AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯೇ ಹೊಸ ಕೊವಿಡ್ ರೂಲ್ಸ್ ಜಾರಿಯಾಗುತ್ತದೆ- ಆರೋಗ್ಯ ಸಚಿವ ಸುಧಾಕರ್; ಕಲಬುರಗಿ ಜನತೆಯಲ್ಲೂ ಢವಢವ

ಲಾಕ್ ಡೌನ್ ಬಗ್ಗೆ ಬಹಳ ಪ್ರಚಾರ ಆಗ್ತಿದೆ. ಆದರೆ ಲಾಕ್ ಡೌನ್ ಒಂದೇ ಪರಿಹಾರ ಅಲ್ಲ. ಬಿಗಿಯಾದ ಕ್ರಮಗಳು ಆಗಬೇಕು. ಈ ಹಿನ್ನೆಲೆಯಲ್ಲಿ ವಿಶೇಷವಾಗಿ ಕ್ರಮ‌ ತೆಗೆದುಕೊಳ್ಳಬೇಕಿದೆ. ಕೆಲವು ಚಟುವಟಿಕೆಗಳಿಗೆ ಕಡಿವಾಣ ಹಾಕಲೇಬೇಕಾಗುತ್ತೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ನಾಳೆಯೇ ಹೊಸ ಕೊವಿಡ್ ರೂಲ್ಸ್ ಜಾರಿಯಾಗುತ್ತದೆ- ಆರೋಗ್ಯ ಸಚಿವ ಸುಧಾಕರ್; ಕಲಬುರಗಿ ಜನತೆಯಲ್ಲೂ ಢವಢವ
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on:Apr 19, 2021 | 11:33 AM

Share

ಬೆಂಗಳೂರು: ಕೊರೊನಾ ಕ್ರಿಮಿಯ ಅಟ್ಟಹಾಸದ ಎದುರು ಜನ ಮತ್ತು ಸರ್ಕಾರ ಬಸವಳಿದಂತೆ ಕಂಡುಬರುತ್ತಿದೆ. ಕ್ಷಿಪ್ರ ಕ್ರಮಗಳ ಜರೂರತ್ತು ಅತ್ಯಗತ್ಯವಾಗಿದೆ. ಏನಾದರೂ ಮಾಡಿ ಜನರನ್ನ ಕಾಪಾಡುವ ಹೊಣೆಗಾರಿಕೆ ಆಡಳಿತಾರೂಢ ಸರ್ಕಾರದ ಮೇಲಿದೆ. ಹಾಗಾಗಿಯೇ, ಕಳೆದ ವಾರದಲ್ಲಿ ಇದ್ದಕ್ಕಿದ್ದಂತೆ ಪರಿವರ್ತಿತವಾಗಿರುವ ಕೊರೊನಾ ಅಟ್ಟಹಾಸವನ್ನು ಮಟ್ಟಹಾಕಲು ಸರ್ಕಾರವೂ ಈ ವಾರದಲ್ಲಿ ಅನೇಕ ಖಡಕ್ ಕ್ರಮಗಳನ್ನು ಕೈಗೊಳ್ಳುವ ಮುನ್ಸೂಚನೆ ನೀಡುತ್ತಿದೆ. ಮತ್ತು ಆ ಹೊಸ ಕೊವಿಡ್ ರೂಲ್ಸ್ ನಾಳೆಯಿಂದಲೇ ಜಾರಿಗೆ ಬರುತ್ತವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಡ್, ಐಸಿಯು ಕೊರತೆ ಉಂಟಾಗುತ್ತೆ. ಬೆಡ್‌ಗಳು ಕೊರತೆಯಾಗದಂತೆ ಕ್ರಮಕೈಗೊಳ್ಳಬೇಕಿದೆ ಎಂಬುದನ್ನು ಒಪ್ಪಿಕೊಂಡ ಆರೋಗ್ಯ ಸಚಿವ ಸುಧಾಕರ್ ಪರಿಸ್ಥಿತಿಯನ್ನು ನಿಭಾಯಿಸಲು ಉನ್ನತಮಟ್ಟದ ಸಭೆ ಇಂದು ನಡೆಯಲಿದೆ. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರೂ ಕೂಡ ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸ್ತಾರೆ. ಸರ್ವಪಕ್ಷ ಸಭೆಗಳ ನಾಯಕರ ಜೊತೆಯೂ ಚರ್ಚೆ ಮಾಡ್ತಾರೆ. ಇವತ್ತೇ ಬೆಂಗಳೂರಿಗೆ ಸಂಬಂಧಪಟ್ಟಂತೆ ರೂಲ್ಸ್ ಆಗಬಹುದು. ಇಲ್ಲ ನಾಳೆ ಸರ್ವಪಕ್ಷ ನಾಯಕರ ಜೊತೆ ಚರ್ಚೆ ಮಾಡಿ ನಾಳೆಯೇ ರೂಲ್ಸ್ ಬರಬಹುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸೂಕ್ಷ್ಮವಾಗಿ ತಿಳಿಸಿದ್ದಾರೆ.

ಇನ್ನು, ಲಾಕ್ ಡೌನ್ ಬಗ್ಗೆ ಬಹಳ ಪ್ರಚಾರ ಆಗ್ತಿದೆ. ಆದರೆ ಲಾಕ್ ಡೌನ್ ಒಂದೇ ಪರಿಹಾರ ಅಲ್ಲ. ಬಿಗಿಯಾದ ಕ್ರಮಗಳು ಆಗಬೇಕು. ಈ ಹಿನ್ನೆಲೆಯಲ್ಲಿ ವಿಶೇಷವಾಗಿ ಕ್ರಮ‌ ತೆಗೆದುಕೊಳ್ಳಬೇಕಿದೆ. ಕೆಲವು ಚಟುವಟಿಕೆಗಳಿಗೆ ಕಡಿವಾಣ ಹಾಕಲೇಬೇಕಾಗುತ್ತೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ಬೆಂಗಳೂರು ಸಭೆ ಮೇಲೆ ಕಲಬುರಗಿ ಜಿಲ್ಲೆಯ ಜನರ ಚಿತ್ತ ಕಲಬುರಗಿ: ಬೆಂಗಳೂರು ಲಾಕ್​ಡೌನ್ ಆದ್ರೆ ಕಲಬುರಗಿಯಲ್ಲೂ ಅದೇ ನಿಯಂತ್ರಣ ಕ್ರಮಗಳು ಜಾರಿಯಾಗುವುದು ಬಹುತೇಕ ಪಕ್ಕ. ಏಕೆಂದರೆ ಬೆಂಗಳೂರು ಬಿಟ್ಟರೆ ಹೆಚ್ಚು ಕೇಸ್​ ಕಲಬುರಗಿಯಲ್ಲಿ ಪತ್ತೆಯಾಗಿವೆ. ಪ್ರತಿದಿನ 500-600 ಕೊರೊನಾ ಕೇಸ್​ ಪತ್ತೆಯಾಗುತ್ತಿವೆ.

ಈ ಹಿನ್ನೆಲೆಯಲ್ಲಿ, ಬೆಂಗಳೂರು ಸಭೆ ಮೇಲೆ ಕಲಬುರಗಿ ಜಿಲ್ಲೆಯ ಜನರ ಕಣ್ಣು ನೆಟ್ಟಿದೆ. ಬೆಂಗಳೂರು ಲಾಕ್ ಡೌನ್ ಆದ್ರೆ ಕಲಬುರಗಿಯಲ್ಲಿ ಕೂಡಾ ಲಾಕ್ ಡೌನ್ ಸಾಧ್ಯತೆಯಿದೆ. ಹೀಗಾಗಿ ಬೆಂಗಳೂರು ಸಭೆಯಲ್ಲಿ ಯಾವ ತೀರ್ಮಾನ ಆಗುತ್ತೆ ಅಂತ ಕಾಯುತ್ತಿರೋ ಅಧಿಕಾರಿಗಳು ಮತ್ತು ಜನರು ಕಲಬುರಗಿ ಜಿಲ್ಲೆಯಲ್ಲಿ ಕೂಡಾ ಟಫ್​ ರೂಲ್ಸ್ ಅವಶ್ಯಕತೆ. ಈಗಾಗಲೇ ಬೆಡ್ ಗಳು ಪುಲ್ ಆಗಿವೆ. ಸೋಂಕು ಹೀಗೆಯೇ ಹೆಚ್ಚಾದ್ರೆ, ಬೆಡ್ ಸಿಗದೇ ಜನರು ಸಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕಲಬುರಗಿ ಜಿಲ್ಲೆಯಲ್ಲಿ ಟಫ್​ ರೂಲ್ಸ್ ಕೈಗೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಬೆಂಗಳೂರು ನಿರ್ಧಾರ ನಂತರ ಈ ಬಗ್ಗೆ ಚರ್ಚೆ ನಡೆಸಲು ಜಿಲ್ಲಾ ಉನ್ನತಾಧಿಗಳು ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸೋಂಕಿತರಿಗೆ ಸಿಗ್ತಿಲ್ಲ ಬೆಡ್​ಗಳು.. ಬಿಬಿಎಂಪಿ ವೆಬ್‌ಸೈಟ್‌ನಲ್ಲೇ ಐಸಿಯು ಬೆಡ್‌ಗಳು ಫುಲ್

(coronavirus aggravates bengaluru to get new containment rules but no lock down health mnister dr k sudhakar)

Published On - 11:04 am, Mon, 19 April 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?