Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆಯದವರ ದೇಹದಲ್ಲೇ ವೈರಾಣು ರೂಪಾಂತರ ಸಾಧ್ಯತೆ: ತಜ್ಞರ ಎಚ್ಚರಿಕೆ

ಡಿಸೆಂಬರ್‌ವರೆಗೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ. ಡಿಸೆಂಬರ್‌ವರೆಗೂ ಮಾಸ್ಕ್‌ ಹಾಕುವುದು ದಿನಚರಿ ಆಗಲಿ. ಲಸಿಕೆ ಹಾಕಿಸಿಕೊಂಡರೆ ಸೋಂಕಿನ ತೀವ್ರತೆ ಇರಲ್ಲ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್‌ ತಿಳಿಸಿದ್ದಾರೆ.

ಕೊರೊನಾ ಲಸಿಕೆ ಪಡೆಯದವರ ದೇಹದಲ್ಲೇ ವೈರಾಣು ರೂಪಾಂತರ ಸಾಧ್ಯತೆ: ತಜ್ಞರ ಎಚ್ಚರಿಕೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Jul 04, 2021 | 5:11 PM

ಬೆಂಗಳೂರು: ಕೊರೊನಾ ಎರಡನೇ ಅಲೇ ಕಡಿಮೆ ಆಯ್ತು ಎಂದು ನಿರ್ಲಕ್ಷ್ಯ ಬೇಡ. ಹಬ್ಬಗಳಲ್ಲಿ ಜನ ಕೊರೊನಾ ನಿಯಮ ನಿರ್ಲಕ್ಷ್ಯ ಮಾಡಬಾರದು. ಡಿಸೆಂಬರ್​ವರೆಗೂ ಮಾಸ್ಕ್​ ಧರಿಸುವುದು ಕಡ್ಡಾಯವಾಗಬೇಕು ಎಂದು ಟಿವಿ9 ವಾಹಿನಿಗೆ ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್ ಹೇಳಿಕೆ ನೀಡಿದ್ದಾರೆ. ಮಾಸ್ಕ್​ ಧರಿಸುವುದು ನಮ್ಮ ದಿನ ನಿತ್ಯದ ಕಾಯಕವಾಗಬೇಕು. ಕೊರೊನಾ ಮೂರನೇ ಅಲೆ ತಡೆಯುವುದು ಜನರ ಕೈಯಲ್ಲಿದೆ. ಮಾಸ್ಕ್​ ಧರಿಸದೇ, ಅಂತರ ಮರೆತು ನಿರ್ಲಕ್ಷ್ಯ ವಹಿಸಬಾರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್‌ವರೆಗೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ. ಡಿಸೆಂಬರ್‌ವರೆಗೂ ಮಾಸ್ಕ್‌ ಹಾಕುವುದು ದಿನಚರಿ ಆಗಲಿ. ಲಸಿಕೆ ಹಾಕಿಸಿಕೊಂಡರೆ ಸೋಂಕಿನ ತೀವ್ರತೆ ಇರಲ್ಲ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್‌ ತಿಳಿಸಿದ್ದಾರೆ.

ವ್ಯಾಕ್ಸಿನ್ ಪಡೆಯದವರಲ್ಲೇ ವೈರಸ್ ರೂಪಾಂತರ ಈ ಮಧ್ಯೆ ತಜ್ಞರು ಮತ್ತೊಂದು ವಿಚಾರ ಬಹಿರಂಗಪಡಿಸಿದ್ದಾರೆ. ಕೊರೊನಾ ವಿರುದ್ಧ ಲಸಿಕೆ ಪಡೆಯದವರಲ್ಲೇ ವೈರಸ್ ರೂಪಾಂತರ ಆಗುತ್ತಿದೆ. ರೋಗ ಬಂದು ಹೋಗಿರುವವರ ದೇಹದಲ್ಲೂ ವೈರಸ್ ರೂಪಾಂತರ ಆಗುತ್ತಿದೆ. ಈ ರೀತಿ ವೈರಸ್ ರೂಪಾಂತರಗೊಳ್ಳಲು ಹೆಚ್ಚಿನ ಅವಕಾಶ ಇರಲಿದೆ. ಸೋಂಕಿತರ ದೇಹವೇ ರೂಪಾಂತರದ ಕಾರ್ಖಾನೆ ಆಗಬಹುದು ಎಂದು ಸಾಂಕ್ರಾಮಿಕ ರೋಗಗಳ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ವಾಂಡರ್ಬಿಲ್ಟ್ ವಿಶ್ವ ವಿದ್ಯಾಲಯ ಪ್ರಾಧ್ಯಾಪಕ ಡಾ. ವಿಲಿಯಂ ಶಾಫ್ನರ್ ಹೀಗೆ ತಿಳಿಸಿದ್ದಾರೆ. ಲಸಿಕೆ ಪಡೆಯದ ಜನರು ಇರುವಲ್ಲಿ ಹೆಚ್ಚು ರೂಪಾಂತರ ಆಗಬಹುದು. ಈ ವಿಧಾನದಲ್ಲಿ ವೈರಸ್ ಹೆಚ್ಚು ರೂಪಾಂತರಗೊಳ್ಳಲು ಅವಕಾಶವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಲಸಿಕೆ ಪಡೆವರ ದೇಹದಲ್ಲಿ ವೈರಸ್ ರೂಪಾಂತರಕ್ಕೆ ಚಾನ್ಸ್ ಕಡಿಮೆ ಇರಲಿದೆ. ಭಾರತದಲ್ಲಿ ಎರಡನೇ ಅಲೆಗೆ ಕಾರಣವಾಗಿದ್ದು ಕೊರೊನಾ ರೂಪಾಂತರಿ ವೈರಸ್ ಆಗಿದೆ. ರೂಪಾಂತರಿ ಡೆಲ್ಟಾ ಹೆಚ್ಚು ಪಡಿರಿಣಾಮಕಾರಿಯಾದ ವೈರಸ್. ಈ ಮಾದರಿಯ ವೈರಾಣು ವಿಶ್ವದ 90ಕ್ಕೂ ಹೆಚ್ಚು ದೇಶಗಳಲ್ಲಿ ಕಾಣಿಸಿಕೊಂಡಿದೆ. ಸೋಂಕಿತರ ದೇಹದಲ್ಲಿಯೇ ವೈರಸ್ ರೂಪಾಂತರಕ್ಕೆ ಅವಕಾಶ ಇದೆ. ಆದರೆ, ವ್ಯಾಕ್ಸಿನ್ ಪಡೆದವರ ದೇಹದಲ್ಲಿ ವೈರಸ್ ರೂಪಾಂತರ ಪ್ರಕ್ರಿಯೆ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ. ಈ ಮೂಲಕ, ಲಸಿಕೆ‌ ಪಡೆಯುವುದು ಎಷ್ಟು ಅಗತ್ಯ ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: Delta Variant: ಡೆಲ್ಟಾ ಮಾದರಿ ಕೊರೊನಾ ಸೋಂಕಿನ ಲಕ್ಷಣಗಳು ಈ ಮೊದಲ ಕೊವಿಡ್ ರೋಗಲಕ್ಷಣಕ್ಕಿಂತ ಭಿನ್ನವಾಗಿರಬಹುದು: ಅಧ್ಯಯನ

ಅಧ್ಯಯನ ವರದಿ: ಧೂಳು ಹೆಚ್ಚಿರುವ ನಗರಗಳಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚು, ಬೆಂಗಳೂರಿಗೆ ಆತಂಕ?

ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!