AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾರ್ಡನ್ ಸಿಟಿಗೂ ತಟ್ಟಿದ ಡ್ರಾಗನ್ ಭೀತಿ! ಬೆಂಗಳೂರಿಂದ ಹೋಗಿದ್ದ ತೆಲಂಗಾಣ ವ್ಯಕ್ತಿಗೆ ಸೋಂಕು

ಬೆಂಗಳೂರು: ವಿಶ್ವದಾದ್ಯಂತ ಭೀತಿ ಹುಟ್ಟಿಸಿ, ಚೀನಾದಲ್ಲಿ 3000 ಜನರನ್ನ ಬಲಿ ಪಡೆದಿರುವ ಮಹಾಮಾರಿ ಕೊರೊನಾ ವೈರಸ್ ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಹರಡಿರುವ ಶಂಕೆ ವ್ಯಕ್ತವಾಗಿದ್ದು, ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಫೆಬ್ರವರಿ 19ರಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದ ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್​ ಸೋಂಕಿರುವುದು ಪತ್ತೆಯಾಗಿದೆ. ಟೆಕ್ಕಿ 3 ದಿನಗಳ ಕಾಲ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ. ನಂತರ ಬಸ್​ನಲ್ಲಿ ಬೆಂಗಳೂರಿಂದ ಹೈದರಾಬಾದ್​ಗೆ ತೆರಳಿದ್ದಾನೆ. ಹೀಗಾಗಿ ಸೋಂಕಿತ ಟೆಕ್ಕಿ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಗುರುತಿಸಿ ಮಾಹಿತಿ […]

ಗಾರ್ಡನ್ ಸಿಟಿಗೂ ತಟ್ಟಿದ  ಡ್ರಾಗನ್ ಭೀತಿ! ಬೆಂಗಳೂರಿಂದ ಹೋಗಿದ್ದ ತೆಲಂಗಾಣ ವ್ಯಕ್ತಿಗೆ ಸೋಂಕು
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Mar 03, 2020 | 12:29 PM

Share

ಬೆಂಗಳೂರು: ವಿಶ್ವದಾದ್ಯಂತ ಭೀತಿ ಹುಟ್ಟಿಸಿ, ಚೀನಾದಲ್ಲಿ 3000 ಜನರನ್ನ ಬಲಿ ಪಡೆದಿರುವ ಮಹಾಮಾರಿ ಕೊರೊನಾ ವೈರಸ್ ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಹರಡಿರುವ ಶಂಕೆ ವ್ಯಕ್ತವಾಗಿದ್ದು, ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಫೆಬ್ರವರಿ 19ರಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದ ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್​ ಸೋಂಕಿರುವುದು ಪತ್ತೆಯಾಗಿದೆ.

ಟೆಕ್ಕಿ 3 ದಿನಗಳ ಕಾಲ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ. ನಂತರ ಬಸ್​ನಲ್ಲಿ ಬೆಂಗಳೂರಿಂದ ಹೈದರಾಬಾದ್​ಗೆ ತೆರಳಿದ್ದಾನೆ. ಹೀಗಾಗಿ ಸೋಂಕಿತ ಟೆಕ್ಕಿ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಗುರುತಿಸಿ ಮಾಹಿತಿ ಕಲೆ ಹಾಕಿದ್ದಾರೆ. ಹಾಗೂ ಅವರಿಗೂ ಸೋಂಕು ಹರಡಿದೆಯಾ ಎಂದು ಪರಿಶೀಲನೆ ನಡೆಸಲಿದ್ದಾರೆ. ಈ ಹಿನ್ನೆಲೆ ತೆಲಂಗಾಣ ಆರೋಗ್ಯ ಇಲಾಖೆ ಅಧಿಕಾರಿಗಳು ಬೆಂಗಳೂರು, ಹೈದರಾಬಾದ್​ನಲ್ಲಿ ಟೆಕ್ಕಿ ಸಂಪರ್ಕದಲ್ಲಿದ್ದ 80 ಜನರನ್ನು ಗುರುತಿಸಿರುವುದಾಗಿ ಕರ್ನಾಟಕದ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ನೀಡಿದೆ.

ಸದ್ಯ ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ಟೆಕ್ಕಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದ್ರೆ ಈಗ ಹೈದರಾಬಾದ್​ನ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಬೆಳಗ್ಗೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ಕರೆದಿದ್ದೇನೆ. ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿಗಳು, ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ಸರ್ಕಾರ ಸೋಂಕು ಹರಡದಂತೆ ಎಲ್ಲ ಕ್ರಮ ಕೈಗೊಂಡಿದೆ. ಆ ವ್ಯಕ್ತಿಯ ನಿವಾಸದಲ್ಲಿ ಸದಸ್ಯರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ.

Published On - 7:24 am, Tue, 3 March 20

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?