AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೇವಲ 24 ದಿನಗಳಲ್ಲಿ 1,093 ಮಂದಿ ಕೊರೊನಾ ಸೋಂಕಿಗೆ ಬಲಿ

ಸಪ್ಟೆಂಬರ್ 2020ರ ಒಂದು ತಿಂಗಳಿನಲ್ಲಿ ಕೊರೊನಾ ಮೊದಲನೇ ಅಲೆಯಲ್ಲಿ 971 ಜನರು ಬಲಿಯಾಗಿದ್ದರು. ಆದರೆ ಎರಡನೇ ಅಲೆಯಲ್ಲಿ 24 ದಿನದಲ್ಲಿ 1,093 ಜನ ಸವಿಗೀಡಾಗಿದ್ದಾರೆ.

ಬೆಂಗಳೂರಿನಲ್ಲಿ ಕೇವಲ 24 ದಿನಗಳಲ್ಲಿ 1,093 ಮಂದಿ ಕೊರೊನಾ ಸೋಂಕಿಗೆ ಬಲಿ
ಪ್ರಾತಿನಿಧಿಕ ಚಿತ್ರ
shruti hegde
|

Updated on: Apr 25, 2021 | 10:37 AM

Share

ಬೆಂಗಳೂರು: ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚಾಗುತ್ತಲೇ ಇದೆ. ದಿನ ಸಾಗುತ್ತಿದ್ದಂತೆಯೇ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚು ದಾಖಲಾಗುತ್ತಿದೆ. ದಿನೇ ದಿನೇ ಕೊರೊನಾ ವೈರಸ್​ ದಾಖಲೆ ಸೃಷ್ಟಿಸುತ್ತಿದೆ. ಕೇವಲ 24 ದಿನಗಳಲ್ಲಿ ಒಟ್ಟು 1,093 ಜನರನ್ನು ಬಲಿ ಪಡೆದಿದೆ. ಇದೇ ರೀತಿ ಮುಂದುವರೆದರೆ ಈ ತಿಂಗಳು ಏಪ್ರಿಲ್ ಅಂತ್ಯಕ್ಕೆ 2 ಸಾವಿರ ಜನ ಕೊರೊನಾ ಸೋಂಕಿಗೆ ಬಲಿಯಾಗುವಂತೆ ಅನಿಸುತ್ತಿದೆ. ಸಪ್ಟೆಂಬರ್ 2020ರ ಒಂದು ತಿಂಗಳಿನಲ್ಲಿ ಕೊರೊನಾ ಮೊದಲನೇ ಅಲೆಯಲ್ಲಿ 971 ಜನರು ಬಲಿಯಾಗಿದ್ದರು. ಆದರೆ ಎರಡನೇ ಅಲೆಯಲ್ಲಿ 24 ದಿನದಲ್ಲಿ 1,093 ಜನ ಸವಿಗೀಡಾಗಿದ್ದಾರೆ.

ಸೋಂಕಿತ ಪ್ರಕರಣ ಸಂಖ್ಯೆಯನ್ನು ನೋಡಿದಾಗ, ಮೊದಲ ಅಲೆಯಲ್ಲಿ ಒಂದು ದಿನಕ್ಕೆ ಗರಿಷ್ಟ 5,121 ಸೋಂಕಿತರು ಪತ್ತೆಯಾಗಿದ್ದರು. ಆದರೆ ಎರಡನೇ ಅಲೆಯಲ್ಲಿ ನಿತ್ಯ 17 ಸಾವಿರದಿಂದ 18 ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಹೀಗೆ ಮುಂದುವರೆದರೆ ಗರಿಷ್ಠ ಎಲ್ಲಿಗೆ ತಲುಪುತ್ತೆ ಎಂಬ ಅಂದಾಜು ಮಾಡಲು ಸಾಧ್ಯವಾಗುತ್ತಿಲ್ಲ. ಕೊರೊನಾ ಸೋಂಕು ತಗುಲಿ ಸಾವಿಗೀಡಾಗುತ್ತಿರುವ ಜನರ ಸಂಖ್ಯೆಯನ್ನು ನೋಡುತ್ತಿದ್ದರೆ ಭಯಾನಕ ಸ್ಥಿತಿ ನಿರ್ಮಾಣವಾಗುತ್ತಿದೆ.

ಮಾರ್ಕೆಟ್​ಗಳೆಲ್ಲಾ ಬಂದ್

ಬೆಳಗ್ಗೆ 10 ಗಂಟೆ ಬಳಿಕ ಸಂಪೂರ್ಣ ಲಾಕ್‌ಡೌನ್ ಹಿನ್ನೆಲೆಯಲ್ಲಿ ಶಿವಾಜಿನಗರದಲ್ಲಿ ತೆರದಿರುವ ಅಂಗಡಿಗಳನ್ನು ಪೊಲೀಸರು ಮುಚ್ಚಿಸುತ್ತಿದ್ದಾರೆ. ನಗರದ ಮಾರ್ಕೆಟ್​ಗಳನ್ನು ಮುಚ್ಚಿಸಲಾಗುತ್ತಿದೆ. ಹಾಗೆಯೇ ಶ್ರೀರಾಂಮಪುರ ಮಾರ್ಕೆಟ್​ನಲ್ಲಿ ಬೆಳಿಗ್ಗೆಯಿಂದಲೆ ಭರದಿಂದ ವ್ಯಾಪಾರ ವಹಿವಾಟಿನಲ್ಲಿ ಸಾರ್ವಜನಿಕರು ತೊಡಗಿದ್ದರು. ನಗರದಲ್ಲಿರುವ ಮಾಂಸದ ಅಂಗಡಿಗೆ ಜನರು ಮುತ್ತಿಗೆ ಹಾಕಿದ್ದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿ ಪೊಲೀಸರು ಅಂಗಡಿಯನ್ನು ಬಂದ್​ ಮಾಡಿಸಿದ್ದಾರೆ.

ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಜೋರಾಗುತ್ತಿದೆ. ಕೊರೊನಾ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್​ ಧರಿಸುವುದನ್ನು ಇನ್ನೂ ಕೆಲ ಜನರು ಗಂಭೀರವಾಗಿ ಪರಿಗಣಿಸಿಲ್ಲ. ಇದೇ ರೀತಿ ಮುಂದುವರೆದರೆ ಕೊರೊನಾ ಇನ್ನೂ ಕೈಮೀರುವುದರಲ್ಲಿ ಅನುಮಾನವೇ ಇಲ್ಲ. ಹಾಗಾಗಿ ಜನರು ಕೊರೊನಾ ನಿಯಂತ್ರಣ ಮುಂಜಾಗ್ರತೆ ಕ್ರಮದ ಬಗ್ಗೆ ಗಮನಹರಿಸಲೇ ಬೇಕಾಗಿದೆ.

ಇದನ್ನೂ ಓದಿ: ರಾಯಚೂರಿನಲ್ಲಿ 539 ಕೊರೊನಾ ಸೋಂಕಿತರು ನಾಪತ್ತೆ; ಸೋಂಕಿತರ ಪತ್ತೆಗೆ ಆರೋಗ್ಯ ಇಲಾಖೆ ಹರಸಾಹಸ

(Coronavirus Desease 1,093 people Death 24 days in Bangalore)

Follow Us
shruti hegde
shruti hegde
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ