಪ್ರಸ್ತಾಪಿಸಿದ್ದು ನಿನ್ನೆ ಸಚಿವ ಅಶೋಕ್ ನೇತೃತ್ವದಲ್ಲಿ ಪೂರ್ವಭಾವಿ ಚರ್ಚೆ ನಡೆದಿದೆ.

ಇದನ್ನೂ ಓದಿ: CM on Lockdown Relaxation : ಶೇ.5ಕ್ಕಿಂತ ಪಾಸಿಟಿವಿಟಿ ರೇಟ್ ಬರೋ ಜಿಲ್ಲೆಗಳಲ್ಲಿ ಅನ್​ಲಾಕ್..?

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!