AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಡೆಗೆ ಹೊಸ ಮಾರ್ಗಸೂಚಿ: ಬಾರ್​, ರೆಸ್ಟೋರೆಂಟ್, ಜಿಮ್, ಸ್ವಿಮ್​ಗೆ ನಿರ್ಬಂಧ

Coronavirus New Guidelines: ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್​ಗಳು ಬಂದ್, 6ರಿಂದ 9ನೇ ತರಗತಿಯವರೆಗೆ ಶಾಲೆ ಬಂದ್, ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್ ಆಗಲಿದೆ. ಏಪ್ರಿಲ್ 20ರವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ.

ಕೊರೊನಾ ತಡೆಗೆ ಹೊಸ ಮಾರ್ಗಸೂಚಿ: ಬಾರ್​, ರೆಸ್ಟೋರೆಂಟ್, ಜಿಮ್, ಸ್ವಿಮ್​ಗೆ ನಿರ್ಬಂಧ
ಪ್ರಾತಿನಿಧಿಕ ಚಿತ್ರ (ಪಿಟಿಐ)
TV9 Web
| Updated By: ganapathi bhat|

Updated on:Apr 05, 2022 | 12:59 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ಹರಡುವ ವೇಗಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದೆ. 8 ಜಿಲ್ಲೆಗಳಲ್ಲಿ ಸಿನಿಮಾ ಹಾಲ್​, ಬಾರ್, ಪಬ್​, ಕ್ಲಬ್, ರೆಸ್ಟೊರೆಂಟ್​ಗೆ ಶೇ 50ರಷ್ಟು ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಈ ನಿಯಮಗಳು ಅನ್ವಯವಾಗಲಿದೆ.

ಅಲ್ಲದೆ, ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್​ಗಳು ಬಂದ್ ಆಗಲಿವೆ. 6ರಿಂದ 9ನೇ ತರಗತಿಯವರೆಗೆ ಶಾಲೆಗಳು ಕಾರ್ಯನಿರ್ವಹಿಸುವುದಿಲ್ಲ. ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್ ಆಗಲಿದೆ. ಏಪ್ರಿಲ್ 20ರವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ. ಉಳಿದಂತೆ ಇತರ ನಗರಗಳ ಪಬ್‌, ಬಾರ್‌ಗಳಲ್ಲಿ ಮಾಸ್ಕ್‌, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ, ಮೇಳಗಳು, ಗುಂಪು ಸೇರುವುದು ನಿಷೇಧ ಮುಂದುವರಿಯಲಿದೆ. ಸಭೆ, ಸಮಾರಂಭ ಆಚರಣೆಗೆ ಮಾರ್ಚ್ 12ರ ಸುತ್ತೋಲೆ ಅನ್ವಯವಾಗಲಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯ. ಅಂತರ ಕಾಪಾಡಿಕೊಳ್ಳುವ ವಿಚಾರದಲ್ಲಿ ಜನರು ಎಚ್ಚರ ವಹಿಸಬೇಕು. ಈ ನಿಯಮಗಳನ್ನು ಪೊಲೀಸರು, ಸ್ಥಳೀಯ ಆಡಳಿತ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಲಾಗಿದೆ. ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಅದರನ್ವಯ ಯಾವುದೇ ರೀತಿಯ ಜಾಥಾ, ಮುಷ್ಕರ, ಧರಣಿ ನಡೆಸುವುದನ್ನು ನಿಷೇಧ ಮಾಡಲಾಗಿದೆ. ಸಾರಿಗೆ ಬಸ್‌ಗಳಲ್ಲಿ ನಿಗದಿತ ಆಸನದಷ್ಟೇ ಜನರನ್ನು ಕೊಂಡೊಯ್ಯಬೇಕು. ಸಾಧ್ಯವಾದ ಮಟ್ಟಿಗೂ ಮನೆಯಿಂದಲೇ ಕಚೇರಿ ಕೆಲಸ  (ವರ್ಕ್​ಫ್ರಂ) ಸೌಲಭ್ಯ ಬಳಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ.

ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ತರಗತಿಗಳಲ್ಲಿ, ಪರೀಕ್ಷೆ ಬರೆಯುವ ಹಾಗೂ ವೈದ್ಯ ಶಿಕ್ಷಣ ತರಗತಿ ಹೊರತುಪಡಿಸಿ ಇತರ ಎಲ್ಲಾ ರೀತಿಯ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ವಸತಿ ಶಾಲೆಗಳಲ್ಲಿ 10, 11, 12ನೇ ತರಗತಿಯ ಬೋರ್ಡ್‌ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಉನ್ನತ ಶಿಕ್ಷಣ, ವೃತ್ತಿಪರ ಕೋರ್ಸ್‌ ಪರೀಕ್ಷೆ ಬರೆಯುವವರು, ವೈದ್ಯ ಶಿಕ್ಷಣ ತರಗತಿ ಹೊರತುಪಡಿಸಿ ಉಳಿದ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

ಮಾಲ್‌, ಮಾರ್ಕೆಟ್‌, ಡಿಪಾರ್ಟ್‌ಮೆಂಟ್‌ ಸ್ಟೋರ್‌ಗಳಲ್ಲಿ ಕೊವಿಡ್‌ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಮಾಲ್‌, ಮಾರ್ಕೆಟ್​ಗಳನ್ನು ಕೊವಿಡ್ ಪರಿಸ್ಥಿತಿ ಕೊನೆಗೊಳ್ಳುವವರೆಗೂ ಮುಚ್ಚಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪೂಜಾಸ್ಥಳಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಬಹುದು. ಆದರೆ ಗುಂಪುಗೂಡುವುದು, ಸಮಾರಂಭ ನಡೆಸುವಂತಿಲ್ಲ. ಅಪಾರ್ಟ್​ಮೆಂಟ್​ ಸಮುಚ್ಚಯಗಳಲ್ಲಿಯೂ ಸಾಮಾನ್ಯ ಸ್ಥಳಗಳೆಸಿದ ಜಿಮ್, ಪಾರ್ಟಿ ಹಾಲ್, ಕ್ಲಬ್ ಹೌಸ್, ಸ್ವಿಮಿಂಗ್ ಪೂಲ್ ಬಳಸುವಂತಿಲ್ಲ.

ನಿಯಮ ಉಲ್ಲಂಘಿಸಿದ್ರೆ ವಿಪತ್ತು ನಿರ್ವಹಣಾ ಕಾಯ್ದೆ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಪ್ರಸ್ತುತ ಮಾರ್ಗಸೂಚಿ ಏಪ್ರಿಲ್ 20ರವರೆಗೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

ಮದುವೆ, ಬರ್ತ್​ಡೇ, ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ ಸಭೆ ಸಮಾರಂಭಗಳಿಗೆ ಮಾರ್ಚ್‌ 12ರಂದು ವಿಧಿಸಿದ್ದ ನಿರ್ಬಂಧವನ್ನೇ ಮುಂದುವರಿಸಲು ಸರ್ಕಾರ ನಿರ್ಧರಿಸಿದೆ. ಮದುವೆಯು ತೆರೆದ ಪ್ರದೇಶದಲ್ಲಾದರೆ 500 ಜನರಿಗೆ ಅವಕಾಶವಿರುತ್ತದೆ, ಕಲ್ಯಾಣ ಮಂಟಪದಲ್ಲಾದರೆ 200 ಜನರಿಗೆ ಅವಕಾಶವಿದೆ. ಹಾಲ್, ಸಭಾಂಗಣದಲ್ಲಿ ಮದುವೆಗೆ 200 ಜನಕ್ಕೆ ಅವಕಾಶವಿದೆ. ಬರ್ತಡೇ ಪಾರ್ಟಿಯು ತೆರೆದ ಪ್ರದೇಶದಲ್ಲಿ ನಡೆಯುವಂತಿದ್ದರೆ 100  ಜನರು ಮೀರಬಾರದು. ಹಾಲ್‌, ಸಭಾಂಗಣಗಳಲ್ಲಿ ಆಗುವಂತಿದ್ದರೆ 50 ಜನರಿಗೆ ಅವಕಾಶವಿದೆ.

ಇದನ್ನೂ ಓದಿ: ಕೊರೊನಾ ನಡುವೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟ

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದೆ ಕೊರೊನಾ.. ಇದಕ್ಕೆ ಸರ್ಕಾರವೇ ಕಾರಣನಾ?

(Coronavirus Covid 19 New Guidelines by Karnataka Govt in 8 districts till April 20)

Published On - 6:32 pm, Fri, 2 April 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!