AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Vaccine Shortage ಎರಡನೇ ಡೋಸ್ ಲಸಿಕೆ ಪಡೆಯಲು ಬಂದಿದ್ದ ಜನ ಆಕ್ರೋಶದಿಂದಲೇ ಮನೆಗೆ ವಾಪಸ್

ಲಸಿಕೆಯ ಅಭಾವ ಶುರುವಾಗಿದೆ. 2ನೇ ಡೋಸ್ ಲಸಿಕೆ ಪಡೆಯಲು ಬೆಳಗ್ಗೆ 4ರಿಂದ ಬೆಂಗಳೂರಿನ ಯಲಹಂಕದ ಲಸಿಕಾ ಕೇಂದ್ರದ ಬಳಿ ವೇಟಿಂಗ್ ಮಾಡ್ತಿದ್ದ ಜನ ಲಸಿಕೆ ಇಲ್ಲದಿರುವುದು ತಿಳಿಯುತ್ತಿದ್ದಂತೆ ಲಸಿಕಾ ಕೇಂದ್ರದ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

Corona Vaccine Shortage ಎರಡನೇ ಡೋಸ್ ಲಸಿಕೆ ಪಡೆಯಲು ಬಂದಿದ್ದ ಜನ ಆಕ್ರೋಶದಿಂದಲೇ ಮನೆಗೆ ವಾಪಸ್
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on: May 12, 2021 | 9:19 AM

Share

ಆನೇಕಲ್: ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ ಮಟ್ಟ ಹಾಕಲು ವ್ಯಾಕ್ಸಿನೇಷನ್ ಡ್ರೈವ್ ಶುರುವಾಗಿದೆ. ಆದ್ರೆ, ಬೇಡಿಕೆಗೆ ತಕ್ಕಂತೆ ಲಸಿಕೆ ಪೂರೈಕೆ ಆಗ್ತಿಲ್ಲ. ಹೀಗಾಗಿ 2ನೇ ಡೋಸ್ ಲಸಿಕೆ ಪಡೆಯಲು ಬಂದಿದ್ದ ಮಂದಿ ಬೆಂಗಳೂರಿನ ಯಲಹಂಕದ ಲಸಿಕಾ ಕೇಂದ್ರದ ಬಳಿ ಕಾದೂ ಕಾದು ಸುಸ್ತಾಗಿ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಕೊರೊನಾ ಅನ್ನೋ ಮಹಾಮಾರಿ ದೇಶದಲ್ಲಿ ಸೃಷ್ಟಿಸಿರೋ ಪರಿಸ್ಥಿತಿ ಬೇರಾವ ರಾಜ್ಯಗಳಿಗೂ ಬೇಡ. ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕೊರೊನಾ ರುದ್ರ ನರ್ತನಕ್ಕೆ ಇಡೀ ರಾಜ್ಯವೇ ತತ್ತರಿಸಿ ಹೋಗ್ತಿದೆ. ಇಂತಾ ಸಮಯದಲ್ಲಿ ರಾಜ್ಯದ ಎಲ್ಲರಿಗೂ ಲಸಿಕೆ ನೀಡಬೇಕು ಅಂತಾ ಸರ್ಕಾರ ಈಗ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಸಮ್ಮತಿ ಸೂಚಿಸಿದೆ. ಆದ್ರೆ ರಾಜ್ಯದಲ್ಲಿ ಈ ಹಿಂದೆ ಮೊದಲ ಡೋಸ್ ಪಡೆದ 45 ವರ್ಷ ಮೇಲ್ಪಟ್ಟವರಿಗೆಯೇ ಲಸಿಕೆ ಸಿಗುತ್ತಿಲ್ಲ.

ಲಸಿಕೆಯ ಅಭಾವ ಶುರುವಾಗಿದೆ. 2ನೇ ಡೋಸ್ ಲಸಿಕೆ ಪಡೆಯಲು ಬೆಳಗ್ಗೆ 4ರಿಂದ ಬೆಂಗಳೂರಿನ ಯಲಹಂಕದ ಲಸಿಕಾ ಕೇಂದ್ರದ ಬಳಿ ವೇಟಿಂಗ್ ಮಾಡ್ತಿದ್ದ ಜನ ಲಸಿಕೆ ಇಲ್ಲದಿರುವುದು ತಿಳಿಯುತ್ತಿದ್ದಂತೆ ಲಸಿಕಾ ಕೇಂದ್ರದ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಬೆಳಗ್ಗೆ 4 ಗಂಟೆಯಿಂದ ನಾವು ಲಸಿಕೆಗಾಗಿ ಕಾಯುತ್ತಿದ್ದೇವೆ. ನಿಮ್ಮ ಬಳಿ ಕೊವ್ಯಾಕ್ಸಿನ್ ಲಸಿಕೆ ಇಲ್ಲದಿದ್ದರೆ ಲಸಿಕಾ ಕೇಂದ್ರದ ಮುಂದೆ ಲಸಿಕೆ ಇಲ್ಲವೆಂದು ಚೀಟಿ ಅಂಟಿಸಿ. ಬೆಳಗ್ಗೆಯಿಂದ ಕಾದು ಈಗ ಬಂದು ಲಸಿಕೆ ಇಲ್ಲ ಅಂದ್ರೆ ಹೇಗೆಂದು ಸಾರ್ವಜನಿಕರು ಗರಂ ಆಗಿದ್ದಾರೆ.

ಇದನ್ನೂ ಓದಿ: ಲಸಿಕೆ ಕೊರತೆ ಎದುರಾಗಿದೆ ಏಕೆ? ಲಸಿಕೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಎಡವಿದ್ದೆಲ್ಲಿ? ಲಸಿಕೆ ಕೊರತೆಯ ಸಮಸ್ಯೆಗೆ ಪರಿಹಾರ ಏನು?

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು