ರಾಜ್ಯದಲ್ಲಿ ಮಹಾಮಾರಿ ಕೊರೊನಾಗೆ ಇಂದು ಇಬ್ಬರು ಬಲಿ! ಎಲ್ಲೆಲ್ಲಿ?

ಬೆಂಗಳೂರು: ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೆ ಇಬ್ಬರು ಬಲಿಯಾಗಿದ್ದಾರೆ. 587ನೇ ಸೋಂಕಿತ ಕಲಬುರಗಿಯ ವ್ಯಕ್ತಿ ಹಾಗೂ 651ನೇ ಸೋಂಕಿತೆ ದಾವಣಗೆರೆಯ ಮಹಿಳೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾದಿಂದ ಈವರೆಗೆ 27 ಜನರ ಸಾವಿಗೀಡಾಗಿದ್ದಾರೆ. ಇಂದು ರಾಜ್ಯದಲ್ಲಿ ಹೊಸದಾಗಿ 37 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ. ಬೀದರ್ 7, ದಾವಣಗೆರೆಯಲ್ಲಿ 22, ಮಂಡ್ಯ 2, ಕಲಬುರಗಿ 2, ಹಾವೇರಿ, ವಿಜಯಪುರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ತಲಾ ಒಂದು ಪ್ರಕರಣ […]

ರಾಜ್ಯದಲ್ಲಿ ಮಹಾಮಾರಿ ಕೊರೊನಾಗೆ ಇಂದು ಇಬ್ಬರು ಬಲಿ! ಎಲ್ಲೆಲ್ಲಿ?

Updated on: May 04, 2020 | 5:21 PM

ಬೆಂಗಳೂರು: ಕರ್ನಾಟಕದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮತ್ತೆ ಇಬ್ಬರು ಬಲಿಯಾಗಿದ್ದಾರೆ. 587ನೇ ಸೋಂಕಿತ ಕಲಬುರಗಿಯ ವ್ಯಕ್ತಿ ಹಾಗೂ 651ನೇ ಸೋಂಕಿತೆ ದಾವಣಗೆರೆಯ ಮಹಿಳೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾದಿಂದ ಈವರೆಗೆ 27 ಜನರ ಸಾವಿಗೀಡಾಗಿದ್ದಾರೆ.

ಇಂದು ರಾಜ್ಯದಲ್ಲಿ ಹೊಸದಾಗಿ 37 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ. ಬೀದರ್ 7, ದಾವಣಗೆರೆಯಲ್ಲಿ 22, ಮಂಡ್ಯ 2, ಕಲಬುರಗಿ 2, ಹಾವೇರಿ, ವಿಜಯಪುರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.

651 ಕೊರೊನಾ ಸೋಂಕಿತರ ಪೈಕಿ ಈವರೆಗೆ 321 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಇದುವರೆಗೂ 27 ಜನರು ಬಲಿಯಾಗಿದ್ದು, 303 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.