AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಹಾಕಿಸಿಕೊಂಡರೆ ಕೊರೊನಾ ಸೋಂಕು ತಗುಲುವ ಅಪಾಯ ಕಡಿಮೆ, ಬಾಗಲಕೋಟೆಯಲ್ಲಿ ತಜ್ಞರ ಅಧ್ಯಯನ

ಕೊವಿಡ್ ಲಸಿಕೆ ಪಡೆದವರಿಗೆ ಕೊರೊನಾ ಹರಡುವ ಸಾಧ್ಯತೆ ಕಡಿಮೆ ಎಂದು ಬಾಗಲಕೋಟೆ ಖಾಸಗಿ ವೈದ್ಯರ ಅಧ್ಯಯನದಿಂದ ಮಾಹಿತಿ ತಿಳಿದು ಬಂದಿದೆ. ಇನ್ನು ಇದೇ ರೀತಿ ಲಸಿಕೆ ಪಡೆದವರಿಗೆ ಸೋಂಕು ತಗುಲುವ ಸಾಧ್ಯತೆ ಕಡಿಮೆ ಎಂದು ಆಕ್ಸ್ಫರ್ಡ್ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ತಿಳಿದು ಬಂದಿತ್ತು.

ಲಸಿಕೆ ಹಾಕಿಸಿಕೊಂಡರೆ ಕೊರೊನಾ ಸೋಂಕು ತಗುಲುವ ಅಪಾಯ ಕಡಿಮೆ, ಬಾಗಲಕೋಟೆಯಲ್ಲಿ ತಜ್ಞರ ಅಧ್ಯಯನ
ಕೊರೊನಾ ಲಸಿಕೆ (ಸಂಗ್ರಹ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on: May 23, 2021 | 7:56 AM

Share

ಬಾಗಲಕೋಟೆ: ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ದೇಶಾದ್ಯಂತ ಲಸಿಕೆ ಅಭಿಯಾನ ನಡೆಯುತ್ತಿದೆ. ಆದರೆ ಅನೇಕರಲ್ಲಿ ಲಸಿಕೆಯಿಂದ ಸೈಡ್ ಎಫೆಕ್ಟ್ ಹೆಚ್ಚು. ಲಸಿಕೆ ಹಾಕಿಸಿಕೊಂಡರೆ ಇದಾಗುತ್ತೆ, ಅದಾಗುತ್ತೆ ಎಂಬ ಅನೇಕ ಗೊಂದಲಗಳಿವೆ. ಹೀಗಾಗಿ ಅದೆಷ್ಟೋ ಮಂದಿ ಲಸಿಕೆ ಪಡೆಯಲು ಹಿಂದೇಡು ಹಾಕುತ್ತಿದ್ದಾರೆ. ಆದರೆ ಕೊವಿಡ್ ಲಸಿಕೆ ಪಡೆದವರಿಗೆ ಕೊರೊನಾ ಹರಡುವ ಸಾಧ್ಯತೆ ಕಡಿಮೆ ಎಂದು ಬಾಗಲಕೋಟೆ ಖಾಸಗಿ ವೈದ್ಯರ ಅಧ್ಯಯನದಿಂದ ಮಾಹಿತಿ ತಿಳಿದು ಬಂದಿದೆ.

ಕೊರೊನಾ ಎರಡನೇ ಅಲೆಯಲ್ಲಿ ಹಿನ್ನೆಲೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿದವರ ಮಾಹಿತಿ ಸಂಗ್ರಹಿಸಿ ಬಾಗಲಕೋಟೆ ಸಿಟಿ ಸ್ಕ್ಯಾನ್ ಸೆಂಟರ್ ತಜ್ಞರು ಅಧ್ಯಯನ ನಡೆಸಿದ್ದಾರೆ. ತಜ್ಞರಾದ ಸುಧೀಂದ್ರ, ಅಖಿಲ್ ಅವರ ಅಧ್ಯಯನದ ಪ್ರಕಾರ ಸಿಟಿ ಸ್ಕ್ಯಾನ್ ಮಾಡಿಸಿದ ಜಿಲ್ಲೆಯ 1,158 ಜನರ ಪೈಕಿ ಲಸಿಕೆ ಪಡೆಯದ 806 (ಶೇ. 69.6 ರಷ್ಟು) ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೂ ಸಿಂಗಲ್ ಡೋಸ್ ಪಡೆದ 294(ಶೇ.25.3 ರಷ್ಟು) ಜನರಿಗೆ ಕೊರೊನಾ ಸೋಂಕು ತಗುಲಿದೆ. ಮತ್ತು 2 ಡೋಸ್ ಪಡೆದವರ ಪೈಕಿ 50(ಶೇ.5 ರಷ್ಟು) ಜನರಿಗೆ ಮಾತ್ರ ಸೋಂಕು ತಗುಲಿದೆ.

ಎರಡೂ ಡೋಸ್ ಪಡೆದ ಸೋಂಕಿತರ ಲಂಗ್ಸ್ ಡ್ಯಾಮೇಜ್ ಆಗುವುದು ತೀರಾ ಕಡಿಮೆ ಇರುವುದು ಕಂಡು ಬಂದಿದೆ. ಲಸಿಕೆ ಪಡೆದವರಲ್ಲಿ ಕೆಲವರಿಗೆ ಸೋಂಕು ಕಾಣಿಸಿಕೊಂಡರೂ ಸಾವು ಸಂಭವಿಸಿಲ್ಲ. ಯಾವುದೇ ಪ್ರಚಾರ, ಅಪ್ರಚಾರಕ್ಕೆ ಕಿವಿಗೊಡದೇ ಜನರು ಲಸಿಕೆ ಪಡೆಯಬೇಕು ಎಂದು ತಜ್ಞ ವೈದ್ಯರು ಅಧ್ಯಯನ ಬಳಿಕ ತಿಳಿಸಿದ್ದಾರೆ. ಫ್ರಂಟ್ ಲೈನ್ ವಾರಿಯರ್ಸ್ ಲಸಿಕೆ ಪಡೆದ ಪರಿಣಾಮವೇ ಎರಡನೇ ಅಲೆಯ ಸಾವಿನ ಸರಣಿಯಲ್ಲಿ ಸೇಫ್ ಆಗಿದ್ದಾರೆ. ಕೊರೊನಾಗೆ ಬಲಿಯಾದ ಬಹುತೇಕರು ಲಸಿಕೆ ಪಡೆದಿಲ್ಲ ಎನ್ನುವುದು ಅನೇಕ ಸೋಂಕಿತರಿಗೆ ಚಿಕಿತ್ಸೆ ನೀಡಿರುವ ವೈದ್ಯರ ಅಭಿಮತ. ಲಸಿಕೆ ಪಡೆದು ಜೀವ ಉಳಿಸಿಕೊಳ್ಳಿ ಎಂದು ವೈದ್ಯರು, ಸ್ಕ್ಯಾನ್ ಸೆಂಟರ್ ತಜ್ಞ ವೈದ್ಯರು ತಿಳಿಸಿದ್ದಾರೆ.

ಇನ್ನು ಇದೇ ರೀತಿ ಲಸಿಕೆ ಪಡೆದವರಿಗೆ ಸೋಂಕು ತಗುಲುವ ಸಾಧ್ಯತೆ ಕಡಿಮೆ ಎಂದು ಆಕ್ಸ್ಫರ್ಡ್ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ತಿಳಿದು ಬಂದಿತ್ತು.

ಇದನ್ನೂ ಓದಿ: Corona Vaccine: ಕೊರೊನಾ ಲಸಿಕೆಯನ್ನು ಕೈಗೆ ಏಕೆ ನೀಡಲಾಗುತ್ತದೆ? ಸೊಂಟಕ್ಕೆ ಏಕಿಲ್ಲ? ಇಲ್ಲಿದೆ ಸಂಪೂರ್ಣ ವಿವರ

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!