AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರತ್ನನಿಗೆ ರಿಲೀಫ್: ಏಪ್ರಿಲ್ 7ರವರೆಗೂ ಥಿಯೇಟರ್​ ಹೌಸ್ ಫುಲ್​ಗೆ ಅವಕಾಶ

ಫಿಲ್ಮ್ ಚೇಂಬರ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ, ಏಪ್ರಿಲ್​ 7ರವರೆಗೂ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿದೆ. ಏಪ್ರಿಲ್ 7ರ ನಂತರ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡುವುದಾಗಿ ತಿಳಿಸಿದೆ.

ಯುವರತ್ನನಿಗೆ ರಿಲೀಫ್: ಏಪ್ರಿಲ್ 7ರವರೆಗೂ ಥಿಯೇಟರ್​ ಹೌಸ್ ಫುಲ್​ಗೆ ಅವಕಾಶ
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Apr 05, 2022 | 12:55 PM

Share

ಬೆಂಗಳೂರು: ಕೊರೊನಾ ನಿಯಮಾವಳಿಗಳು ಹೆಚ್ಚಾದ ಕಾರಣ ರಾಜ್ಯ ಸರ್ಕಾರ ಕಠಿಣ ಮಾರ್ಗದರ್ಶಿ ಬಿಡುಗಡೆಗೊಳಿಸಿತ್ತು. ಥಿಯೇಟರ್​ನಲ್ಲಿ ಕೇವಲ ಶೇ. 50ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಸಿನಿಮಾ ರಂಗಕ್ಕೆ ಕೊನೆಗೂ ಜಯ ಸಿಕ್ಕಿದೆ. ಸರ್ಕಾರ ಕೈಗೊಂಡ ಕಠಿಣ ನಿರ್ಧಾರವನ್ನು ಏಪ್ರಿಲ್ 7ರ ವರೆಗೆ ಸಡಿಲಿಸುವುದಾಗಿ ತಿಳಿಸಿದೆ.

ಫಿಲ್ಮ್ ಚೇಂಬರ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ, ಏಪ್ರಿಲ್​ 7ರವರೆಗೂ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿದೆ. ಏಪ್ರಿಲ್ 7ರ ನಂತರ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡುವುದಾಗಿ ತಿಳಿಸಿದೆ. ಈ ಮೂಲಕ ಸದ್ಯದ ನಿರ್ಧಾರ ಕೆಲವು ದಿನಗಳವರೆಗೆ ಸಡಿಲಿಕೆಯಾದಂತಾಗಿದೆ.

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಠಿಣ ನಿಯಮಾವಳಿಗಳನ್ನು ಹೇರಿ ರಾಜ್ಯ ಸರ್ಕಾರ ನಿನ್ನೆ (ಏಪ್ರಿಲ್ 3) ಆದೇಶ ಹೊರಡಿಸಿತ್ತು. ಅದರಂತೆ, ನಿಗದಿತ 8 ಜಿಲ್ಲೆಗಳಲ್ಲಿ ಸಿನಿಮಾ ಹಾಲ್​ಗಳಲ್ಲಿ ಕೇವಲ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅನುಮತಿ ನೀಡಬೇಕು ಎಂದು ಸೂಚನೆ ನೀಡಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಚಂದನವನದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಪುನೀತ್ ರಾಜ್​ಕುಮಾರ್ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಭರ್ತಿಗಷ್ಟೇ ಅವಕಾಶ ಹಿನ್ನೆಲೆಯಲ್ಲಿ, ನಟ ಪುನೀತ್ ರಾಜ್​ಕುಮಾರ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಿದ್ದರು. ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನೀಡುವಂತೆ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದರು. ತಜ್ಞರ ಜೊತೆ ಚರ್ಚಿಸಿ ಪರಿಶೀಲಿಸುವುದಾಗಿ ಸಿಎಂ ಭರವಸೆ ನೀಡಿದ್ದರು. ಆ ಬಳಿಕ, ಮೂರು ದಿನಗಳ ಕಾಲ ಶೇ. 100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ.

ಪುನೀತ್​ ಭೇಟಿ ವೇಳೆ ಗೃಹಸಚಿವ ಬಸವರಾಜ ಬೊಮ್ಮಾಯಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಕೆ.ಸಿ.ನಾರಾಯಣಗೌಡ, ‘ಯುವರತ್ನ’ ನಿರ್ದೇಶಕ ಸಂತೋಷ ಆನಂದ್ ರಾಮ್, ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಉಪಸ್ಥಿತರಿದ್ದರು.

ಇದನ್ನೂ ಓದಿ: ಯುವರತ್ನ ಚಿತ್ರಕ್ಕೆ ತೊಂದರೆ: ಮೌನ ಮುರಿದ ಯಶ್​, ಶಿವರಾಜ್​ಕುಮಾರ್​!

ಇದನ್ನೂ ಓದಿ: ಯುವರತ್ನ ನೋಡಬೇಕು, ಥಿಯೇಟರ್​ ಹೌಸ್​ ಫುಲ್​ ಮಾಡೋಕೆ ಅವಕಾಶ ಕೊಡಿ; ಸಿಎಂಗೆ ಮಕ್ಕಳಿಂದ ಮನವಿ

Published On - 8:41 pm, Sat, 3 April 21

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ