AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚಳದ ಮಧ್ಯೆ ರಾಜ್ಯಕ್ಕೆ ಗುಡ್ ನ್ಯೂಸ್: ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಕೊರೊನಾ ಲಸಿಕೆ ರವಾನೆ

ನಿನ್ನೆ 2.5 ಲಕ್ಷ ಜನರಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ. ರಾಜ್ಯದಲ್ಲಿ ಕೊರೊನಾ ಲಸಿಕೆಯ ಕೊರತೆ ಇಲ್ಲ. ರಾಜ್ಯದ ಮನವಿಯ ಮೇರೆಗೆ ಕೇಂದ್ರ ತುರ್ತಾಗಿ ಲಸಿಕೆಗಳನ್ನು ಪೂರೈಸುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ.

ಕೊರೊನಾ ಹೆಚ್ಚಳದ ಮಧ್ಯೆ ರಾಜ್ಯಕ್ಕೆ ಗುಡ್ ನ್ಯೂಸ್: ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಕೊರೊನಾ ಲಸಿಕೆ ರವಾನೆ
ಕೊರೊನಾ ಲಸಿಕೆ
TV9 Web
| Edited By: |

Updated on:Apr 05, 2022 | 12:51 PM

Share

ಬೆಂಗಳೂರು: ರಾಜ್ಯಕ್ಕೆ ತುರ್ತಾಗಿ 15.25 ಲಕ್ಷ ಡೋಸ್​ ಕೊರೊನಾ ಲಸಿಕೆಗಳು ಬರಲಿವೆ. ಈ ಪೈಕಿ 10 ಲಕ್ಷ ಡೋಸ್​ ವ್ಯಾಕ್ಸಿನ್​ಗಳು ನಾಳೆಯೇ ರಾಜ್ಯಕ್ಕೆ ತಲುಪಲಿವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ 7 ಲಕ್ಷ ಡೋಸ್​ ವ್ಯಾಕ್ಸಿನ್ ಸ್ಟಾಕ್ ಇದ್ದು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತುರ್ತಾಗಿ ಕೊರೊನಾ ಲಸಿಕೆ ರವಾನೆ ಆಗಲಿದೆ ಎಂದು ಅವರು ಹೇಳಿದ್ದಾರೆ.

ನಿನ್ನೆ 2.5 ಲಕ್ಷ ಜನರಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ. ರಾಜ್ಯದಲ್ಲಿ ಕೊರೊನಾ ಲಸಿಕೆಯ ಕೊರತೆ ಇಲ್ಲ. ರಾಜ್ಯದ ಮನವಿಯ ಮೇರೆಗೆ ಕೇಂದ್ರ ತುರ್ತಾಗಿ ಲಸಿಕೆಗಳನ್ನು ಪೂರೈಸುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ.

ಜಿಮ್ ಮೇಲಿನ ನಿರ್ಬಂಧ ಸಡಿಲಿಕೆ ಜಿಮ್​ಗಳ ಮೇಲೆ ಹೇರಿದ್ದ ಸಂಪೂರ್ಣ ನಿರ್ಬಂಧವನ್ನು ಪರಿಶ್ಕರಿಸಿ ರಾಜ್ಯ ಸರ್ಕಾರ ಇಂದು (ಏಪ್ರಿಲ್ 4) ನೂತನ ಆದೇಶ ಹೊರಡಿಸಿದೆ. ಜಿಮ್​ಗಳನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು ಎಂದು ರಾಜ್ಯ ಸರ್ಕಾರ ಈ ಮೊದಲು ಹೇಳಿತ್ತು. ಆದರೆ, ಈ ನಿಯಮಕ್ಕೆ ಜಿಮ್ ಅಸೋಸಿಯೇಷನ್​ನಿಂದ ಆಕ್ಷೇಪ ವ್ಯಕ್ತವಾಗಿತ್ತು. ಸಿನಿಮಾ ಹಾಲ್​ಗಳಿಗೆ ನೀಡಿದಂತೆ ಜಿಮ್​ಗಳಿಗೂ ಶೇಕಡಾ 50ರಷ್ಟು ಅವಕಾಶ ನೀಡಿ ಎಂದು ಜಿಮ್ ಅಸೋಸಿಯೇಷನ್ ಮನವಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಆದೇಶವನ್ನು ಇಂದು ಹೊರಡಿಸಿದೆ. ಜಿಮ್​ಗಳಲ್ಲಿ ಶೇಕಡಾ 50ರಷ್ಟು ಅವಕಾಶ ನೀಡಿ, ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಜಿಮ್​ಗಳಲ್ಲಿ ಉಪಕರಣಗಳನ್ನ ಸ್ಯಾನಿಟೈಸ್​​​ ಮಾಡಬೇಕು ಎಂದು ಜಿಮ್​ಗಳಿಗೆ ಹೊರಡಿಸಿದ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ: ಜಿಮ್ ಬಂದ್ ನಿರ್ಧಾರ ವಾಪಸ್; ಆದರೆ ಷರತ್ತುಗಳು ಅನ್ವಯ

ಇದನ್ನೂ ಓದಿ: ಯುಗಾದಿ ಆಚರಣೆ; ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಮಲೆ ಮಹದೇಶ್ವರ ದೇವಾಲಯದಲ್ಲಿ ಭಕ್ತರಿಗೆ ನಿರ್ಬಂಧ

Published On - 7:33 pm, Sun, 4 April 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್