AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Vaccine Shortage ಎರಡನೇ ಡೋಸ್ ಲಸಿಕೆ ಪಡೆಯಲು ಬಂದಿದ್ದ ಜನ ಆಕ್ರೋಶದಿಂದಲೇ ಮನೆಗೆ ವಾಪಸ್

ಲಸಿಕೆಯ ಅಭಾವ ಶುರುವಾಗಿದೆ. 2ನೇ ಡೋಸ್ ಲಸಿಕೆ ಪಡೆಯಲು ಬೆಳಗ್ಗೆ 4ರಿಂದ ಬೆಂಗಳೂರಿನ ಯಲಹಂಕದ ಲಸಿಕಾ ಕೇಂದ್ರದ ಬಳಿ ವೇಟಿಂಗ್ ಮಾಡ್ತಿದ್ದ ಜನ ಲಸಿಕೆ ಇಲ್ಲದಿರುವುದು ತಿಳಿಯುತ್ತಿದ್ದಂತೆ ಲಸಿಕಾ ಕೇಂದ್ರದ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

Corona Vaccine Shortage ಎರಡನೇ ಡೋಸ್ ಲಸಿಕೆ ಪಡೆಯಲು ಬಂದಿದ್ದ ಜನ ಆಕ್ರೋಶದಿಂದಲೇ ಮನೆಗೆ ವಾಪಸ್
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on: May 12, 2021 | 9:19 AM

Share

ಆನೇಕಲ್: ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ ಮಟ್ಟ ಹಾಕಲು ವ್ಯಾಕ್ಸಿನೇಷನ್ ಡ್ರೈವ್ ಶುರುವಾಗಿದೆ. ಆದ್ರೆ, ಬೇಡಿಕೆಗೆ ತಕ್ಕಂತೆ ಲಸಿಕೆ ಪೂರೈಕೆ ಆಗ್ತಿಲ್ಲ. ಹೀಗಾಗಿ 2ನೇ ಡೋಸ್ ಲಸಿಕೆ ಪಡೆಯಲು ಬಂದಿದ್ದ ಮಂದಿ ಬೆಂಗಳೂರಿನ ಯಲಹಂಕದ ಲಸಿಕಾ ಕೇಂದ್ರದ ಬಳಿ ಕಾದೂ ಕಾದು ಸುಸ್ತಾಗಿ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಕೊರೊನಾ ಅನ್ನೋ ಮಹಾಮಾರಿ ದೇಶದಲ್ಲಿ ಸೃಷ್ಟಿಸಿರೋ ಪರಿಸ್ಥಿತಿ ಬೇರಾವ ರಾಜ್ಯಗಳಿಗೂ ಬೇಡ. ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕೊರೊನಾ ರುದ್ರ ನರ್ತನಕ್ಕೆ ಇಡೀ ರಾಜ್ಯವೇ ತತ್ತರಿಸಿ ಹೋಗ್ತಿದೆ. ಇಂತಾ ಸಮಯದಲ್ಲಿ ರಾಜ್ಯದ ಎಲ್ಲರಿಗೂ ಲಸಿಕೆ ನೀಡಬೇಕು ಅಂತಾ ಸರ್ಕಾರ ಈಗ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಸಮ್ಮತಿ ಸೂಚಿಸಿದೆ. ಆದ್ರೆ ರಾಜ್ಯದಲ್ಲಿ ಈ ಹಿಂದೆ ಮೊದಲ ಡೋಸ್ ಪಡೆದ 45 ವರ್ಷ ಮೇಲ್ಪಟ್ಟವರಿಗೆಯೇ ಲಸಿಕೆ ಸಿಗುತ್ತಿಲ್ಲ.

ಲಸಿಕೆಯ ಅಭಾವ ಶುರುವಾಗಿದೆ. 2ನೇ ಡೋಸ್ ಲಸಿಕೆ ಪಡೆಯಲು ಬೆಳಗ್ಗೆ 4ರಿಂದ ಬೆಂಗಳೂರಿನ ಯಲಹಂಕದ ಲಸಿಕಾ ಕೇಂದ್ರದ ಬಳಿ ವೇಟಿಂಗ್ ಮಾಡ್ತಿದ್ದ ಜನ ಲಸಿಕೆ ಇಲ್ಲದಿರುವುದು ತಿಳಿಯುತ್ತಿದ್ದಂತೆ ಲಸಿಕಾ ಕೇಂದ್ರದ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಬೆಳಗ್ಗೆ 4 ಗಂಟೆಯಿಂದ ನಾವು ಲಸಿಕೆಗಾಗಿ ಕಾಯುತ್ತಿದ್ದೇವೆ. ನಿಮ್ಮ ಬಳಿ ಕೊವ್ಯಾಕ್ಸಿನ್ ಲಸಿಕೆ ಇಲ್ಲದಿದ್ದರೆ ಲಸಿಕಾ ಕೇಂದ್ರದ ಮುಂದೆ ಲಸಿಕೆ ಇಲ್ಲವೆಂದು ಚೀಟಿ ಅಂಟಿಸಿ. ಬೆಳಗ್ಗೆಯಿಂದ ಕಾದು ಈಗ ಬಂದು ಲಸಿಕೆ ಇಲ್ಲ ಅಂದ್ರೆ ಹೇಗೆಂದು ಸಾರ್ವಜನಿಕರು ಗರಂ ಆಗಿದ್ದಾರೆ.

ಇದನ್ನೂ ಓದಿ: ಲಸಿಕೆ ಕೊರತೆ ಎದುರಾಗಿದೆ ಏಕೆ? ಲಸಿಕೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಎಡವಿದ್ದೆಲ್ಲಿ? ಲಸಿಕೆ ಕೊರತೆಯ ಸಮಸ್ಯೆಗೆ ಪರಿಹಾರ ಏನು?

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!