AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾರ್ಡನ್ ಸಿಟಿಗೂ ತಟ್ಟಿದ ಡ್ರಾಗನ್ ಭೀತಿ! ಬೆಂಗಳೂರಿಂದ ಹೋಗಿದ್ದ ತೆಲಂಗಾಣ ವ್ಯಕ್ತಿಗೆ ಸೋಂಕು

ಬೆಂಗಳೂರು: ವಿಶ್ವದಾದ್ಯಂತ ಭೀತಿ ಹುಟ್ಟಿಸಿ, ಚೀನಾದಲ್ಲಿ 3000 ಜನರನ್ನ ಬಲಿ ಪಡೆದಿರುವ ಮಹಾಮಾರಿ ಕೊರೊನಾ ವೈರಸ್ ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಹರಡಿರುವ ಶಂಕೆ ವ್ಯಕ್ತವಾಗಿದ್ದು, ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಫೆಬ್ರವರಿ 19ರಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದ ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್​ ಸೋಂಕಿರುವುದು ಪತ್ತೆಯಾಗಿದೆ. ಟೆಕ್ಕಿ 3 ದಿನಗಳ ಕಾಲ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ. ನಂತರ ಬಸ್​ನಲ್ಲಿ ಬೆಂಗಳೂರಿಂದ ಹೈದರಾಬಾದ್​ಗೆ ತೆರಳಿದ್ದಾನೆ. ಹೀಗಾಗಿ ಸೋಂಕಿತ ಟೆಕ್ಕಿ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಗುರುತಿಸಿ ಮಾಹಿತಿ […]

ಗಾರ್ಡನ್ ಸಿಟಿಗೂ ತಟ್ಟಿದ  ಡ್ರಾಗನ್ ಭೀತಿ! ಬೆಂಗಳೂರಿಂದ ಹೋಗಿದ್ದ ತೆಲಂಗಾಣ ವ್ಯಕ್ತಿಗೆ ಸೋಂಕು
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 03, 2020 | 12:29 PM

Share

ಬೆಂಗಳೂರು: ವಿಶ್ವದಾದ್ಯಂತ ಭೀತಿ ಹುಟ್ಟಿಸಿ, ಚೀನಾದಲ್ಲಿ 3000 ಜನರನ್ನ ಬಲಿ ಪಡೆದಿರುವ ಮಹಾಮಾರಿ ಕೊರೊನಾ ವೈರಸ್ ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಹರಡಿರುವ ಶಂಕೆ ವ್ಯಕ್ತವಾಗಿದ್ದು, ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಫೆಬ್ರವರಿ 19ರಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದ ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್​ ಸೋಂಕಿರುವುದು ಪತ್ತೆಯಾಗಿದೆ.

ಟೆಕ್ಕಿ 3 ದಿನಗಳ ಕಾಲ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ. ನಂತರ ಬಸ್​ನಲ್ಲಿ ಬೆಂಗಳೂರಿಂದ ಹೈದರಾಬಾದ್​ಗೆ ತೆರಳಿದ್ದಾನೆ. ಹೀಗಾಗಿ ಸೋಂಕಿತ ಟೆಕ್ಕಿ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಗುರುತಿಸಿ ಮಾಹಿತಿ ಕಲೆ ಹಾಕಿದ್ದಾರೆ. ಹಾಗೂ ಅವರಿಗೂ ಸೋಂಕು ಹರಡಿದೆಯಾ ಎಂದು ಪರಿಶೀಲನೆ ನಡೆಸಲಿದ್ದಾರೆ. ಈ ಹಿನ್ನೆಲೆ ತೆಲಂಗಾಣ ಆರೋಗ್ಯ ಇಲಾಖೆ ಅಧಿಕಾರಿಗಳು ಬೆಂಗಳೂರು, ಹೈದರಾಬಾದ್​ನಲ್ಲಿ ಟೆಕ್ಕಿ ಸಂಪರ್ಕದಲ್ಲಿದ್ದ 80 ಜನರನ್ನು ಗುರುತಿಸಿರುವುದಾಗಿ ಕರ್ನಾಟಕದ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ನೀಡಿದೆ.

ಸದ್ಯ ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ಟೆಕ್ಕಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದ್ರೆ ಈಗ ಹೈದರಾಬಾದ್​ನ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಬೆಳಗ್ಗೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ಕರೆದಿದ್ದೇನೆ. ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿಗಳು, ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ಸರ್ಕಾರ ಸೋಂಕು ಹರಡದಂತೆ ಎಲ್ಲ ಕ್ರಮ ಕೈಗೊಂಡಿದೆ. ಆ ವ್ಯಕ್ತಿಯ ನಿವಾಸದಲ್ಲಿ ಸದಸ್ಯರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ.

Published On - 7:24 am, Tue, 3 March 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್