AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 3104 ಮಂದಿಗೆ ಕೊರೊನಾ ಸೋಂಕು, 92 ಸಾವು

ಬೆಂಗಳೂರು ಮಹಾನಗರದಲ್ಲಿ 715 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 15 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,59,595ಕ್ಕೆ ಏರಿಕೆಯಾಗಿದೆ.

Covid 19 Karnataka Update: ಕರ್ನಾಟಕದಲ್ಲಿ 3104 ಮಂದಿಗೆ ಕೊರೊನಾ ಸೋಂಕು, 92 ಸಾವು
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: Jul 06, 2021 | 9:00 PM

Share

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಒಂದೇ ದಿನ 3104 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 92 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಮಹಾನಗರದಲ್ಲಿ 715 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 15 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,59,595ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ 35,526 ಜನರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 27,84,030 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 40,016 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,16,896ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 15 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 15,690 ಜನರು ಮೃತಪಟ್ಟಿದ್ದಾರೆ. 12,16,896 ಸೋಂಕಿತರ ಪೈಕಿ 11,86,973 ಜನರು ಗುಣಮುಖರಾಗಿದ್ದಾರೆ. 14,232 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಕರ್ನಾಟಕದಲ್ಲಿ ಹೊಸದಾಗಿ 3104 ಜನರಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 715 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬಾಗಲಕೋಟೆ 5, ಬಳ್ಳಾರಿ 24, ಬೆಳಗಾವಿ 157, ಬೆಂಗಳೂರು ಗ್ರಾಮಾಂತರ 67, ಬೀದರ್ 6, ಚಾಮರಾಜನಗರ 68, ಚಿಕ್ಕಬಳ್ಳಾಪುರ 29, ಚಿಕ್ಕಮಗಳೂರು 109, ಚಿತ್ರದುರ್ಗ 64, ದಕ್ಷಿಣ ಕನ್ನಡ 216, ದಾವಣಗೆರೆ 60, ಧಾರವಾಡ 29, ಗದಗ 7, ಹಾಸನ 270, ಹಾವೇರಿ 14, ಕಲಬುರಗಿ 15, ಕೊಡಗು 140, ಕೋಲಾರ 108, ಕೊಪ್ಪಳ 15, ಮಂಡ್ಯ 113, ಮೈಸೂರು 389, ರಾಯಚೂರು 4, ರಾಮನಗರ 32, ಶಿವಮೊಗ್ಗ 119, ತುಮಕೂರು 138, ಉಡುಪಿ 114, ಉತ್ತರ ಕನ್ನಡ 72, ವಿಜಯಪುರ 2, ಯಾದಗಿರಿ 3 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ 92 ಜನರ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 15 ಜನರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 13, ಮೈಸೂರು 8, ಧಾರವಾಡ, ಕೋಲಾರದಲ್ಲಿ ತಲಾ 7, ಬಳ್ಳಾರಿ 6, ಬೆಳಗಾವಿ 5, ಚಾಮರಾಜನಗರ, ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ, ತುಮಕೂರು ಜಿಲ್ಲೆಯಲ್ಲಿ ತಲಾ 3, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು, ಬೀದರ್, ರಾಮನಗರ, ಚಿತ್ರದುರ್ಗ, ಉಡುಪಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 35,526 ಜನರು ಮೃತಪಟ್ಟಿದ್ದಾರೆ.

(Coronavirus Karnataka Numbers 3104 Infected 92 Deaths Due to Covid)

ಇದನ್ನೂ ಓದಿ: Covid 19 Vaccination: ‘ದೇಶದಲ್ಲಿ ಮೂರನೇ ಅಲೆ ತಡೆಗಟ್ಟಬೇಕೆಂದರೆ ಒಂದು ದಿನದಲ್ಲಿ 86 ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡಲೇಬೇಕು..’

ಇದನ್ನೂ ಓದಿ: ಕೊವಿಡ್ ಲೆಕ್ಕಿಸದೆ ಪ್ರಯಾಣಿಸುತ್ತಿದ್ದಾರೆ ಜನ; ಎರಡನೇ ಅಲೆ ಇನ್ನೂ ಮುಗಿದಿಲ್ಲ ಎಂಬ ಎಚ್ಚರವಿರಲಿ: ಆರೋಗ್ಯ ಸಚಿವಾಲಯ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!