AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆದ ಮೇಲೆ ಏನಾದರೂ ಆದರೆ ಪರಿಹಾರ ಮೊತ್ತ ಕೊಡಬೇಕು: ಸರ್ಕಾರಿ ನೌಕರರ ಮನವಿ

ಕೊರೊನಾ ಕರ್ತವ್ಯ ನಿರ್ವಹಿಸುವಾಗ ಸಾವನ್ನಪ್ಪಿದರೆ ಕೇಂದ್ರದಿಂದ 30 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿತ್ತು. ಈಗ ಅದೇ ಪರಿಹಾರ, ಲಸಿಕೆ ಪಡೆಯುವಾಗಲೂ ಅನ್ವಯಿಸುವಂತೆ ಮಾಡಿ.

ಲಸಿಕೆ ಪಡೆದ ಮೇಲೆ ಏನಾದರೂ ಆದರೆ ಪರಿಹಾರ ಮೊತ್ತ ಕೊಡಬೇಕು: ಸರ್ಕಾರಿ ನೌಕರರ ಮನವಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Apr 06, 2022 | 9:10 PM

Share

ಬೆಂಗಳೂರು: ಕೊರೊನಾ ಲಸಿಕೆ ಹಂಚಿಕೆಗೆ ಕ್ಷಣಗಣನೆ‌ ಆರಂಭವಾದ ಬೆನ್ನಲ್ಲೇ ಹೊಸ ಪ್ರಶ್ನೆಯೊಂದು ಉದ್ಭವಿಸಿದೆ. ಕೊರೊನಾ ಕರ್ತವ್ಯ ನಿರ್ವಹಿಸುವಾಗ ಸಾವನ್ನಪ್ಪಿದರೆ ಕೇಂದ್ರದಿಂದ 30 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿತ್ತು. ಈಗ ಅದೇ ಪರಿಹಾರ, ಲಸಿಕೆ ಪಡೆಯುವಾಗಲೂ ಅನ್ವಯಿಸುವಂತೆ ಮಾಡಿ. ಲಸಿಕೆ ಪಡೆದ ಮೇಲೆ ಏನಾದರೂ ಹೆಚ್ಚು ಕಡಿಮೆಯಾದರೆ, ಹಿಂದೆ ಘೋಷಣೆ ಮಾಡಿದ ಪರಿಹಾರ ಅನ್ವಯವಾಗುತ್ತಾ ಎಂದು ಸರ್ಕಾರಿ ನೌಕರರು ಪ್ರಶ್ನೆ ಮಾಡಿದ್ದಾರೆ.

ಮೊದಲ‌ ಹಂತದಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ, ಎರಡನೇ ಹಂತದಲ್ಲಿ ಪೊಲೀಸ್ ಹಾಗೂ ಮೊದಲ ಸಾಲಿನ ಕೊರೊನಾ ವಾರಿಯರ್ಸ್​ಗೆ, ಜೊತೆಗೆ, ಸಾರಿಗೆ ನೌಕರರಿಗೂ ಲಸಿಕೆ ನೀಡಲು ನಿರ್ಧಾರ ಮಾಡಲಾಗಿತ್ತು. ಆದರೆ, ಲಸಿಕೆ ಪಡೆಯುವ ಮುನ್ನ ಮುಂಜಾಗ್ರತೆಯ ಪ್ರಶ್ನೆ ಎತ್ತಿರುವ ಸರ್ಕಾರಿ ನೌಕರರು ಹೀಗೆ ಕೇಳಿಕೊಂಡಿದ್ದಾರೆ.

ಮೊದಲ ಹಂತದಲ್ಲಿ ಕೊವಿಡ್ ವಾರಿಯರ್ಸ್​ಗಳಿಗೆ ಲಸಿಕೆ ನೀಡುತ್ತಿರುವುದು ಖುಷಿಯ ವಿಚಾರ. ಆದರೆ, ಲಸಿಕೆ ಪಡೆದ ಮೇಲೆ ಏನಾದರೂ ಆದರೆ, ಸರ್ಕಾರ ಹಿಂದೆ ಘೋಷಣೆ ಮಾಡಿದ ಪರಿಹಾರದ ಮೊತ್ತವನ್ನು ಇದಕ್ಕೂ ಅನ್ವಯಿಸುವಂತೆ ಮಾಡಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ, ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಸಿಐಟಿಯು ಸಾರಿಗೆ ಘಟಕದ ಕಾರ್ಯದರ್ಶಿ ಆನಂದ್ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ 1.68 ಲಕ್ಷ ಜನ ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡುವ ಕುರಿತು ಮಾಹಿತಿ ಇದೆ. ಲಸಿಕಾ ಪಟ್ಟಿಯಲ್ಲಿ ಹೆಸರು ಕೊಟ್ಟವರಲ್ಲಿ ಆತಂಕ ಉಂಟಾಗಿದೆ. ಪಟ್ಟಿಯಲ್ಲಿರುವ ಎಲ್ಲಾ ವಾರಿಯರ್ಸ್ ಲಸಿಕೆ ಪಡೆಯುವುದುದು ಅನುಮಾನವಾಗಿದೆ.

Corona Vaccine Adverse Effect ಲಸಿಕೆಯಿಂದ ಅಡ್ಡಪರಿಣಾಮ ಆಗಬಹುದು, ಎಚ್ಚರವಿರಲಿ: ಪ್ರಧಾನಿ ನರೇಂದ್ರ ಮೋದಿ ಕಿವಿಮಾತು

Published On - 8:17 pm, Mon, 11 January 21

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?