AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆದ ಮೇಲೆ ಏನಾದರೂ ಆದರೆ ಪರಿಹಾರ ಮೊತ್ತ ಕೊಡಬೇಕು: ಸರ್ಕಾರಿ ನೌಕರರ ಮನವಿ

ಕೊರೊನಾ ಕರ್ತವ್ಯ ನಿರ್ವಹಿಸುವಾಗ ಸಾವನ್ನಪ್ಪಿದರೆ ಕೇಂದ್ರದಿಂದ 30 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿತ್ತು. ಈಗ ಅದೇ ಪರಿಹಾರ, ಲಸಿಕೆ ಪಡೆಯುವಾಗಲೂ ಅನ್ವಯಿಸುವಂತೆ ಮಾಡಿ.

ಲಸಿಕೆ ಪಡೆದ ಮೇಲೆ ಏನಾದರೂ ಆದರೆ ಪರಿಹಾರ ಮೊತ್ತ ಕೊಡಬೇಕು: ಸರ್ಕಾರಿ ನೌಕರರ ಮನವಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 9:10 PM

Share

ಬೆಂಗಳೂರು: ಕೊರೊನಾ ಲಸಿಕೆ ಹಂಚಿಕೆಗೆ ಕ್ಷಣಗಣನೆ‌ ಆರಂಭವಾದ ಬೆನ್ನಲ್ಲೇ ಹೊಸ ಪ್ರಶ್ನೆಯೊಂದು ಉದ್ಭವಿಸಿದೆ. ಕೊರೊನಾ ಕರ್ತವ್ಯ ನಿರ್ವಹಿಸುವಾಗ ಸಾವನ್ನಪ್ಪಿದರೆ ಕೇಂದ್ರದಿಂದ 30 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿತ್ತು. ಈಗ ಅದೇ ಪರಿಹಾರ, ಲಸಿಕೆ ಪಡೆಯುವಾಗಲೂ ಅನ್ವಯಿಸುವಂತೆ ಮಾಡಿ. ಲಸಿಕೆ ಪಡೆದ ಮೇಲೆ ಏನಾದರೂ ಹೆಚ್ಚು ಕಡಿಮೆಯಾದರೆ, ಹಿಂದೆ ಘೋಷಣೆ ಮಾಡಿದ ಪರಿಹಾರ ಅನ್ವಯವಾಗುತ್ತಾ ಎಂದು ಸರ್ಕಾರಿ ನೌಕರರು ಪ್ರಶ್ನೆ ಮಾಡಿದ್ದಾರೆ.

ಮೊದಲ‌ ಹಂತದಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ, ಎರಡನೇ ಹಂತದಲ್ಲಿ ಪೊಲೀಸ್ ಹಾಗೂ ಮೊದಲ ಸಾಲಿನ ಕೊರೊನಾ ವಾರಿಯರ್ಸ್​ಗೆ, ಜೊತೆಗೆ, ಸಾರಿಗೆ ನೌಕರರಿಗೂ ಲಸಿಕೆ ನೀಡಲು ನಿರ್ಧಾರ ಮಾಡಲಾಗಿತ್ತು. ಆದರೆ, ಲಸಿಕೆ ಪಡೆಯುವ ಮುನ್ನ ಮುಂಜಾಗ್ರತೆಯ ಪ್ರಶ್ನೆ ಎತ್ತಿರುವ ಸರ್ಕಾರಿ ನೌಕರರು ಹೀಗೆ ಕೇಳಿಕೊಂಡಿದ್ದಾರೆ.

ಮೊದಲ ಹಂತದಲ್ಲಿ ಕೊವಿಡ್ ವಾರಿಯರ್ಸ್​ಗಳಿಗೆ ಲಸಿಕೆ ನೀಡುತ್ತಿರುವುದು ಖುಷಿಯ ವಿಚಾರ. ಆದರೆ, ಲಸಿಕೆ ಪಡೆದ ಮೇಲೆ ಏನಾದರೂ ಆದರೆ, ಸರ್ಕಾರ ಹಿಂದೆ ಘೋಷಣೆ ಮಾಡಿದ ಪರಿಹಾರದ ಮೊತ್ತವನ್ನು ಇದಕ್ಕೂ ಅನ್ವಯಿಸುವಂತೆ ಮಾಡಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ, ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಸಿಐಟಿಯು ಸಾರಿಗೆ ಘಟಕದ ಕಾರ್ಯದರ್ಶಿ ಆನಂದ್ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ 1.68 ಲಕ್ಷ ಜನ ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡುವ ಕುರಿತು ಮಾಹಿತಿ ಇದೆ. ಲಸಿಕಾ ಪಟ್ಟಿಯಲ್ಲಿ ಹೆಸರು ಕೊಟ್ಟವರಲ್ಲಿ ಆತಂಕ ಉಂಟಾಗಿದೆ. ಪಟ್ಟಿಯಲ್ಲಿರುವ ಎಲ್ಲಾ ವಾರಿಯರ್ಸ್ ಲಸಿಕೆ ಪಡೆಯುವುದುದು ಅನುಮಾನವಾಗಿದೆ.

Corona Vaccine Adverse Effect ಲಸಿಕೆಯಿಂದ ಅಡ್ಡಪರಿಣಾಮ ಆಗಬಹುದು, ಎಚ್ಚರವಿರಲಿ: ಪ್ರಧಾನಿ ನರೇಂದ್ರ ಮೋದಿ ಕಿವಿಮಾತು

Published On - 8:17 pm, Mon, 11 January 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ