AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ನಿಯಂತ್ರಣ, ಚಿಕಿತ್ಸೆಗೆಂದು ಮುಖ್ಯಮಂತ್ರಿ ಯಡಿಯೂರಪ್ಪ- ಪ್ರಧಾನಿ ಮೋದಿಗೆ 11 ಸಲಹೆ ನೀಡಿದ ಸಿದ್ದರಾಮಯ್ಯ

siddaramaiah suggestions to chief minister yediyurappa: ಇದೇ ವೇಳೆ, 70 ವರ್ಷದ ಪರಿಶ್ರಮ 7 ವರ್ಷದಲ್ಲಿ ನೆಲಸಮವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಡುಬು, ದಡಾರ, ಪೋಲಿಯೋ ಲಸಿಕೆಗೆ ದುಡ್ಡು ಕೇಳಿಲ್ಲ. ಈಗ ಕೊರೊನಾಗೆ ಏಕೆ ದುಡ್ಡು ಕೇಳುತ್ತಿದ್ದೀರೆಂದು ಪ್ರಧಾನಿ ಮೋದಿ ಮತ್ತು ಸಿಎಂ ಬಿಎಸ್‌ವೈಗೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ನಿಯಂತ್ರಣ, ಚಿಕಿತ್ಸೆಗೆಂದು ಮುಖ್ಯಮಂತ್ರಿ ಯಡಿಯೂರಪ್ಪ- ಪ್ರಧಾನಿ ಮೋದಿಗೆ 11 ಸಲಹೆ ನೀಡಿದ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on:Apr 28, 2021 | 1:27 PM

Share

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿರುವ ಕೊರೊನಾ ಸೋಂಕನ್ನು ನಿಯಂತ್ರಣ ಮಾಡಲು ಮತ್ತು ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವ ಸಂಬಂಧ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು 11 ಸಲಹೆಗಳನ್ನು ನೀಡಿದ್ದಾರೆ.

ಸಿಎಂ ಬಿಎಸ್‌ವೈಗೆ 11 ಸಲಹೆ ನೀಡಿದ ಸಿದ್ದರಾಮಯ್ಯ: ರಾಜ್ಯದ ಜನರ ರಕ್ಷಣೆಯ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಿರುವ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ. 50ರಷ್ಟು ಕೊವಿಡ್‌ಗೆ ಬೆಡ್ ವ್ಯವಸ್ಥೆ ಮಾಡಿ. ಇದಕ್ಕಾಗಿ ಶಾಲೆ, ಕಾಲೇಜು, ಹಾಸ್ಟೆಲ್, ಹೋಟೆಲ್, ಕಲ್ಯಾಣ ಮಂಟಪ, ಸಮುದಾಯ ಭವನಗಳನ್ನು ಬಳಸಿಕೊಳ್ಳಿ. ಚಿಕಿತ್ಸೆಗಾಗಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಿ. ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನ ಬಳಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಪತ್ರ ಬರೆದು ಪ್ರಧಾನಿ ಮೋದಿ ಮತ್ತು ಸಿಎಂ ಬಿಎಸ್‌ವೈಗೆ ಸಲಹೆ ನೀಡಿದ ಸಿದ್ದರಾಮಯ್ಯ: ವೆಂಟಿಲೇಟರ್, ಆಕ್ಸಿಜನ್ ಬೆಡ್‌ಗಳ ಸಂಖ್ಯೆ ಹೆಚ್ಚಿಸಬೇಕು. ಶೇಕಡಾ 30ರಿಂದ 40ರಷ್ಟು ಬೆಡ್‌ಗಳ ವ್ಯವಸ್ಥೆ ಮಾಡಬೇಕು. 4-5 ದಿನಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಕೇಂದ್ರದಿಂದ ಕೊರೊನಾ ಲಸಿಕೆಗಳನ್ನು ತರಿಸಿಕೊಳ್ಳಿ. ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿ ತರಿಸಿಕೊಳ್ಳಿ. ರಾಜ್ಯದಲ್ಲಿ ಪ್ರತಿದಿನ ಆಕ್ಸಿಜನ್, ಬೆಡ್ ಬಗ್ಗೆ ಮಾಹಿತಿ ನೀಡಿ. ರಾಜ್ಯದ ಎಲ್ಲ ಕಡೆ ಗಮನ ಕೊಡಬೇಕೆಂದು ಸಲಹೆ ನೀಡಿರುವ ಸಿದ್ದರಾಮಯ್ಯ, ಕಾಳಸಂತೆಯಲ್ಲಿ ಔಷಧ ಮಾರಾಟದ ಬಗ್ಗೆ ವರದಿಯಾಗ್ತಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪತ್ರ ಬರೆದು ಸಲಹೆ ನೀಡಿದ್ದಾರೆ.

ಶುಗರ್, ಬಿಪಿ, ಥೈರಾಯ್ಡ್, ಹೃದಯ ಸಂಬಂಧಿ ಕಾಯಿಲೆ, ಕಿಡ್ನಿ, ಲಿವರ್, ಮೆದುಳು ಸಮಸ್ಯೆಗಳಿದ್ದರೂ ಚಿಕಿತ್ಸೆ ನೀಡಬೇಕು. ಇದರ ಜತೆಗೆ ಕೊರೊನಾಗೂ ಚಿಕಿತ್ಸೆಯನ್ನು ನೀಡಬೇಕು. ಎಲ್ಲ ವಯೋಮಾನದವರಿಗೆ ಉಚಿತವಾಗಿ ಲಸಿಕೆ ನೀಡಿ ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: HD Devegowda: ಪ್ರಧಾನಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ

ಇದೇ ವೇಳೆ, 70 ವರ್ಷದ ಪರಿಶ್ರಮ 7 ವರ್ಷದಲ್ಲಿ ನೆಲಸಮವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಡುಬು, ದಡಾರ, ಪೋಲಿಯೋ ಲಸಿಕೆಗೆ ದುಡ್ಡು ಕೇಳಿಲ್ಲ. ಈಗ ಕೊರೊನಾಗೆ ಏಕೆ ದುಡ್ಡು ಕೇಳುತ್ತಿದ್ದೀರೆಂದು ಪ್ರಧಾನಿ ಮೋದಿ ಮತ್ತು ಸಿಎಂ ಬಿಎಸ್‌ವೈಗೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕೊರೊನಾ 2ನೇ ಅಲೆಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರಣವೆಂದು ಸಿದ್ದರಾಮಯ್ಯ ಸಿಡಿಮಿಡಿಯಾಗಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ವರದಿಯನ್ನು ನಿರ್ಲಕ್ಷ್ಯ ಮಾಡಿದ್ದೀರಿ. ಹಾಸಿಗೆ, ಆ್ಯಂಬುಲೆನ್ಸ್, ಔಷಧ, ಐಸಿಯು ಬೆಡ್‌ಗಳು, ಆಕ್ಸಿಜನ್ ವ್ಯವಸ್ಥೆಯ ಬಗ್ಗೆ ಅಭಿಯಾನ ನಡೆಸಬೇಕಿತ್ತು ಎಂದು ಡಾ. ದೇವಿಪ್ರಸಾದ್ ಶೆಟ್ಟಿ ವರದಿಯ ಬಗ್ಗೆ ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

siddaramaiah 11 suggestions to chief minister yediyurappa (0)

ಕೊರೊನಾ ನಿಯಂತ್ರಣ, ಚಿಕಿತ್ಸೆ: ಮುಖ್ಯಮಂತ್ರಿ ಯಡಿಯೂರಪ್ಪಗೆ 11 ಸಲಹೆ ನೀಡಿದ ಸಿದ್ದರಾಮಯ್ಯ

ಕೊರೊನಾ ನಿಯಂತ್ರಣ: ಮುಖ್ಯಮಂತ್ರಿ ಯಡಿಯೂರಪ್ಪಗೆ 11 ಸಲಹೆ ನೀಡಿದ ಸಿದ್ದರಾಮಯ್ಯ

ಕೊರೊನಾ ನಿಯಂತ್ರಣ, ಚಿಕಿತ್ಸೆ: ಪ್ರಧಾನಿ ಮೋದಿಗೆ 11 ಸಲಹೆ ನೀಡಿದ ಸಿದ್ದರಾಮಯ್ಯ

ಕೊರೊನಾ ನಿಯಂತ್ರಣ, ಚಿಕಿತ್ಸೆ: ಪ್ರಧಾನಿ ಮೋದಿಗೆ 11 ಸಲಹೆ ನೀಡಿದ ಸಿದ್ದರಾಮಯ್ಯ

ಕೊರೊನಾ ನಿಯಂತ್ರಣ, ಚಿಕಿತ್ಸೆ: ಮುಖ್ಯಮಂತ್ರಿ ಯಡಿಯೂರಪ್ಪಗೆ 11 ಸಲಹೆ ನೀಡಿದ ಸಿದ್ದರಾಮಯ್ಯ

(coronavirus former chief minister siddaramaiah writes letter to chief minister bs yediyurappa and given 11 suggestion)

ಇದನ್ನೂ ಓದಿ: ಲಾಕ್​ಡೌನ್​ ಮಧ್ಯೆಯೂ ಮುಂದುವರಿದ ಹೊಸ ಸಂಸತ್ ಭವನ ನಿರ್ಮಾಣ ಕಾಮಗಾರಿ; ಕಾರ್ಮಿಕರ ಅನುಕೂಲಕ್ಕಾಗಿ ಪೊಲೀಸರಿಗೆ ಪತ್ರ

Published On - 1:02 pm, Wed, 28 April 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಅಂಬಾನಿ ಫ್ಯಾಮಿಲಿ ಭೇಟಿ!
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಅಂಬಾನಿ ಫ್ಯಾಮಿಲಿ ಭೇಟಿ!