Covid 19 Karnataka Update: ಕರ್ನಾಟಕದಲ್ಲಿ 7810 ಮಂದಿಗೆ ಕೊರೊನಾ ಸೋಂಕು, 125 ಸಾವು
ಬೆಂಗಳೂರಲ್ಲಿ ಒಂದೇ ದಿನ 1,348 ಜನರಿಗೆ ಸೋಂಕು ದೃಢಪಟ್ಟಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 27,65,134ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 8 ಸಾವಿರಕ್ಕೂ ಕಡಿಮೆಯಾಗಿದೆ. ಒಂದೇ ದಿನ ಒಟ್ಟು 7,810 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 125 ಜನರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಒಂದೇ ದಿನ 1,348 ಜನರಿಗೆ ಸೋಂಕು ದೃಢಪಟ್ಟಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 27,65,134ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 25,51,365 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,80,835 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 32,913 ಜನರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 1348 ಜನರಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,96,688ಕ್ಕೆ ಏರಿಕೆಯಾಗಿದೆ. 11,96,688 ಸೋಂಕಿತರ ಪೈಕಿ 10,95,385 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿನಿಂದ 23 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ನಗರದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 15,307ಕ್ಕೆ ಏರಿಕೆಯಾಗಿದೆ. 85,995 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಕರ್ನಾಟಕದಲ್ಲಿ ಇಂದು ಹೊಸದಾಗಿ 7,810 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 1348 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಳಿದಂತೆ ಬಾಗಲಕೋಟೆ 62, ಬಳ್ಳಾರಿ 141, ಬೆಳಗಾವಿ 266, ಬೆಂಗಳೂರು ಗ್ರಾಮಾಂತರ 154, ಬೀದರ್ 7, ಚಾಮರಾಜನಗರ 129, ಚಿಕ್ಕಬಳ್ಳಾಪುರ 141, ಚಿಕ್ಕಮಗಳೂರು 223, ಚಿತ್ರದುರ್ಗ 128, ದಕ್ಷಿಣ ಕನ್ನಡ 434, ದಾವಣಗೆರೆ 391, ಧಾರವಾಡ 148, ಗದಗ 73, ಹಾಸನ 581, ಹಾವೇರಿ 64, ಕಲಬುರಗಿ 24, ಕೊಡಗು 125, ಕೋಲಾರ 164, ಕೊಪ್ಪಳ 76, ಮಂಡ್ಯ 467, ಮೈಸೂರು 1251, ರಾಯಚೂರು 30, ರಾಮನಗರ 47, ಶಿವಮೊಗ್ಗ 393, ತುಮಕೂರು 352, ಉಡುಪಿ 223, ಉತ್ತರ ಕನ್ನಡ 250, ವಿಜಯಪುರ 96, ಯಾದಗಿರಿ 22 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಟ್ಟು 125 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು, ಅಂದರೆ 23 ಜನರು ಸಾವನ್ನಪ್ಪಿದ್ದಾರೆ. ಮೈಸೂರು 25, ಬೆಳಗಾವಿ, ಧಾರವಾಡ 9, ಬಳ್ಳಾರಿ, ಹಾಸನ, ದಾವಣಗೆರೆ 7, ಚಿಕ್ಕಮಗಳೂರು, ಉಡುಪಿ 4, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ 3, ಕೋಲಾರ, ರಾಯಚೂರು, ವಿಜಯಪುರ 2, ಗದಗ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 32913 ಜನರು ಮೃತಪಟ್ಟಿದ್ದಾರೆ.
ಇಂದಿನ 13/06/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/MNSXqAy0zO @CMofKarnataka @drashwathcn@GovindKarjol @LaxmanSavadi @mla_sudhakar @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi pic.twitter.com/c0BdrIp6C8
— K’taka Health Dept (@DHFWKA) June 13, 2021
(Coronavirus Karnataka numbers 7810 infected on june 13)
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ಘೋಷಣೆಯಾಗುತ್ತಿದ್ದಂತೆ ಲಸಿಕೆ ಖರೀದಿಯಿಂದ ಹಿಂದೆ ಸರಿದ ರಾಜ್ಯ ಸರ್ಕಾರ
Published On - 8:14 pm, Sun, 13 June 21