AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕು ಉಲ್ಬಣ: ಮಂಡ್ಯ ಜಿಲ್ಲೆಯಲ್ಲಿ ಜ 19ರವರೆಗೆ ನಿಷೇಧಾಜ್ಞೆ, ಬೆಳಗಾವಿಯಲ್ಲಿ ಪ್ರಸಿದ್ಧ ದೇಗುಲಗಳಿಗೆ ಪ್ರವೇಶ ನಿರ್ಬಂಧ

ಒಮಿಕ್ರಾನ್ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ 9 ಪ್ರಮುಖ ದೇಗುಲಗಳ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

ಕೊರೊನಾ ಸೋಂಕು ಉಲ್ಬಣ: ಮಂಡ್ಯ ಜಿಲ್ಲೆಯಲ್ಲಿ ಜ 19ರವರೆಗೆ ನಿಷೇಧಾಜ್ಞೆ, ಬೆಳಗಾವಿಯಲ್ಲಿ ಪ್ರಸಿದ್ಧ ದೇಗುಲಗಳಿಗೆ ಪ್ರವೇಶ ನಿರ್ಬಂಧ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 06, 2022 | 9:45 PM

Share

ಮಂಡ್ಯ: ಕೊರೊನಾ ಸೋಂಕು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಜನವರಿ 19ವರೆಗೆ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಸ್.ಅಶ್ವತಿ ಆದೇಶ ಹೊರಡಿಸಿದ್ದಾರೆ. ಮದುವೆ, ನಿಶ್ಚಿತಾರ್ಥ, ಬೀಗರ ಔತಣಕ್ಕೆ 100 ಜನರಿಗೆ ಅವಕಾಶವಿದೆ. ಅಂತ್ಯಸಂಸ್ಕಾರ, ತಿಥಿ ಕಾರ್ಯದಲ್ಲಿ ಪಾಲ್ಗೊಳ್ಳಲು 30 ಜನರಿಗೆ ಅವಕಾಶವಿದೆ. ದೇಗುಲಗಳಲ್ಲಿ ದೇವರ ದರ್ಶನಕ್ಕೆ ಒಂದು ಬಾರಿ 50 ಜನರಿಗೆ ಅವಕಾಶ ನೀಡಲಾಗಿದೆ. ಪಬ್, ಬಾರ್ ಮತ್ತು ರೆಸ್ಟೊರೆಂಟ್, ಹೋಟೆಲ್, ಚಿತ್ರಮಂದಿರ, ಸಭಾಂಗಣ, ಈಜುಕೊಳ, ಜಿಮ್​, ಕ್ರೀಡಾಂಗಣಗಳು ಮತ್ತು ವಾಣಿಜ್ಯ ಸಂಕೀರ್ಣಗಳಿಗೆ ಅವುಗಳ ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ.

ವಿಶೇಷ ದಿನಗಳಲ್ಲಿಯೂ ದೇಗುಲ, ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧಗಳಿಂದ ವಿನಾಯ್ತಿ ಇರುವುದಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಜನವರಿ 19ರವರೆಗೆ ಎಲ್ಲ ಜಾತ್ರೆ, ದನದ ಜಾತ್ರೆ, ಗ್ರಾಮ ದೇವತೆ ಹಬ್ಬ, ಕೊಂಡೋತ್ಸವ, ಹಾಗೂ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ವಿಧಿಸಲಾಗಿದೆ. ಬೃಹತ್ ಱಲಿ, ಧರಣಿ, ಪ್ರತಿಭಟನೆಗಳಿಗೂ ಅವಕಾಶ ಇರುವುದಿಲ್ಲ. ನೈಟ್ ಕರ್ಫ್ಯೂ ವೇಳೆ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ಇರುತ್ತದೆ.

ಆಹಾರ, ದಿನಸಿ ಅಂಗಡಿ, ಹಣ್ಣು, ತರಕಾರಿ ಅಂಗಡಿ, ಮೀನು, ಮಾಂಸ, ಹಾಲಿನ ಬೂತ್, ಬೀದಿ ವ್ಯಾಪಾರಕ್ಕೆ ಕೊವಿಡ್ ಶಿಷ್ಟಾಚಾರಗಳ ಅನ್ವಯ ಅವಕಾಶ ಇರುತ್ತದೆ. ಹೊಟೆಲ್, ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​​ಗಷ್ಟೇ ಅವಕಾಶವಿದ್ದು ಉಳಿದೆಲ್ಲ ಸೇವೆಗಳಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆದೇಶ ಉಲ್ಲಂಘಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಬೆಳಗಾವಿ: ದೇಗುಲ ದರ್ಶನಕ್ಕೆ ನಿರ್ಬಂಧ ಬೆಳಗಾವಿಗೆ ಹೊಂದಿಕೊಂಡಂತೆ ಇರುವ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ, ಒಮಿಕ್ರಾನ್ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ 9 ಪ್ರಮುಖ ದೇಗುಲಗಳ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಜಾತ್ರೆ, ಉತ್ಸವ ನಡೆಸಬಾರದೆಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೆ ದೇವಸ್ಥಾನಗಳಲ್ಲಿ ಸಾರ್ವಜನಿಕರಿಗೆ ದೇವರ ದರ್ಶನ ಸಿಗುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ರೇಣುಕಾ ಯಲ್ಲಮ್ಮ, ಚಿಂಚಲಿ ಮಾಯಮ್ಮ, ಬಡಕುಂದ್ರಿ ಹೊಳೆಮ್ಮ‌ ಸೇರಿದಂತೆ 9 ದೇವಸ್ಥಾನಗಳ ಸಾರ್ವಜನಿಕ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. ದೇವಸ್ಥಾನಗಳ ಮುಂದಿನ‌ ಅಂಗಡಿ ಮುಂಗಟ್ಟು ಸಹ ಬಂದ್ ಮಾಡುವಂತೆ ಅದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Covid 19 Karnataka Update: ಕರ್ನಾಟಕದಲ್ಲಿ 5000 ದಾಟಿದ ಸೋಂಕಿತರ ಸಂಖ್ಯೆ, ಪಾಸಿಟಿವಿಟಿ ಪ್ರಮಾಣವೂ ಹೆಚ್ಚಾಯ್ತು ಇದನ್ನೂ ಓದಿ: ಭಾರತದಲ್ಲಿ 24ಗಂಟೆಯಲ್ಲಿ 90,928 ಕೊರೊನಾ ಕೇಸ್​ಗಳು ದಾಖಲು, ನಿನ್ನೆಗಿಂತಲೂ ಶೇ.56ರಷ್ಟು ಹೆಚ್ಚು; 325 ಮಂದಿ ಸಾವು

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ