AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮಾಡಿದರೂ ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳ; ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನರ ಆರೋಪ

ನಿನ್ನೆಯಿಂದ ಸೋಂಕಿತರು ಮನೆ ಮತ್ತು ದೇಗುಲ ಕಟ್ಟೆಯಲ್ಲೇ ಚಿಕಿತ್ಸೆಗಾಗಿ ಕಾದು ಕುಳಿತಿದ್ದಾರೆ. ಗ್ರಾಮ ಪಂಚಾಯತಿ ಇಂದ ಹಿಡಿದು ಡಿಸಿವರೆಗೆ ಕೇಳಿದರೂ ಯಾರು ಈ ಬಗ್ಗೆ ಗಮನಕೊಡುತ್ತಿಲ್ಲ. ಸೋಂಕು ದೃಢ ಪಟ್ಟ ಎರಡು ದಿನ ಬಳಿಕ ಸೋಂಕಿತರನ್ನು ಶಿಫ್ಟ್ ಮಾಡಲು ಆಂಬ್ಯುಲೆನ್ಸ್ ಕಳಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್​ಡೌನ್​ ಮಾಡಿದರೂ ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳ; ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನರ ಆರೋಪ
ದೇವಸ್ಥಾನದ ಮುಂದೆ ಕಾಯುತ್ತಿರುವ ಸೋಂಕಿತರು
TV9 Web
| Edited By: |

Updated on: Jun 04, 2021 | 3:23 PM

Share

ಚಿತ್ರದುರ್ಗ: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿತ್ತು. ಹೀಗಾಗಿ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಲಾಕ್​ಡೌನ್ ಜಾರಿಗೆ ತಂದಿದೆ. ಲಾಕ್​ಡೌನ್​ನ ಕಾರಣದಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಣಕ್ಕೆ ಸಿಗದಂತಾಗಿದೆ. ಆದರೆ ಅಧಿಕಾರಿಗಳು ಮಾತ್ರ ಈ ಬಗ್ಗೆ ಬೇಜವಾಬ್ದಾರಿತನ ತೋರಿದ್ದು, ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಚಿತ್ರದುರ್ಗ ತಾಲೂಕಿನ ಚಿಕ್ಕ ಕಬ್ಬಿಗೆರೆ ಗ್ರಾಮದಲ್ಲಿ ಸುಮಾರು 800 ಜನರು ವಾಸಿಸುತ್ತಿದ್ದಾರೆ. ಇಲ್ಲಿನ ಅನೇಕರು ಸದ್ಯ ಶೀತ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿದ್ದಾರೆ. ಕೊವಿಡ್ ಲಕ್ಷಣ ಕಂಡು ಬಂದ ಹಿನ್ನೆಲೆ ಎರಡು ದಿನದ ಹಿಂದೆಯೇ ಗ್ರಾಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸ್ವಾಬ್ ಟೆಸ್ಟಿಂಗ್ ಮಾಡಿದೆ. 22 ಕ್ಕೂ ಹೆಚ್ಚು ಜನರಿಗೆ ಸೋಂಕು ದೃಢ ಪಟ್ಟಿದೆ. ಆದರೆ ಸೋಂಕಿತರನ್ನು ಆಸ್ಪತ್ರೆ ಅಥವಾ ಕೊವಿಡ್ ಕೇರ್ ಸೆಂಟರ್​ಗೆ ಶಿಫ್ಟ್ ಮಾಡುವಲ್ಲಿ ನಿರ್ಲಕ್ಷ ತೋರಲಾಗಿದೆ. ನಿನ್ನೆಯಿಂದ ಸೋಂಕಿತರು ಮನೆ ಮತ್ತು ದೇಗುಲ ಕಟ್ಟೆಯಲ್ಲೇ ಚಿಕಿತ್ಸೆಗಾಗಿ ಕಾದು ಕುಳಿತಿದ್ದಾರೆ. ಗ್ರಾಮ ಪಂಚಾಯತಿ ಇಂದ ಹಿಡಿದು ಡಿಸಿವರೆಗೆ ಕೇಳಿದರೂ ಯಾರು ಈ ಬಗ್ಗೆ ಗಮನಕೊಡುತ್ತಿಲ್ಲ ಎಂದು ರೈತ ಮುಖಂಡ ನಾಗರಾಜ್ ತಿಳಿಸಿದ್ದಾರೆ.

ಇನ್ನೂ ಸೋಂಕು ದೃಢ ಪಟ್ಟ ಎರಡು ದಿನ ಬಳಿಕ ಸೋಂಕಿತರನ್ನು ಶಿಫ್ಟ್ ಮಾಡಲು ಆಂಬ್ಯುಲೆನ್ಸ್ ಕಳಿಸಲಾಗಿದೆ. ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಡಿಹೆಚ್ಓ ಡಾ.ಪಾಲಾಕ್ಷ ಅವರನ್ನು ಕೇಳಿದರೆ ಈಗಾಗಲೇ ಸ್ವಾಬ್ ಟೆಸ್ಟಿಂಗ್ ಮಾಡಲಾಗಿದ್ದು, 22 ಜನರಿಗೆ ಸೋಂಕು ದೃಢಪಟ್ಟಿದೆ. ಆ ಪೈಕಿ ಶುಗರ್, ಬಿಪಿ ಸೇರಿ ಇತರೆ ರೋಗ ಇರುವವರನ್ನು ಆಸ್ಪತ್ರೆಗೆ, ಇನ್ನುಳಿದಂತೆ ಎ ಸಿಂಪ್ಟಮ್ಸ್ ಇರುವವರನ್ನು ಕೇರ್ ಸೆಂಟರ್​ಗೆ ಶಿಫ್ಟ್ ಮಾಡಲು ಕ್ರಮ ಕೈಗೊಂಡಿದ್ದೇವೆ. ಅಲ್ಲದೆ ನಮ್ಮ ಸಿಬ್ಬಂದಿ ಮೂಲಕ ಮನೆ ಮನೆ ಹೆಲ್ತ್ ಸರ್ವೇ ಸಹ ಮಾಡುತ್ತಿದ್ದೇವೆ ಎಂದು ಸಮಜಾಯಿಷಿ ನೀಡಿದ್ದಾರೆ.

ಒಟ್ಟಾರೆಯಾಗಿ ಚಿತ್ರದುರ್ಗದ ಚಿಕ್ಕ ಕಬ್ಬಿಗೆರೆ ಗ್ರಾಮದಲ್ಲಿ ಸೋಂಕಿತರ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಆಸ್ಪತ್ರೆಗೆ ಶಿಫ್ಟ್ ಮಾಡುವಲ್ಲಿ ದಿನಗಟ್ಟಲೇ ವಿಳಂಬ ಮಾಡಿದ್ದಾರೆ . ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ ಎಂದು ಜನರು ಆರೋಪಿಸಿದ್ದಾರೆ. ಹೀಗಾಗಿ ಸರ್ಕಾರ ಈ ಬಗ್ಗೆ ಗಮನ ಹರಿಸಿ ತುರ್ತು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ:

ಕೊರೊನಾ ವೈರಸ್ ಹುಟ್ಟಿನ ಬಗ್ಗೆ ಮತ್ತೊಮ್ಮೆ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂದ ಡಬ್ಲ್ಯೂಹೆಚ್​ಒ, ಹಾಲೆಂಡ್​ನಲ್ಲಿ ನಡೆಯಲಿದೆ ಟೆಸ್ಟಿಂಗ್

ಪಾಳುಬಿದ್ದ ಚಿತ್ರದುರ್ಗ ಜಿಲ್ಲಾಸ್ಪತ್ರೆ ಉದ್ಯಾನವನ; ಮೂಗು ಮುಚ್ಚಿಕೊಂಡೇ ಆಸ್ಪತ್ರೆಗೆ ಬರುತ್ತಿರುವ ರೋಗಿಗಳು

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ