AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಇಂದು 2,298 ಕೊರೊನಾ ಕೇಸ್ ಪತ್ತೆ; ಬೆಂಗಳೂರಲ್ಲೇ 1,398 ಕೊವಿಡ್ ಪಾಸಿಟಿವ್!

ಬೆಂಗಳೂರಲ್ಲಿ ಇಂದು ಒಂದೇ ದಿನ 1,398 ಜನರಿಗೆ ಸೋಂಕು ಪತ್ತೆಯಾಗಿದೆ. ತನ್ಮೂಲಕ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,21,236ಕ್ಕೆ ಏರಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 7 ಜನರು ಸಾವನ್ನಪ್ಪಿದ್ದಾರೆ.

ಕರ್ನಾಟಕದಲ್ಲಿ ಇಂದು 2,298 ಕೊರೊನಾ ಕೇಸ್ ಪತ್ತೆ; ಬೆಂಗಳೂರಲ್ಲೇ 1,398 ಕೊವಿಡ್ ಪಾಸಿಟಿವ್!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 05, 2022 | 1:15 PM

ಬೆಂಗಳೂರು: ರಾಜ್ಯದಲ್ಲಿ ಇಂದು (ಮಾರ್ಚ್ 24) ಹೊಸದಾಗಿ 2,298 ಜನರಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,75,955ಕ್ಕೆ ಏರಿಕೆಯಾಗಿದೆ ಹಾಗೂ ಕೊರೊನಾ ಸೋಂಕಿನಿಂದ 12 ಜನರ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾಗೆ 12,461 ಜನರು ಬಲಿಯಾಗಿದ್ದಾರೆ. ಸೋಂಕಿತರ ಪೈಕಿ 9,46,589 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 16,886 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 1,398 ಜನರಿಗೆ ಸೋಂಕು ಪತ್ತೆಯಾಗಿದೆ. ತನ್ಮೂಲಕ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,21,236ಕ್ಕೆ ಏರಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 7 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾಗೆ ಇದುವರೆಗೆ 4,563 ಜನರು ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಭಾರತದಲ್ಲಿ ರೂಪಾಂತರ ಕೊರೊನಾ ವೈರಾಣು ಪತ್ತೆಯಾಗಿದೆ. ಕರ್ನಾಟಕದ ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಮಹಾರಾಷ್ಟ್ರದಲ್ಲಿ ಸಾರ್ಸ್ ಕೋವ್-2 ಎಂಬ ಕೊರೊನಾ ರೂಪಾಂತರಿ ತಳಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವೈರಸ್‌ನ ಇ484ಕ್ಯೂ, ಎಲ್‌452ಆರ್‌ ರೂಪಾಂತರಿ ಪತ್ತೆಯಾಗಿದ್ದು, ಟೆಸ್ಟಿಂಗ್ ವೇಳೆ ಶೇ. 15ರಿಂದ 20ರಷ್ಟು ಮಾದರಿಗಳಲ್ಲಿ ಈ ವೈರಾಣು ಕಾಣಿಸಿಕೊಂಡಿದೆ.

2020ರ ಕೊವಿಡ್-19 ತಳಿಗೂ ಈ ವರ್ಷದ ಕೊವಿಡ್ ತಳಿಗೂ ಹೋಲಿಕೆ ಮಾಡಲಾಗಿದೆ. ಕೊರೊನಾ ವೈರಸ್‌ನ ಇ484ಕ್ಯು ಮತ್ತು ಎಲ್‌452ಆರ್‌ ರೂಪಾಂತರಗಳು ಹೆಚ್ಚಿರುವುದು ಪತ್ತೆಯಾಗಿದೆ ಎಂದು ರೂಪಾಂತರ ವೈರಸ್ ಬಗ್ಗೆ ಆರೋಗ್ಯ ಸಚಿವಾಯ ಮಾಹಿತಿ ಹಂಚಿಕೊಂಡಿದೆ.

ಕೇರಳದ 14 ಜಿಲ್ಲೆಯ 2,032 ಮಾದರಿಗಳನ್ನು ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ಪೈಕಿ ಕೊರೊನಾ ವೈರಸ್‌ನ n440k ರೂಪಾಂತರ ತಳಿಯು 11 ಜಿಲ್ಲೆಗಳ 123 ಮಾದರಿಗಳಲ್ಲಿ ಪತ್ತೆಯಾಗಿದೆ. ಈ ರೂಪಾಂತರ ವೈರಸ್‌ ತಳಿ 16 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ. ಆದರೆ, ಕೊರೊನಾ ಪ್ರಕರಣಗಳ ದಿಢೀರ್‌ ಏರಿಕೆಗೂ ರೂಪಾಂತರ ತಳಿಗಳಿಗೂ ನೇರ ಸಂಬಂಧ ಇರೋದನ್ನು ಖಚಿತ ಪಡಿಸಲು ಸಾಧ್ಯವಿಲ್ಲ. ಇದಕ್ಕೆ ಇನ್ನಷ್ಟು ವಿಶ್ಲೇಷಣೆಗಳು ಆಗಬೇಕಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ನಗರಗಳಲ್ಲಿ ಬೆಂಗಳೂರು ಹೆಸರು! ದೇಶದಲ್ಲಿ ಅತಿಹೆಚ್ಚು ಕೊವಿಡ್-19 ಪ್ರಕರಣಗಳು ಕಂಡುಬಂದಿರುವ ಹತ್ತು ಜಿಲ್ಲೆಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಗುರುತಿಸಿದೆ. ಪುಣೆ, ನಾಗ್ಪುರ, ಮುಂಬೈ, ಥಾಣೆ, ನಾಸಿಕ್, ಔರಂಗಾಬಾದ್, ನಂದೆಡ್, ಜಾಲ್​ಗಾಂವ್, ಅಕೊಲ ಮತ್ತು ಬೆಂಗಳೂರು ನಗರ ಈ ಪಟ್ಟಿಯಲ್ಲಿದೆ. ಮಹಾರಾಷ್ಟ್ರದ ಒಂಭತ್ತು ಜಿಲ್ಲೆ ಹಾಗೂ ಕರ್ನಾಟಕ ರಾಜಧಾನಿ ಬೆಂಗಳೂರನ್ನು ಕೂಡ ಗುರುತಿಸಲಾಗಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಜಾರಿಗೊಳಿಸಿದೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ನೂತನ ನಿಯಮಾವಳಿ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ: ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಹೊಸ ನಿಯಮಾವಳಿ: ಮಾಸ್ಕ್ ಹಾಕದಿದ್ದರೆ ₹ 250 ದಂಡ!

ಇದನ್ನೂ ಓದಿ: ಭಾರತದಲ್ಲಿ ರೂಪಾಂತರಿ ಕೊರೊನಾ ಪತ್ತೆ, ಅತಿಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು

Published On - 8:08 pm, Wed, 24 March 21

ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್