AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಕೊರೊನಾ ವಾರಿಯರ್ ಸಾವು; ಬಾಗೇಪಲ್ಲಿ ಠಾಣೆಯ ಹೆಡ್ ಕಾನ್​ಸ್ಟೇಬಲ್ ಇನ್ನಿಲ್ಲ

ಮಧ್ಯರಾತ್ರಿ ಶ್ರೀನಿವಾಸ್​ಗೆ ಉಸಿರಾಟ ತೊಂದರೆ ಉಂಟಾಗಿದ್ದು, ಚಿಂತಾಮಣಿ ತಾಲೂಕು ಆಸ್ಪತ್ರೆಗೆ ಕರೆತರಲಾಗಿತ್ತು. ನಂತರ ಈ ಆಸ್ಪತ್ರೆಯಿಂದ ಹೊಸಕೋಟೆಯ ಎಂ.ವಿ.ಜೆ.ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲೇ ಶ್ರೀನಿವಾಸ್ ಕೊನೆ ಉಸಿರೆಳೆದಿದ್ದಾರೆ.

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಕೊರೊನಾ ವಾರಿಯರ್ ಸಾವು; ಬಾಗೇಪಲ್ಲಿ ಠಾಣೆಯ ಹೆಡ್ ಕಾನ್​ಸ್ಟೇಬಲ್ ಇನ್ನಿಲ್ಲ
ಶ್ರೀನಿವಾಸ್​
preethi shettigar
|

Updated on:May 01, 2021 | 5:50 PM

Share

ಚಿಕ್ಕಬಳ್ಳಾಪುರ: ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಕೊರೊನಾ ವಾರಿಯರ್ ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯ ಹೆಡ್ ಕಾನ್​ಸ್ಟೇಬಲ್ ಶ್ರೀನಿವಾಸ್ ಮೃತಪಟ್ಟಿದ್ದಾರೆ. ಮಧ್ಯರಾತ್ರಿ ಶ್ರೀನಿವಾಸ್​ಗೆ ಉಸಿರಾಟ ತೊಂದರೆ ಉಂಟಾಗಿದ್ದು, ಚಿಂತಾಮಣಿ ತಾಲೂಕು ಆಸ್ಪತ್ರೆಗೆ ಕರೆತರಲಾಗಿತ್ತು. ನಂತರ ಈ ಆಸ್ಪತ್ರೆಯಿಂದ ಹೊಸಕೋಟೆಯ ಎಂ.ವಿ.ಜೆ.ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲೇ ಶ್ರೀನಿವಾಸ್ ಕೊನೆ ಉಸಿರೆಳೆದಿದ್ದಾರೆ.

ಸರಳ ಸಜ್ಜನಿಕೆ ಸ್ವಾಭಾವದಿಂದ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದ್ದ ಶ್ರೀನಿವಾಸ್ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಬೆಳಿಗ್ಗೆಯಿಂದ ಸಂಜೆವರೆಗೂ ಲಾಕ್​ಡೌನ್ ಬಂದೋಬಸ್ತ್ ಕಾರ್ಯದಲ್ಲಿ ನಿರತರಾಗಿದ್ದ ಹೆಡ್ ಕಾನ್​ಸ್ಟೇಬಲ್ ನಿನ್ನೆ ಮಧ್ಯರಾತ್ರಿ ಹೊತ್ತಿಗೆ ಚಿರನಿದ್ರೆಗೆ ಜಾರಿದ್ದಾರೆ.

ಕೊರೊನಾ ಸೋಂಕಿನಿಂದ ಸರ್ಕಾರಿ ಶಾಲೆ ಶಿಕ್ಷಕ ಸಾವು ಬಾಗಲಕೋಟೆ ತಾಲೂಕಿನ ವೀರಾಪುರದ ಪುನರ್ವಸತಿ ಕೇಂದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ವಿ.ಕಡಿವಾಲ(49) ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಶಿಕ್ಷಕ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕೆರಕಲಮಟ್ಟಿ ಗ್ರಾಮದವರು. ಏಳು ದಿನದ ಹಿಂದೆ ಕೆ.ವಿ.ಕಡಿವಾಲ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿತ್ತು. ಮೊದಲು ಹೋಮ್ ಐಸೊಲೇಶನ್​ನಲ್ಲಿದ್ದ ಅವರು ಬಳಿಕ ಮೂರು ದಿನದ ಹಿಂದೆ ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ಶಿಕ್ಷಕ ಮೃತಪಟ್ಟಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿರುವ ಖಾಸಗಿ ಕ್ಲಿನಿಕ್ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಹೆರಿಗೆ ಸಂದರ್ಭದಲ್ಲಿ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಮೃತ ದಿವ್ಯಾ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಮೃತ ದಿವ್ಯ (28)ರಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಗಂಡು ಮಗವಿಗೆ ಜನ್ಮ ನೀಡಿದ್ದ ದಿವ್ಯಾರನ್ನು ಮನೆಗೆ ಕರೆದುಕೊಂಡು ಬರಲಾಗಿದೆ.

ಇದಾದ ನಂತರ ಮನೆಗೆ ಬಂದ ಮೇಲೆ ದಿವ್ಯಾಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ಪೋಷಕರು ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಕರುಳಿಗೆ ಹಾನಿಯಾಗಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಹೆರಿಗೆ ಸಂದರ್ಭದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ದಿವ್ಯ ಮೃತಪಟ್ಟಿದ್ದಾರೆ ಎಂದು ಸದ್ಯ ಪೋಷಕರು ಆರೋಪ ಮಾಡಿದ್ದು, ಖಾಸಗಿ ಕ್ಲಿನಿಕ್ ವಿರುದ್ಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:

ಕೊರೊನಾ ಸಂಬಂಧಿತ ಉಸಿರಾಟದ ಸಮಸ್ಯೆಯಿಂದ ಅಸುನೀಗಿದ ಬೆಂಗಳೂರಿನ ಕೊರೊನಾ ವಾರಿಯರ್

ವಿಶ್ವ ದಾಖಲೆ: ಭಾರತದಲ್ಲಿ ದಿನಕ್ಕೆ 4 ಲಕ್ಷದ ಗಡಿ ದಾಟಿದ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ, ಪ್ರತಿ ನಿಮಿಷಕ್ಕೆ ಸರಾಸರಿ 2 ಸಾವು

Published On - 5:45 pm, Sat, 1 May 21

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?