AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವಾರ್ಡ್​ನಲ್ಲಿ ಹಾಡು, ನೃತ್ಯ; ಮಾನಸಿಕ ಖಿನ್ನತೆ ಕಡಿಮೆಯಾಗಿ ಸಂತಸದ ವಾತಾವರಣ ನಿರ್ಮಾಣ: ವಿಡಿಯೋ ನೋಡಿ

ಆಕ್ಸಿಜನ್ ಬೆಡ್​ನಲ್ಲಿರುವ ಕೋವಿಡ್ ಸೋಂಕಿತರು ಹಾಡು, ನೃತ್ಯಕ್ಕೆ ಸಾಥ್ ನೀಡಿದ್ದಾರೆ. ಬೆಡ್​ನಲ್ಲಿ ಕುಳಿತೇ ರೋಗಿಗಳು ಹಾಡಿಗೆ ಸಾಥ್ ನೀಡಿದ್ದಾರೆ. ರೋಗಿಗಳ ಮಾನಸಿಕ ಖಿನ್ನತೆ ಕಡಿಮೆ ಮಾಡಲು ನೃತ್ಯ ಮಾಡಿಸಲಾಗಿದೆ.

ಕೊವಿಡ್ ವಾರ್ಡ್​ನಲ್ಲಿ ಹಾಡು, ನೃತ್ಯ; ಮಾನಸಿಕ ಖಿನ್ನತೆ ಕಡಿಮೆಯಾಗಿ ಸಂತಸದ ವಾತಾವರಣ ನಿರ್ಮಾಣ: ವಿಡಿಯೋ ನೋಡಿ
ಕೊವಿಡ್​ ವಾರ್ಡ್​ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Aug 23, 2021 | 12:43 PM

Share

ತುಮಕೂರು: ನಗರದ ಕೊವಿಡ್ ವಾರ್ಡ್​ನಲ್ಲಿ ಸೋಂಕಿತರು ‘ಒಂದಾಗಿದ್ದರೆ ಎಲ್ಲಾ’ ಹಾಡಿಗೆ ನೃತ್ಯ ಮಾಡಿದ್ದಾರೆ. ಸೋಂಕಿತರು ಮನಶ್ಶಾಂತಿ ಪಡೆಯುವಂತೆ, ಧೈರ್ಯಗೆಡದಂತೆ ಮಾಡಲು ಹೀಗೆ ನೃತ್ಯ ಮಾಡಲಾಗಿದೆ. ಒಟ್ಟಾಗಿ ಹಾಡು ಹಾಡಿದ್ದರಿಂದ ಸೋಂಕಿತರಲ್ಲಿ ಉಲ್ಲಾಸ ತುಂಬಿದೆ. ವಾರ್ಡ್ ನರ್ಸ್​ ಕೂಡ ನೃತ್ಯ ಮಾಡಿದ್ದಾರೆ.

ಆಕ್ಸಿಜನ್ ಬೆಡ್​ನಲ್ಲಿರುವ ಕೋವಿಡ್ ಸೋಂಕಿತರು ಹಾಡು, ನೃತ್ಯಕ್ಕೆ ಸಾಥ್ ನೀಡಿದ್ದಾರೆ. ಬೆಡ್​ನಲ್ಲಿ ಕುಳಿತೇ ರೋಗಿಗಳು ಹಾಡಿಗೆ ಸಾಥ್ ನೀಡಿದ್ದಾರೆ. ರೋಗಿಗಳ ಮಾನಸಿಕ ಖಿನ್ನತೆ ಕಡಿಮೆ ಮಾಡಲು ನೃತ್ಯ ಮಾಡಿಸಲಾಗಿದೆ. ಇದರಿಂದ, ಜಿಲ್ಲಾಸ್ಪತ್ರೆಯ ಕೊವಿಡ್ ವಾರ್ಡ್​ನಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಇದೇ ರೀತಿಯ ಘಟನೆ ಬೆಂಗಳೂರು, ಬಸವಕಲ್ಯಾಣ ಮುಂತಾದೆಡೆ ನಡೆದಿದೆ.

ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಸಮಾಲೋಚನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಪಂಜಾಬ್​, ಕರ್ನಾಟಕ, ಬಿಹಾರ್ ಮತ್ತು ಉತ್ತಾರಖಂಡ್​ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ, ರಾಜ್ಯಗಳ ಕೊವಿಡ್​ -19 ಸ್ಥಿತಿಗತಿಯನ್ನು ಚರ್ಚಿಸಿದರು.

ಕೊವಿಡ್ 2ನೇ ಅಲೆ ಉಲ್ಬಣ ಆಗುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿಯವರು ಪ್ರತಿದಿನ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳೊಟ್ಟಿಗೆ ವರ್ಚ್ಯುವಲ್ ಆಗಿ ಸಮಾಲೋಚನೆ ನಡೆಸುತ್ತಿದ್ದಾರೆ. ಆಂಧ್ರಪ್ರದೇಶ, ಜಾರ್ಖಂಡ, ತೆಲಂಗಾಣ, ಒಡಿಶಾ ಮುಖ್ಯಮಂತ್ರಿಗಳೊಟ್ಟಿಗೆ ಈಗಾಗಲೇ ಮಾತನಾಡಿ, ಅಲ್ಲಿನ ಪರಿಸ್ಥಿತಿ ಬಗ್ಗೆ ತಿಳಿದುಕೊಂಡಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸಭೆಯಲ್ಲಿ ಪಂಜಾಬ್​ ಸಿಎಂ ಅಮರಿಂದರ್​ ಸಿಂಗ್​, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉತ್ತರಾಖಂಡ ಸಿಎಂ ತೀರಥ್​ ಸಿಂಗ್​ ರಾವತ್ ಪಾಲ್ಗೊಂಡಿದ್ದರು. ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು ತಮ್ಮ ರಾಜ್ಯದಲ್ಲಿನ ಕೊರೊನಾ ಪರಿಸ್ಥಿತಿ, ನಿಯಂತ್ರಣಕ್ಕೆ ಸರ್ಕಾರಗಳು ಕೈಗೊಂಡ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಕ್ಷಿಪ್ತವಾಗಿ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಫಲಿಸಲಿಲ್ಲ ಬಡ ಕ್ರಿಕೆಟಿಗನ ಪ್ರಾರ್ಥನೆ; ಯುವ ಕ್ರಿಕೆಟಿಗ ಚೇತನ್ ಸಕಾರಿಯಾ ತಂದೆ ಕೊರೊನಾ ಸೋಂಕಿನಿಂದ ನಿಧನ

ಆಶಾದಾಯಕ ಸುದ್ದಿ: ಈಗಲೇ ಕಠಿಣ ಕ್ರಮಗಳನ್ನು ಕೈಗೊಂಡರೆ ಮೂರನೇ ಅಲೆಯನ್ನು ತಡೆಗಟ್ಟಬಹುದು

Published On - 5:33 pm, Sun, 9 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು