ಸಮುದ್ರದ ಮಧ್ಯದಲ್ಲಿ ಮಂಗಳೂರು ಯುವಕ: ಕೊರೊನಾ ಭೀತಿ, ಮದುವೆ ಮುಂದೂಡಿಕೆ!

ಮಂಗಳೂರು: ಡ್ರ್ಯಾಗನ್ ನಾಡು ಚೀನಾದಲ್ಲಿ ಈಗಾಗಲೇ 700ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿರುವ ಕೊರೊನಾ ವೈರಸ್​ಗೆ ಇಡೀ ವಿಶ್ವವೇ ಬೆಚ್ಚಿಬಿದ್ದಿದೆ. ಮಾರಕ ಕೊರೊನಾ ವೈರಸ್​ನ ಭಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಕುಂಪಲ ನಿವಾಸಿ ಗೌರವ್ ಎಂಬುವನನ್ನು ಹಾಂಗ್​ ಕಾಂಗ್​ನಲ್ಲೇ ತಡೆಯಲಾಗಿದೆ. ಇದರಿಂದ ಸೋಮವಾರ ನಿಗದಿಯಾಗಿದ್ದ ಗೌರವ್ ಮದುವೆ ಸಮಾರಂಭ ಮುಂದೂಡಲಾಗಿದೆ. ಮಂಗಳೂರಿನ ಗೌರವ್ ಹಾಂಗ್​ ಕಾಂಗ್, ಸಿಂಗಾಪುರ, ಥೈವಾನ್ ನಡುವೆ ಸಂಚರಿಸುವ ಸ್ಟಾರ್ ಕ್ರೂಸ್​ ಪ್ರವಾಸಿ ಹಡಗಿನ‌ ಸಿಬ್ಬಂದಿಯಾಗಿದ್ದಾರೆ. 1,700 ಪ್ರಯಾಣಿಕರಿರುವ ಕ್ರೂಸ್ ಹಡಗಿನಲ್ಲಿ […]

ಸಮುದ್ರದ ಮಧ್ಯದಲ್ಲಿ ಮಂಗಳೂರು ಯುವಕ: ಕೊರೊನಾ ಭೀತಿ, ಮದುವೆ ಮುಂದೂಡಿಕೆ!
ಸಾಧು ಶ್ರೀನಾಥ್​

Updated on: Feb 08, 2020 | 12:58 PM

ಮಂಗಳೂರು: ಡ್ರ್ಯಾಗನ್ ನಾಡು ಚೀನಾದಲ್ಲಿ ಈಗಾಗಲೇ 700ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿರುವ ಕೊರೊನಾ ವೈರಸ್​ಗೆ ಇಡೀ ವಿಶ್ವವೇ ಬೆಚ್ಚಿಬಿದ್ದಿದೆ. ಮಾರಕ ಕೊರೊನಾ ವೈರಸ್​ನ ಭಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಕುಂಪಲ ನಿವಾಸಿ ಗೌರವ್ ಎಂಬುವನನ್ನು ಹಾಂಗ್​ ಕಾಂಗ್​ನಲ್ಲೇ ತಡೆಯಲಾಗಿದೆ. ಇದರಿಂದ ಸೋಮವಾರ ನಿಗದಿಯಾಗಿದ್ದ ಗೌರವ್ ಮದುವೆ ಸಮಾರಂಭ ಮುಂದೂಡಲಾಗಿದೆ.

ಮಂಗಳೂರಿನ ಗೌರವ್ ಹಾಂಗ್​ ಕಾಂಗ್, ಸಿಂಗಾಪುರ, ಥೈವಾನ್ ನಡುವೆ ಸಂಚರಿಸುವ ಸ್ಟಾರ್ ಕ್ರೂಸ್​ ಪ್ರವಾಸಿ ಹಡಗಿನ‌ ಸಿಬ್ಬಂದಿಯಾಗಿದ್ದಾರೆ. 1,700 ಪ್ರಯಾಣಿಕರಿರುವ ಕ್ರೂಸ್ ಹಡಗಿನಲ್ಲಿ ಹಲವರಿಗೆ ಕೊರೊನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹಡಗನ್ನು ತಟಕ್ಕೆ ತರಲು ನಿರ್ಬಂಧ ಹೇರಿ, ಸಮುದ್ರದಲ್ಲೇ ಕ್ರೂಸ್​ಗೆ ದಿಗ್ಬಂಧನ ಹಾಕಲಾಗಿದೆ. ಫೆ. 4ಕ್ಕೆ ಮಂಗಳೂರಿಗೆ ಗೌರವ್ ಆಗಮಿಸಬೇಕಿತ್ತು. ಹೀಗಾಗಿ ಫೆ. 10ಕ್ಕೆ ನಿಗದಿಯಾಗಿದ್ದ ಕುಂಪಲದ ಗೌರವ್ ಮದುವೆ ಮುಂದೂಡಿಕೆ ಮಾಡಲಾಗಿದೆ.

ಯುಕೋಮದಲ್ಲಿ ಕಾರವಾರ ಮೂಲದ ಯುವಕ:
ಕೊರೊನ ವೈರಸ್ ಎಫೆಕ್ಟ್​ನಿಂದ ಕಾರವಾರ ಮೂಲದ ಯುವಕನನ್ನು ಜಪಾನಿನ ಯುಕೋಮದಲ್ಲಿ ತಡೆಹಿಡಿಯಲಾಗಿದೆ. ಇದರಿಂದ ಕಾರವಾರದ ಅಭಿಷೇಕ್ ಮಗರ್ ಕುಟುಂಬ ಆತಂಕದಲ್ಲಿದ್ದಾರೆ. ಮಗನನ್ನು ರಕ್ಷಿಸಿ ಕರೆತರುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಅಭಿಷೇಕ್ ತಂದೆ ಮನವಿ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಪದ್ಮನಾಭನಗರ ನಿವಾಸಿಯಾಗಿದ್ದ ಅಭಿಷೇಕ್, ಕಳೆದ 3 ತಿಂಗಳಿನಿಂದ ಡೈಮಂಡ್ ಪ್ರಿನ್ಸಸ್ ಕ್ರೂಸ್ ಹಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾನೆ. ಜಪಾನ್​ನಿಂದ ಸಿಂಗಾಪುರಕ್ಕೆ ಹೋಗಿ ಕ್ರೂಸ್ ಹಡಗು ವಾಪಸ್ ಆಗುತ್ತಿತ್ತು. ಹಡಗಿನಲ್ಲಿದ್ದ 40 ಮಂದಿಗೆ ಕೊರೊನಾ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಇನ್ನಷ್ಟು ಮಂದಿಗೆ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಆತಂಕದಿಂದ ಜಪಾನಿನ ಯುಕೋಮದಲ್ಲಿ ಸಮುದ್ರದ ನಡುವೆಯೇ ಹಡಗನ್ನು ತಡೆಯಲಾಗಿದೆ.

Published On - 12:45 pm, Sat, 8 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us