Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಭಯ; ಕೊರೊನಾ ಸೋಂಕಿತ ಶಿಕ್ಷಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ

ತೀವ್ರ ಆಘಾತದಿಂದ ಬಿಕ್ಕಿಬಿಕ್ಕಿ ಅತ್ತಿದ್ದ ಶಿಕ್ಷಕ ಲೋಕೇಶ್​ಗೆ, ಹೋಮ್​ಕ್ವಾರಂಟೈನ್ ಆಗಿರಿ ಔಷಧ ಕೊಡುತ್ತೇವೆ ಅಂದಿದ್ದರೂ ಸಮಾಧಾನಗೊಂಡಿರಲಿಲ್ಲ. ಜಿಲ್ಲಾಸ್ಪತ್ರೆಯಿಂದ ಕರೆಮಾಡಿ ಶಿಕ್ಷಕ ಲೋಕೇಶ್​ಗೆ ಹೇಳಿದ್ದರು.

ಕೊವಿಡ್ ಭಯ; ಕೊರೊನಾ ಸೋಂಕಿತ ಶಿಕ್ಷಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 23, 2021 | 12:27 PM

ಮೈಸೂರು: ಕೊರೊನಾ ಸೋಂಕಿತ ಶಿಕ್ಷಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕೆ.ಆರ್. ನಗರದ ಕೋಗಿಲೂರು ಸಮೀಪ ನಡೆದಿದೆ. ಶಿಕ್ಷಕ ಲೋಕೇಶ್(35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ದಿನಗಳಿಂದ ಶಿಕ್ಷಕ ಲೋಕೇಶ್​ಗೆ ತಲೆ ನೋವು ಉಂಟಾಗಿತ್ತು. ಕೆ.ಆರ್. ನಗರ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿದ್ದರು. ಕೊವಿಡ್​ ಪಾಸಿಟಿವ್ ಬರುತ್ತಿದ್ದಂತೆ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದರು.

ತೀವ್ರ ಆಘಾತದಿಂದ ಬಿಕ್ಕಿಬಿಕ್ಕಿ ಅತ್ತಿದ್ದ ಶಿಕ್ಷಕ ಲೋಕೇಶ್​ಗೆ, ಹೋಮ್​ಕ್ವಾರಂಟೈನ್ ಆಗಿರಿ ಔಷಧ ಕೊಡುತ್ತೇವೆ ಅಂದಿದ್ದರೂ ಸಮಾಧಾನಗೊಂಡಿರಲಿಲ್ಲ. ಜಿಲ್ಲಾಸ್ಪತ್ರೆಯಿಂದ ಕರೆಮಾಡಿ ಶಿಕ್ಷಕ ಲೋಕೇಶ್​ಗೆ ಹೇಳಿದ್ದರು. ಸಮಾಧಾನಗೊಳ್ಳದ ಶಿಕ್ಷಕ ಲೋಕೇಶ್ ಪತ್ನಿ ಮನೆಗೆ ತೆರಳಿದ್ದರು. ಮನೆ ಮುಂದೆ ಬೈಕ್ ನಿಲ್ಲಿಸಿ, ಮೊಬೈಲ್​ ಬಿಟ್ಟು ತೆರಳಿದ್ದ ಶಿಕ್ಷಕ ನಾಪತ್ತೆಯಾಗಿಬಿಟ್ಟಿದ್ದರು. ಇಂದು ಕಾವೇರಿ ನದಿಯಲ್ಲಿ ಶಿಕ್ಷಕ ಕೆ.ಎಸ್. ಲೋಕೇಶ್​ ಶವ ಪತ್ತೆಯಾಗಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೇರಳಾಪುರ ಗ್ರಾಮದಲ್ಲಿ ಶವ ಪತ್ತೆಯಾಗಿದೆ. ಶಿಕ್ಷಕ ಲೋಕೇಶ್​ಗೆ ಕಳೆದ ವರ್ಷವಷ್ಟೇ ವಿವಾಹವಾಗಿತ್ತು ಎಂದು ತಿಳಿದುಬಂದಿದೆ.

ಕರ್ನಾಟಕ ಕೊರೊನಾ ವರದಿ ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31,531 ಜನರಿಗೆ ಕೊವಿಡ್ ಸೋಂಕು ಪತ್ತೆಯಾಗಿದೆ. 403 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 8,344 ಜನರಿಗೆ ಸೋಂಕು ಪತ್ತೆಯಾಗಿದ್ದು ಗಮನಾರ್ಹ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ ಬೆಂಗಳೂರು ಒಂದರಲ್ಲೇ 143 ಜನರು ಕೊವಿಡ್​ನಿಂದ  ನಿಧನರಾಗಿದ್ದಾರೆ. ಇಂದು ಮೃತಪಟ್ಟವರನ್ನೂ ಸೇರಿಸಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22,03,462ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಪೈಕಿ 15,81,457 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊವಿಡ್​ನಿಂದ ಮೃತಪಟ್ಟವರ ಸಂಖ್ಯೆ 21,837 ಕ್ಕೆ ಏರಿಕೆಯಾಗಿದೆ.

ಅತ್ಯಂತ ಪ್ರಮುಖವಾಗಿ ಉಲ್ಲೇಖಿಸಲೇಬೇಕಾದ ಸಂಗತಿಯೆಂದರೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 36,475 ಜನರು ಕೊವಿಡ್ ಮುಕ್ತರಾಗಿ ಆಸ್ಪತ್ರೆಗಳಿಂದ ಮನೆಗೆ ಹಿಂತಿರುಗಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು? ಬಾಗಲಕೋಟೆ 431, ಬಳ್ಳಾರಿ 1,729, ಬೆಳಗಾವಿ 1,762, ಬೆಂಗಳೂರು ಗ್ರಾಮಾಂತರ 1,082, ಬೆಂಗಳೂರು ನಗರ 8,344, ಬೀದರ್ 129, ಚಾಮರಾಜನಗರ 440, ಚಿಕ್ಕಬಳ್ಳಾಪುರ 55, ಚಿಕ್ಕಮಗಳೂರು 963, ಚಿತ್ರದುರ್ಗ 640, ದಕ್ಷಿಣ ಕನ್ನಡ 957, ದಾವಣಗೆರೆ 1155, ಧಾರವಾಡ 937, ಗದಗ 453, ಹಾಸನ 1,182, ಹಾವೇರಿ 184, ಕಲಬುರಗಿ 645, ಕೊಡಗು 191, ಕೋಲಾರ 569, ಕೊಪ್ಪಳ 617, ಮಂಡ್ಯ 709, ಮೈಸೂರು 1,811, ರಾಯಚೂರು 464, ರಾಮನಗರ 403, ಶಿವಮೊಗ್ಗ 643, ತುಮಕೂರು 2,138, ಉಡುಪಿ 745, ಉತ್ತರ ಕನ್ನಡ 1,087, ವಿಜಯಪುರ 330, ಯಾದಗಿರಿ ಜಿಲ್ಲೆಯಲ್ಲಿ 233 ಕೊರೊನಾ ಪ್ರಕರಣ ಪತ್ತೆಯಾಗಿದೆ.

ಇದನ್ನೂ ಓದಿ: ತಂದೆ ಕೊರೊನಾಗೆ ಬಲಿ, ತಾಯಿಗೆ ಮತ್ತೊಂದು ಕಡೆ ಚಿಕಿತ್ಸೆ; ಆಸ್ಪತ್ರೆ ಸಿಬ್ಬಂದಿಗಳಿಂದ ಹುಟ್ಟುಹಬ್ಬ ಆಚರಿಸಿಕೊಂಡ ಬಾಲಕ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಸ್ಫೋಟ; ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ

Published On - 9:18 pm, Sun, 16 May 21

ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!