AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಸಿದ್ದೇಶ್ವರ ಬಡಾವಣೆಯ 62 ಜನರಿಗೆ ಕೊರೊನಾ; ಕೊವಿಡ್ ಕೇರ್ ಸೆಂಟರ್​ಗೆ ಹೋಗಲು ಸೋಂಕಿತರ ಹಿಂದೇಟು

ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ 15 ದಿನದಲ್ಲಿ 60 ಜನ ಸಾವನ್ನಪ್ಪಿದ್ದಾರೆ. ಕೊವಿಡ್ ಸೋಂಕಿನಿಂದ 6 ಜನರು ಮೃತಪಟ್ಟಿದ್ದಾರೆ. ಉಳಿದವರು ಮನೆಯಲ್ಲೇ ಮೃತಪಟ್ಟಿದ್ದರಿಂದ ಆತಂಕ ಎದುರಾಗಿದೆ. ಗ್ರಾಮದಲ್ಲಿ ಪ್ರತಿದಿನ 2ರಿಂದ 4 ಜನ ಸಾಯುತ್ತಿದ್ದಾರೆ.

ಧಾರವಾಡ ಸಿದ್ದೇಶ್ವರ ಬಡಾವಣೆಯ 62 ಜನರಿಗೆ ಕೊರೊನಾ; ಕೊವಿಡ್ ಕೇರ್ ಸೆಂಟರ್​ಗೆ ಹೋಗಲು ಸೋಂಕಿತರ ಹಿಂದೇಟು
ಕೊರೊನಾ ವೈರಸ್
sandhya thejappa
|

Updated on: May 23, 2021 | 1:04 PM

Share

ಧಾರವಾಡ: ಸಿದ್ದೇಶ್ವರ ಬಡಾವಣೆಯ 62 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. 62 ಸೋಂಕಿತರ ಪೈಕಿ 20 ಸೋಂಕಿತರು ಕೊವಿಡ್ ಕೇರ್ ಸೆಂಟರ್​ಗೆ ದಾಖಲಾಗಿದ್ದಾರೆ. ಆದರೆ ಉಳಿದ 42 ಸೋಂಕಿತರು ಕೊವಿಡ್ ಕೇರ್ ಸೆಂಟರ್​ಗೆ ಹೋಗಲು ಹಿಂದೇಟು ಹಾಕಿದ್ದಾರೆ. ಅಲ್ಲದೇ ಸಿದ್ದೇಶ್ವರ ಬಡಾವಣೆಯಲ್ಲಿ ಮಾಸ್ಕ್ ಧರಿಸದೆ ಜನ ನಿರ್ಲಕ್ಷ್ಯ ತೋರುತ್ತಿದ್ದಾರೆ. ಸಿದ್ದೇಶ್ವರ ಬಡಾವಣೆ ಕೊರೊನಾ ಹಾಟ್ ಸ್ಪಾಟ್ ಆಗಿದ್ದರೂ ಸ್ಥಳೀಯರು ಮಾತ್ರ ಎಚ್ಚೆತ್ತುಕೊಂಡಿಲ್ಲ.

15 ದಿನದಲ್ಲಿ 60 ಜನರ ಸಾವು ಬೆಳಗಾವಿ: ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ 15 ದಿನದಲ್ಲಿ 60 ಜನ ಸಾವನ್ನಪ್ಪಿದ್ದಾರೆ. ಕೊವಿಡ್ ಸೋಂಕಿನಿಂದ 6 ಜನರು ಮೃತಪಟ್ಟಿದ್ದಾರೆ. ಉಳಿದವರು ಮನೆಯಲ್ಲೇ ಮೃತಪಟ್ಟಿದ್ದರಿಂದ ಆತಂಕ ಎದುರಾಗಿದೆ. ಗ್ರಾಮದಲ್ಲಿ ಪ್ರತಿದಿನ 2ರಿಂದ 4 ಜನ ಸಾಯುತ್ತಿದ್ದಾರೆ. ತುಕ್ಕಾನಟ್ಟಿ ಗ್ರಾಮದ ಬಹುತೇಕರಿಗೆ ಜ್ವರ, ನೆಗಡಿ, ಕೆಮ್ಮಿದೆ. ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಆದರೆ ವೈದ್ಯರಿಲ್ಲ. ನಮ್ಮ ಪಾಲಿಗೆ ಸರ್ಕಾರ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಆರೋಗ್ಯ ಇಲಾಖೆ, ಜಿಲ್ಲಾಡಳಿತದ ವಿರುದ್ಧವೂ ಕಿಡಿ ಕಾರಿದ್ದಾರೆ.

ಗ್ರಾಮದಲ್ಲಿ ಜನ ಸಾಯುತ್ತಿದ್ದರು ಜಿಲ್ಲಾಡಳಿತ ತಲೆ ಕೆಡಿಸಿಕೊಂಡಿಲ್ಲ. ಕೇವಲ ಸಭೆ ಮಾಡಿದ್ದಾರೆ ಹೊರತು ಅಧಿಕಾರಿಗಳು ಕೊರೊನಾ ತಡೆಗೆ ಯಾವುದೇ ಪ್ಲ್ಯಾನ್ ಮಾಡಿಲ್ಲ. ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇದೆ. ಆದರೆ ವೈದ್ಯರಿಲ್ಲ. ಗ್ರಾಮದಲ್ಲಿ ಜನ ಸಾಯುತ್ತಿದ್ದರು ಯಾರು ಕೂಡ ಬಂದು ನಮ್ಮ ಗೋಳು ಕೇಳುತ್ತಿಲ್ಲ. ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಮುಖಂಡರು ಮಾತ್ರ ಗ್ರಾಮದಲ್ಲಿ ಜಾಗೃತಿ ಮಾಡಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ

40 ಮೃತ ಸೋಂಕಿತರ ಅಂತ್ಯಸಂಸ್ಕಾರ ಮಾಡಿದ ಬಾಗಲಕೋಟೆ ಪಿಎಫ್​ಐ ತಂಡ; ಸಮಾಜಮುಖಿ ಕಾರ್ಯಕ್ಕೆ ಜನರಿಂದ ಮೆಚ್ಚುಗೆ

12 ವರ್ಷ ಹಿರಿಯ ಮಹಿಳೆ ಜತೆಗಿನ ಪ್ರೀತಿ ಬಗ್ಗೆ ಬಾಯಿ ಬಿಟ್ಟ ಅರ್ಜುನ್​ ಕಪೂರ್​; ಬೇರೆ ಕಾರಣಕ್ಕೆ ತಂದೆ ಬೋನಿ ಕಪೂರ್​ ಕಣ್ಣೀರು

(Coronavirus infection is confirmed in 62 people in Siddheshwar at Dharwad)

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ