AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Virus: ರೂಪಾಂತರಿ ಕೊರೊನಾ ವೈರಾಣು ಆತಂಕ, ಹೊರರಾಜ್ಯದಿಂದ ಬರುವವರ ಬಗ್ಗೆ ಇರಲಿ ಎಚ್ಚರ

Corona Virus Mutation: ಕೇರಳ ಮತ್ತು ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ಕಾಣಿಸಿಕೊಂಡಿದ್ದು, ಹೊಸ ತಳಿ ವೈರಾಣುವಿನ ಸಂಖ್ಯೆ ನಿಧಾನಕ್ಕೆ ಏರುತ್ತಲೇ ಇದೆ. ಅದನ್ನು ನಿಯಂತ್ರಿಸುವ ಸಲುವಾಗಿ ಮಹಾರಾಷ್ಟ್ರ ನೈಟ್​ ಕರ್ಫ್ಯೂ ಮತ್ತು ಕೊವಿಡ್​ ನಿಯಾಮವಳಿಗಳ ಮೊರೆ ಹೋಗಿದೆ.

Corona Virus: ರೂಪಾಂತರಿ ಕೊರೊನಾ ವೈರಾಣು ಆತಂಕ, ಹೊರರಾಜ್ಯದಿಂದ ಬರುವವರ ಬಗ್ಗೆ ಇರಲಿ ಎಚ್ಚರ
ಸಾಂದರ್ಭಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Feb 20, 2021 | 1:40 PM

ಕೊರೊನಾ ಸೋಂಕಿನ (Corona Virus) ಬಗ್ಗೆ ಜನರಿಗೆ ಭಯ, ಆತಂಕ ಕೊಂಚ ಕಡಿಮೆಯಾಗಿದೆ. ಲಸಿಕೆ ಬಂದ ಮೇಲಂತೂ ಕೊರೊನಾಕ್ಕೆ ಕ್ಯಾರೇ ಎನ್ನದೇ ತಿರುಗಾಡುತ್ತಿದ್ದಾರೆ. ಸರ್ಕಾರ ಲಸಿಕೆ ವಿತರಣೆ ಆರಂಭಿಸಿದ ಮೇಲೆಯಂತೂ ಕೊರೊನಾ ನಿಯಮಗಳ ಪಾಲನೆ ಬಗೆಗಿದ್ದ ಗಂಭೀರತೆ ಬಹುತೇಕ ಹೊರಟೇಹೋಗಿದೆ. ಆದರೆ, ಇದೀಗ ಜನ ಮೈಮರೆತಿರುವ ಸಂದರ್ಭದಲ್ಲೇ ಕೊರೊನಾ ತನ್ನ ಎರಡನೇ ಸುತ್ತಿನ ಆಟಕ್ಕೆ ಸಿದ್ಧವಾದಂತಿದೆ. ಈಗಾಗಲೇ ಬೇರೆ ಬೇರೆ ದೇಶಗಳಿಂದ ಬಂದ ರೂಪಾಂತರಿ ಕೊರೊನಾ ವೈರಾಣು ಹರಡುವ ಬಗ್ಗೆ ಆತಂಕ ಶುರುವಾಗಿದೆ. ಅದರ ಮಧ್ಯೆಯೇ ಕರ್ನಾಟಕದ ನೆರೆಹೊರೆಯ ರಾಜ್ಯಗಳಲ್ಲೂ ಕೊರೊನಾ ಸೋಂಕು ಮತ್ತೆ ಏರುಗತಿಯಲ್ಲಿ ಸಾಗುವ ಸೂಚನೆ ನೀಡಿದೆ. ಹೀಗಾಗಿ ನಾವು ಎಚ್ಚೆತ್ತುಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಇಂತಹ ಸಂದರ್ಭದಲ್ಲಿ ಕೇರಳ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಬರುತ್ತಿರುವವರ ಬಗ್ಗೆ ಅಧಿಕಾರಿಗಳು ಎಷ್ಟು ನಿಗಾ ವಹಿಸಿದ್ದಾರೆ. ಯಾವ ರೀತಿ ಪರೀಕ್ಷೆ ಮಾಡುತ್ತಿದ್ದಾರೆ ಎಂದು ಟಿವಿ9 ಕನ್ನಡ ರಿಯಾಲಿಟಿ ಚೆಕ್​ ನಡೆಸಿದಾಗ ಬೆಚ್ಚಿಬೀಳಿಸುವ ಕೆಲ ಅಂಶಗಳು ಪತ್ತೆಯಾಗಿವೆ.

ಕಳೆದ ವರ್ಷ ಇದೇ ಸಂದರ್ಭದಲ್ಲಿ ಕರ್ನಾಟಕ ಹಾಗೂ ಅಕ್ಕಪಕ್ಕದ ರಾಜ್ಯಗಳಲ್ಲಿ ಕೊರೊನಾ ಆರಂಭವಾಗುವ ಸೂಚನೆ ಸಿಕ್ಕು ಭಯದ ವಾತಾವರಣ ನಿರ್ಮಾಣವಾಗಿತ್ತು. ನಂತರ ಸರ್ಕಾರ ಎಚ್ಚರಿಕೆಯ ಮಾತುಗಳನ್ನಾಡುತ್ತಿದ್ದರೂ ಅದನ್ನು ಜನ ಅನುಸರಿಸುವ ಮುನ್ನವೇ ನೆರೆಹೊರೆಯ ರಾಜ್ಯದಲ್ಲಿದ್ದ ಸೋಂಕು ಕರ್ನಾಟಕಕ್ಕೆ ಕಾಲಿಟ್ಟು ಭೀಕರತೆಯನ್ನು ಪರಿಚಯಿಸಿತ್ತು. ಇದೀಗ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ಕಾಣಿಸಿಕೊಂಡಿದ್ದು, ಹೊಸ ತಳಿ ವೈರಾಣುವಿನ ಸಂಖ್ಯೆ ನಿಧಾನಕ್ಕೆ ಏರುತ್ತಲೇ ಇದೆ. ಅದನ್ನು ನಿಯಂತ್ರಿಸುವ ಸಲುವಾಗಿ ಮಹಾರಾಷ್ಟ್ರ ನೈಟ್​ ಕರ್ಫ್ಯೂ ಮತ್ತು ಕೊವಿಡ್​ ನಿಯಾಮವಳಿಗಳ ಮೊರೆ ಹೋಗಿದೆ. ಪರಿಸ್ಥಿತಿ ಹೀಗಿರುವಾಗ ನಾವು ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದರಲ್ಲಿ ಸಂದೇಹವೇ ಇಲ್ಲ.

ಆದರೆ, ಈ ಬಗ್ಗೆ ಟಿವಿ9 ರಿಯಾಲಿಟಿ ಚೆಕ್​ ನಡೆಸಿದಾಗ ಬೇರೆಡೆಯಿಂದ ಬರುತ್ತಿರುವ ಜನರ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ಕಂಡುಬಂದಿದೆ. ಬೆಳಗಾವಿ, ಮೈಸೂರು, ಬೆಂಗಳೂರು ಹೀಗೆ ರಾಜ್ಯದ ಗಡಿಭಾಗಗಳ ಜಿಲ್ಲೆಗಳಿಗೆ ಹೊರ ರಾಜ್ಯದಿಂದ ಆಗಮಿಸುತ್ತಿರುವ ಪ್ರಯಾಣಿಕರ ತಪಾಸಣೆಯ ಬಗ್ಗೆ ಯಾರೂ ಗಂಭೀರ ಕ್ರಮ ಕೈಗೊಂಡಿಲ್ಲ. ಬಸ್​ ನಿಲ್ದಾಣಗಳಲ್ಲಿ ಶಾಸ್ತ್ರಕ್ಕೆ ಟೆಸ್ಟ್ ಮಾಡಲಾಗುತ್ತಿದೆಯಾದರೂ ಮಾರ್ಗ ಮಧ್ಯೆ ಇಳಿದುಹೋಗುವವರ ಬಗ್ಗೆಯಾಗಲೀ. ಹೊಟೇಲ್​ಗಳಿಗೆ ಹೋದಾಗ ಅಲ್ಲಿ ಕೊರೊನಾ ತಗುಲುವ ಬಗ್ಗೆ ಎಚ್ಚರಿಕೆಯನ್ನಾಗಲೀ ವಹಿಸಲಾಗುತ್ತಿಲ್ಲ ಎನ್ನುವುದು ಆತಂಕಕಾರಿ ಸಂಗತಿ.

ಒಂದುವೇಳೆ ಪರರಾಜ್ಯದ ಸೋಂಕು ಕರ್ನಾಟಕಕ್ಕೆ ಕಾಲಿಟ್ಟು ಹಬ್ಬಲಾರಂಭಿಸಿದರೆ ಅದನ್ನು ತಡೆಗಟ್ಟುವುದು ಖಂಡಿತವಾಗಿಯೂ ಸವಾಲಾಗಲಿದೆ. ಅಷ್ಟೇ ಅಲ್ಲದೇ ಕೇರಳ, ಮಹಾರಾಷ್ಟ್ರ ರಾಜ್ಯಗಳು ಕರ್ಫ್ಯೂ, ಲಾಕ್​ಡೌನ್ ಕುರಿತು ಮಾತನಾಡುತ್ತಿರುವಾಗ ಕರ್ನಾಟಕ ತೀವ್ರ ನಿಗಾವಹಿಸಲೇಬೇಕಿದೆ. ಬಿಬಿಎಂಪಿ ಕೂಡಾ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರದೇ ಈಗಿಂದೀಗಲೇ ಎಚ್ಚೆತ್ತುಕೊಳ್ಳಬೇಕಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಲಾಕ್​ಡೌನ್​ ಮಾಡುವ ಚಿಂತನೆ ಇಲ್ಲ; ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ

ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು